<p><strong>ಪಣಜಿ</strong>: ಗೋವಾ ರಾಜ್ಯಕ್ಕೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿತವಾಗಿದ್ದು, ಇದಕ್ಕೆ ಬೀಚ್ಗಳ ಬಳಿಯ ಗೂಡಂಗಡಿಗಳಲ್ಲಿ ನಡೆಯುತ್ತಿರುವ ಇಡ್ಲಿ– ಸಾಂಬಾರ್ ಮಾರಾಟ ಪ್ರಮುಖ ಕಾರಣ ಎಂದು ಇಲ್ಲಿನ ಬಿಜೆಪಿ ಶಾಸಕ ಮೈಕೆಲ್ ಲೋಬೊ ಆರೋಪಿಸಿದರು.</p>.<p>ಕರಾವಳಿ ರಾಜ್ಯ ಎದುರಿಸುತ್ತಿರುವ ಈ ಸಮಸ್ಯೆಗೆ ಕೇವಲ ಸರ್ಕಾರವನ್ನು ದೂಷಿಸುವುದು ಸರಿಯಲ್ಲ, ಏಕೆಂದರೆ ಎಲ್ಲ ಭಾಗಿದಾರರು ಇದಕ್ಕೆ ಸಮಾನ ಜವಾಬ್ದಾರರಾಗಿದ್ದಾರೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಗೋವಾದ ಜನರು ಬೀಚ್ ಬಳಿಯ ತಮ್ಮ ಗೂಡಂಗಡಿಗಳನ್ನು ಬೇರೆಡೆಯ ಉದ್ಯಮಿಗಳಿಗೆ ಬಾಡಿಗೆಗೆ ನೀಡಿದ್ದಾರೆ. ಇವುಗಳಲ್ಲಿ ಬೆಂಗಳೂರಿನ ಕೆಲವರು ‘ವಡಾ ಪಾವ್’ ಮಾರುತ್ತಿದ್ದರೆ, ಇನ್ನೂ ಕೆಲವರು ಇಡ್ಲಿ–ಸಾಂಬಾರ್ ಮಾರುತ್ತಿದ್ದಾರೆ. ಈ ಕಾರಣಗಳಿಂದಾಗಿ ಎರಡು ವರ್ಷಗಳಿಂದ ಗೋವಾಗೆ ವಿದೇಶಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಆದರೆ, ದಕ್ಷಿಣ ಭಾರತದ ಜನಪ್ರಿಯ ಉಪಹಾರ ಖಾದ್ಯವಾದ ಇಡ್ಲಿ– ಸಾಂಬಾರ್ ಹೇಗೆ ರಾಜ್ಯದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಶಾಸಕರು ವಿವರಿಸಲಿಲ್ಲ.</p>.<p>ವಿದೇಶಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿರುವುಕ್ಕೆ ಕಾರಣಗಳೇನು ಎಂಬುದರ ಕುರಿತು ಪ್ರವಾಸೋದ್ಯಮ ಇಲಾಖೆ ಮತ್ತು ಇತರ ಭಾಗಿದಾರರು ಜಂಟಿ ಸಭೆ ನಡೆಸಿ ಅಧ್ಯಯನ ಮಾಡಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ</strong>: ಗೋವಾ ರಾಜ್ಯಕ್ಕೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿತವಾಗಿದ್ದು, ಇದಕ್ಕೆ ಬೀಚ್ಗಳ ಬಳಿಯ ಗೂಡಂಗಡಿಗಳಲ್ಲಿ ನಡೆಯುತ್ತಿರುವ ಇಡ್ಲಿ– ಸಾಂಬಾರ್ ಮಾರಾಟ ಪ್ರಮುಖ ಕಾರಣ ಎಂದು ಇಲ್ಲಿನ ಬಿಜೆಪಿ ಶಾಸಕ ಮೈಕೆಲ್ ಲೋಬೊ ಆರೋಪಿಸಿದರು.</p>.<p>ಕರಾವಳಿ ರಾಜ್ಯ ಎದುರಿಸುತ್ತಿರುವ ಈ ಸಮಸ್ಯೆಗೆ ಕೇವಲ ಸರ್ಕಾರವನ್ನು ದೂಷಿಸುವುದು ಸರಿಯಲ್ಲ, ಏಕೆಂದರೆ ಎಲ್ಲ ಭಾಗಿದಾರರು ಇದಕ್ಕೆ ಸಮಾನ ಜವಾಬ್ದಾರರಾಗಿದ್ದಾರೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಗೋವಾದ ಜನರು ಬೀಚ್ ಬಳಿಯ ತಮ್ಮ ಗೂಡಂಗಡಿಗಳನ್ನು ಬೇರೆಡೆಯ ಉದ್ಯಮಿಗಳಿಗೆ ಬಾಡಿಗೆಗೆ ನೀಡಿದ್ದಾರೆ. ಇವುಗಳಲ್ಲಿ ಬೆಂಗಳೂರಿನ ಕೆಲವರು ‘ವಡಾ ಪಾವ್’ ಮಾರುತ್ತಿದ್ದರೆ, ಇನ್ನೂ ಕೆಲವರು ಇಡ್ಲಿ–ಸಾಂಬಾರ್ ಮಾರುತ್ತಿದ್ದಾರೆ. ಈ ಕಾರಣಗಳಿಂದಾಗಿ ಎರಡು ವರ್ಷಗಳಿಂದ ಗೋವಾಗೆ ವಿದೇಶಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಆದರೆ, ದಕ್ಷಿಣ ಭಾರತದ ಜನಪ್ರಿಯ ಉಪಹಾರ ಖಾದ್ಯವಾದ ಇಡ್ಲಿ– ಸಾಂಬಾರ್ ಹೇಗೆ ರಾಜ್ಯದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಶಾಸಕರು ವಿವರಿಸಲಿಲ್ಲ.</p>.<p>ವಿದೇಶಿ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿರುವುಕ್ಕೆ ಕಾರಣಗಳೇನು ಎಂಬುದರ ಕುರಿತು ಪ್ರವಾಸೋದ್ಯಮ ಇಲಾಖೆ ಮತ್ತು ಇತರ ಭಾಗಿದಾರರು ಜಂಟಿ ಸಭೆ ನಡೆಸಿ ಅಧ್ಯಯನ ಮಾಡಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>