ಧವಲೀಕರ್ಅವರಿಗೆ ಮುಖ್ಯಮಂತ್ರಿ ಜವಾಬ್ದಾರಿ?
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಜತೆ ಮಾತನಾಡಿದ್ದಾರೆ ಎಂದು ಮೂಲಗಳು ಹೇಳಿವೆ.ಪರ್ರೀಕರ್ ಅವರ ಜವಾಬ್ದಾರಿಯನ್ನು ತಾತ್ಕಾಲಿಕವಾಗಿ ನಿರ್ವಹಿಸುವ ಹೊಣೆಯನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ.ಇದಕ್ಕಾಗಿ ಬಿಜೆಪಿ ವೀಕ್ಷಕವಿಜಯ್ ಪುರಾಣಿಕ್ ಮತ್ತು ಸಂಯೋಜಕ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಸೋಮವಾರ ಗೋವಾಗೆ ಕಳಿಸಲು ಬಿಜೆಪಿ ತೀರ್ಮಾನಿಸಿದೆ.ಅದೇ ಪೇಳೆ ಪಕ್ಷದ ಹಿರಿಯ ಕಾರ್ಯಕಾರೀ ಸದಸ್ಯರು ಮುಂದಿನ ಚರ್ಚೆಗಾಗಿ ಗೋವಾಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.