‘ಈ ಹಿಂದೆ, ಶಾಸನಸಭೆ ಸದಸ್ಯರೊಬ್ಬರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಸಂದರ್ಭಗಳಲ್ಲಿ ಅವರನ್ನು ಸಾರ್ವಜನಿಕ ಜೀವನದಿಂದ ದೂರ ಇಡಲಾಗುತ್ತಿತ್ತು. ಆದರೆ, ಈಗ ಶಿಕ್ಷೆಗೆ ಗುರಿಯಾಗಿರುವ ಭ್ರಷ್ಟರನ್ನು ಸಾರ್ವಜನಿಕವಾಗಿ ವೈಭವೀಕರಿಸುವುದನ್ನು ನೋಡುತ್ತಿದ್ದೇವೆ. ಇದು ಕಾರ್ಯಾಂಗ, ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಧಕ್ಕೆ ತರುವಂಥದು’ ಎಂದು ಮೋದಿ ಹೇಳಿದರು.