<p><strong>ಗುವಾಹಟಿ</strong>: ತಮ್ಮ ಮನೆ, ರಾಜ್ಯವನ್ನು ತೊರೆದು ಉದ್ಯೋಗ ಅರಿಸಿ ಗೋವಾಕ್ಕೆ ಬಂದವರ ಬಾಳಲ್ಲಿ ಬೆಂಕಿಯ ಜ್ವಾಲೆ ಎಲ್ಲವನ್ನೂ ಆಹುತಿ ತೆಗೆದುಕೊಂಡಿದೆ.</p><p>ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ನೈಟ್ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 25 ಮಂದಿ ಸಜೀವ ದಹನವಾಗಿದ್ದು, ಆರು ಜನರು ಗಾಯಗೊಂಡಿದ್ದಾರೆ.</p><p>ಅಸ್ಸಾಂನ ರಾಹುಲ್ ತಂತಿ, ದಿಗ್ನತಾ ಪತಿರ್, ಮನೋಜಿತ್ ಮಾಲ್ ಮೃತ ದುರ್ದೈವಿಗಳು. ರಾಜ್ಯದಲ್ಲಿ ತಲೆದೂರಿದ ನಿರುದ್ಯೋಗ ಸಮಸ್ಯೆಯಿಂದಲೇ ನಮ್ಮ ಮಕ್ಕಳು ಬೇರೆ ರಾಜ್ಯಕ್ಕೆ ಬದುಕುಕಟ್ಟಿಕೊಳ್ಳಲು ಹೋಗಬೇಕಾಯಿತು ಎಂದು ಪೋಷಕರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಖುಲಾಸೆ:ಖಾಕಿ ಕೈವಾಡದ ಬಗ್ಗೆ ದಿಲೀಪ್ ಹೇಳಿದ್ದೇನು?.ದೇಶದಲ್ಲಿ ಶುದ್ಧ ಗಾಳಿ ಎಲ್ಲೆಲ್ಲಿ..?: ಕರ್ನಾಟಕದ ಈ ನಗರಗಳು ಟಾಪ್ 10ರಲ್ಲಿ. <p>ಮೃತರು ಬುಡಕಟ್ಟು ಸಮುದಾಯಕ್ಕೆ ಸೇರಿದ್ದರು. ಈ ಮೂವರು ನೈಟ್ಕ್ಲಬ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸುವ ಸಂಬಂಧ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ ಎಂದೂ ಸಂಬಂಧಿಕರು ದೂರಿದ್ದಾರೆ.</p><p>ಅಸ್ಸಾಂನ ಧೇಮಾಜಿ ಜಿಲ್ಲೆಯಲ್ಲಿ ಆಗಾಗ ಪ್ರವಾಹ, ಭೂಕುಸಿತ ಸಂಭವಿಸುತ್ತದೆ. ಇಲ್ಲಿ ಜೀವನೋಪಾಯದ ಮಾರ್ಗಗಳು ಕಡಿಮೆ ಇದೆ. ಹೀಗಾಗಿಯೇ ನನ್ನ ಮಗ ಕೆಲಸಕ್ಕಾಗಿ ಗೋವಾಕ್ಕೆ ಹೋಗಿದ್ದ ಎಂದು ಪತಿರ್ ತಾಯಿ ಕಣ್ಣೀರಿಟ್ಟಿದ್ದಾರೆ.</p>.ಗೋವಾ ನೈಟ್ಕ್ಲಬ್ ದುರಂತ: ಮೂವರು ಅಧಿಕಾರಿಗಳನ್ನು ವಜಾ ಮಾಡಿದ ಸರ್ಕಾರ.ಗೋವಾ ನೈಟ್ಕ್ಲಬ್ನಲ್ಲಿ ಬೆಂಕಿ: ಬೆಂಗಳೂರಿನ ಥಣಿಸಂದ್ರ ನಿವಾಸಿ ಸಾವು. <p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಗೋವಾದಲ್ಲಿ ಮೃತಪಟ್ಟ ಅಸ್ಸಾಂನ ಮೂವರಿಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.</p>.ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು.PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ತಮ್ಮ ಮನೆ, ರಾಜ್ಯವನ್ನು ತೊರೆದು ಉದ್ಯೋಗ ಅರಿಸಿ ಗೋವಾಕ್ಕೆ ಬಂದವರ ಬಾಳಲ್ಲಿ ಬೆಂಕಿಯ ಜ್ವಾಲೆ ಎಲ್ಲವನ್ನೂ ಆಹುತಿ ತೆಗೆದುಕೊಂಡಿದೆ.</p><p>ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ನೈಟ್ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 25 ಮಂದಿ ಸಜೀವ ದಹನವಾಗಿದ್ದು, ಆರು ಜನರು ಗಾಯಗೊಂಡಿದ್ದಾರೆ.</p><p>ಅಸ್ಸಾಂನ ರಾಹುಲ್ ತಂತಿ, ದಿಗ್ನತಾ ಪತಿರ್, ಮನೋಜಿತ್ ಮಾಲ್ ಮೃತ ದುರ್ದೈವಿಗಳು. ರಾಜ್ಯದಲ್ಲಿ ತಲೆದೂರಿದ ನಿರುದ್ಯೋಗ ಸಮಸ್ಯೆಯಿಂದಲೇ ನಮ್ಮ ಮಕ್ಕಳು ಬೇರೆ ರಾಜ್ಯಕ್ಕೆ ಬದುಕುಕಟ್ಟಿಕೊಳ್ಳಲು ಹೋಗಬೇಕಾಯಿತು ಎಂದು ಪೋಷಕರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಖುಲಾಸೆ:ಖಾಕಿ ಕೈವಾಡದ ಬಗ್ಗೆ ದಿಲೀಪ್ ಹೇಳಿದ್ದೇನು?.ದೇಶದಲ್ಲಿ ಶುದ್ಧ ಗಾಳಿ ಎಲ್ಲೆಲ್ಲಿ..?: ಕರ್ನಾಟಕದ ಈ ನಗರಗಳು ಟಾಪ್ 10ರಲ್ಲಿ. <p>ಮೃತರು ಬುಡಕಟ್ಟು ಸಮುದಾಯಕ್ಕೆ ಸೇರಿದ್ದರು. ಈ ಮೂವರು ನೈಟ್ಕ್ಲಬ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸುವ ಸಂಬಂಧ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ ಎಂದೂ ಸಂಬಂಧಿಕರು ದೂರಿದ್ದಾರೆ.</p><p>ಅಸ್ಸಾಂನ ಧೇಮಾಜಿ ಜಿಲ್ಲೆಯಲ್ಲಿ ಆಗಾಗ ಪ್ರವಾಹ, ಭೂಕುಸಿತ ಸಂಭವಿಸುತ್ತದೆ. ಇಲ್ಲಿ ಜೀವನೋಪಾಯದ ಮಾರ್ಗಗಳು ಕಡಿಮೆ ಇದೆ. ಹೀಗಾಗಿಯೇ ನನ್ನ ಮಗ ಕೆಲಸಕ್ಕಾಗಿ ಗೋವಾಕ್ಕೆ ಹೋಗಿದ್ದ ಎಂದು ಪತಿರ್ ತಾಯಿ ಕಣ್ಣೀರಿಟ್ಟಿದ್ದಾರೆ.</p>.ಗೋವಾ ನೈಟ್ಕ್ಲಬ್ ದುರಂತ: ಮೂವರು ಅಧಿಕಾರಿಗಳನ್ನು ವಜಾ ಮಾಡಿದ ಸರ್ಕಾರ.ಗೋವಾ ನೈಟ್ಕ್ಲಬ್ನಲ್ಲಿ ಬೆಂಕಿ: ಬೆಂಗಳೂರಿನ ಥಣಿಸಂದ್ರ ನಿವಾಸಿ ಸಾವು. <p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಗೋವಾದಲ್ಲಿ ಮೃತಪಟ್ಟ ಅಸ್ಸಾಂನ ಮೂವರಿಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.</p>.ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು.PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>