<p><strong>ನವದೆಹಲಿ:</strong> ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿಹಾಕಿದೆ.</p>.<p>‘ಆಯಾ ರಾಜ್ಯಗಳ ಹೈಕೋರ್ಟ್ಗಳ ಮೂಲಕ ಇಂಥ ಸಮಿತಿಗಳನ್ನು ರಚಿಸಿ, ತನಿಖೆ ನಡೆಸಬಹುದು’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿದಾರರಿಗೆ ಸೂಚಿಸಿದೆ.</p>.<p>‘ತೆಲಂಗಾಣದಲ್ಲಿ ನಡೆದ ಅತ್ಯಾಚಾರ ಆರೋಪಿಗಳ ಎನ್ಕೌಂಟರ್ನ ತನಿಖೆಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಣೆಯಿಂದ ಸಮಿತಿಯನ್ನು ರಚಿಸಿತ್ತು. ಅದರಂತೆ ಈ ವಿಚಾರದಲ್ಲೂ ಸಮಿತಿ ರಚಿಸಬೇಕು’ ಎಂದು ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದ್ದರು.</p>.<p>‘ಪೊಲೀಸರು ವಿವೇಚನಾರಹಿತರಾಗಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ, ಗಾಯಗೊಂಡವರಿಗೆ ವೈದ್ಯಕೀಯ ನೆರವೂ ಲಭಿಸಲಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಳ್ಳಿಹಾಕಿ, ‘ಅಲೀಗಡ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಮಾತ್ರ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಅದೂ ಅಲ್ಲದೆ ಅರ್ಜಿದಾರರು ಆರೋಪಿಸಿರುವಂತೆ ಅವರು ಪೊಲೀಸರ ಜೊತೆಗಿನ ಸಂಘರ್ಷದಲ್ಲಿ ಗಾಯಗೊಂಡಿರಲಿಲ್ಲ’ ಎಂದರು.</p>.<p>ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಕಡೆಗಣಿಸಲಾಗಿತ್ತು ಎಂಬ ಅರ್ಜಿದಾರರ ವಾದವನ್ನೂ ಮೆಹ್ತಾ ತಳ್ಳಿಹಾಕಿದರು.</p>.<p>‘ತನಿಖೆಗೆ ಸಮಿತಿ ರಚಿಸಬೇಕೇ ಬೇಡವೇ ಎಂಬ ತೀರ್ಮಾನವನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ತೆಗೆದುಕೊಳ್ಳಬಲ್ಲರು ಎಂಬ ವಿಶ್ವಾಸ ನಮಗಿದೆ. ವಿದ್ಯಾರ್ಥಿಗಳ ಬಂಧನ, ಗಾಯಗೊಂಡವರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲೂ ನಿರ್ದೇಶನಗಳನ್ನು ನೀಡುವ ಅಧಿಕಾರ ಹೈಕೋರ್ಟ್ಗಳಿಗಿದೆ’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿಹಾಕಿದೆ.</p>.<p>‘ಆಯಾ ರಾಜ್ಯಗಳ ಹೈಕೋರ್ಟ್ಗಳ ಮೂಲಕ ಇಂಥ ಸಮಿತಿಗಳನ್ನು ರಚಿಸಿ, ತನಿಖೆ ನಡೆಸಬಹುದು’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿದಾರರಿಗೆ ಸೂಚಿಸಿದೆ.</p>.<p>‘ತೆಲಂಗಾಣದಲ್ಲಿ ನಡೆದ ಅತ್ಯಾಚಾರ ಆರೋಪಿಗಳ ಎನ್ಕೌಂಟರ್ನ ತನಿಖೆಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಣೆಯಿಂದ ಸಮಿತಿಯನ್ನು ರಚಿಸಿತ್ತು. ಅದರಂತೆ ಈ ವಿಚಾರದಲ್ಲೂ ಸಮಿತಿ ರಚಿಸಬೇಕು’ ಎಂದು ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದ್ದರು.</p>.<p>‘ಪೊಲೀಸರು ವಿವೇಚನಾರಹಿತರಾಗಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ, ಗಾಯಗೊಂಡವರಿಗೆ ವೈದ್ಯಕೀಯ ನೆರವೂ ಲಭಿಸಲಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಳ್ಳಿಹಾಕಿ, ‘ಅಲೀಗಡ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಮಾತ್ರ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಅದೂ ಅಲ್ಲದೆ ಅರ್ಜಿದಾರರು ಆರೋಪಿಸಿರುವಂತೆ ಅವರು ಪೊಲೀಸರ ಜೊತೆಗಿನ ಸಂಘರ್ಷದಲ್ಲಿ ಗಾಯಗೊಂಡಿರಲಿಲ್ಲ’ ಎಂದರು.</p>.<p>ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಕಡೆಗಣಿಸಲಾಗಿತ್ತು ಎಂಬ ಅರ್ಜಿದಾರರ ವಾದವನ್ನೂ ಮೆಹ್ತಾ ತಳ್ಳಿಹಾಕಿದರು.</p>.<p>‘ತನಿಖೆಗೆ ಸಮಿತಿ ರಚಿಸಬೇಕೇ ಬೇಡವೇ ಎಂಬ ತೀರ್ಮಾನವನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ತೆಗೆದುಕೊಳ್ಳಬಲ್ಲರು ಎಂಬ ವಿಶ್ವಾಸ ನಮಗಿದೆ. ವಿದ್ಯಾರ್ಥಿಗಳ ಬಂಧನ, ಗಾಯಗೊಂಡವರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲೂ ನಿರ್ದೇಶನಗಳನ್ನು ನೀಡುವ ಅಧಿಕಾರ ಹೈಕೋರ್ಟ್ಗಳಿಗಿದೆ’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>