<p><strong>ಪಣಜಿ</strong>: ಮಹದಾಯಿ ನದಿ ತಿರುವು ಯೋಜನೆ ವಿವಾದವನ್ನು ಬಗೆಹರಿಸುವ ಸಂಬಂಧ ಶೀಘ್ರವೇ ‘ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ’ವನ್ನು ರಚಿಸುವಂತೆ ಗೋವಾ ಸರ್ಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ.</p>.<p>ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಸಚಿವ ಶಾ ಅವರನ್ನು ಬುಧವಾರ ಭೇಟಿ ಮಾಡಿ, ಈ ಮನವಿ ಮಾಡಿದೆ. ಶಾ ಅವರನ್ನು ಭೇಟಿ ಮಾಡಿದ ನಂತರ ಈ ಬಗ್ಗೆ ಸಾವಂತ್ ಅವರು ಟ್ವೀಟ್ ಮಾಡಿದ್ದಾರೆ.</p>.<p>ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸುವ ಸಂಬಂಧ ಕರ್ನಾಟಕ ಸರ್ಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗವು ಒಪ್ಪಿಗೆ ನೀಡಿರುವ ಬಗ್ಗೆಯೂ ನಿಯೋಗ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಕೇಂದ್ರ ಸಚಿವ ಶ್ರೀಪಾದ್ ನಾಯ್ಕ, ರಾಜ್ಯಸಭಾ ಸದಸ್ಯ ವಿನಯ ತೆಂಡುಲ್ಕರ್, ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್, ಅರಣ್ಯ ಸಚಿವ ವಿಶ್ವಜಿತ್ ರಾಣೆ, ಸ್ಪೀಕರ್ ರಮೇಶ್ ತಾವಡಕರ್ ನಿಯೋಗದಲ್ಲಿದ್ದರು.</p>.<p><strong>‘ಮಹದಾಯಿ: ಶೀಘ್ರ ಪರಿಹಾರ’<br />ಪಣಜಿ</strong>: ಮಹದಾಯಿ ನದಿ ತಿರುವು ಯೋಜನೆ ವಿವಾದಕ್ಕೆ ಶೀಘ್ರವೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಗುರುವಾರ ಹೇಳಿದ್ದಾರೆ.</p>.<p>‘ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗವು ನನ್ನನ್ನು ದೆಹಲಿಯಲ್ಲಿ ನನ್ನ ನಿವಾಸದಲ್ಲಿ ಭೇಟಿ ಮಾಡಿತು. ಮಹದಾಯಿ ನದಿ ತಿರುವು ಯೋಜನೆ ಕುರಿತು ಈ ವೇಳೆ ಚರ್ಚೆ ನಡೆಸಿದೆವು. ಈ ವಿವಾದಕ್ಕೆ ಶೀಘ್ರವೇ ಪರಿಹಾರ ಕಂಡುಹಿಡಿಯುವ ವಿಶ್ವಾಸ ಹೊಂದಿರುವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ</strong>: ಮಹದಾಯಿ ನದಿ ತಿರುವು ಯೋಜನೆ ವಿವಾದವನ್ನು ಬಗೆಹರಿಸುವ ಸಂಬಂಧ ಶೀಘ್ರವೇ ‘ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ’ವನ್ನು ರಚಿಸುವಂತೆ ಗೋವಾ ಸರ್ಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ.</p>.<p>ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಸಚಿವ ಶಾ ಅವರನ್ನು ಬುಧವಾರ ಭೇಟಿ ಮಾಡಿ, ಈ ಮನವಿ ಮಾಡಿದೆ. ಶಾ ಅವರನ್ನು ಭೇಟಿ ಮಾಡಿದ ನಂತರ ಈ ಬಗ್ಗೆ ಸಾವಂತ್ ಅವರು ಟ್ವೀಟ್ ಮಾಡಿದ್ದಾರೆ.</p>.<p>ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸುವ ಸಂಬಂಧ ಕರ್ನಾಟಕ ಸರ್ಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗವು ಒಪ್ಪಿಗೆ ನೀಡಿರುವ ಬಗ್ಗೆಯೂ ನಿಯೋಗ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಕೇಂದ್ರ ಸಚಿವ ಶ್ರೀಪಾದ್ ನಾಯ್ಕ, ರಾಜ್ಯಸಭಾ ಸದಸ್ಯ ವಿನಯ ತೆಂಡುಲ್ಕರ್, ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್, ಅರಣ್ಯ ಸಚಿವ ವಿಶ್ವಜಿತ್ ರಾಣೆ, ಸ್ಪೀಕರ್ ರಮೇಶ್ ತಾವಡಕರ್ ನಿಯೋಗದಲ್ಲಿದ್ದರು.</p>.<p><strong>‘ಮಹದಾಯಿ: ಶೀಘ್ರ ಪರಿಹಾರ’<br />ಪಣಜಿ</strong>: ಮಹದಾಯಿ ನದಿ ತಿರುವು ಯೋಜನೆ ವಿವಾದಕ್ಕೆ ಶೀಘ್ರವೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಗುರುವಾರ ಹೇಳಿದ್ದಾರೆ.</p>.<p>‘ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗವು ನನ್ನನ್ನು ದೆಹಲಿಯಲ್ಲಿ ನನ್ನ ನಿವಾಸದಲ್ಲಿ ಭೇಟಿ ಮಾಡಿತು. ಮಹದಾಯಿ ನದಿ ತಿರುವು ಯೋಜನೆ ಕುರಿತು ಈ ವೇಳೆ ಚರ್ಚೆ ನಡೆಸಿದೆವು. ಈ ವಿವಾದಕ್ಕೆ ಶೀಘ್ರವೇ ಪರಿಹಾರ ಕಂಡುಹಿಡಿಯುವ ವಿಶ್ವಾಸ ಹೊಂದಿರುವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>