ಅಂತರರಾಷ್ಟ್ರೀಯ ಯೋಗ ದಿನದ ಕುರಿತು ಪ್ರಕಟಣೆಗಾಗಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್,’ಇಂದು ಅಥವಾ ನಾಳೆ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾಡಬೇಕಾಗುತ್ತದೆ. ಅದು ಅವಶ್ಯಕವೂ ಆಗಿದೆ. ನಿಮಗೆಲ್ಲ ತಿಳಿದಿರುವಂತೆ ಮುಖ್ಯಮಂತ್ರಿ ಅವರ ಆರೋಗ್ಯ ಸರಿಯಿಲ್ಲದಿದ್ದರೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದರು.