<p><strong>ಪಣಜಿ:</strong> ಉತ್ತರ ಗೋವಾದ ನೈಟ್ ಕ್ಲಬ್ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. </p><p>'ಈ ನೈಟ್ ಕ್ಲಬ್ನಲ್ಲಿ ಬೆಂಕಿ ಹೊತ್ತಿಕೊಂಡಾಗ ಡ್ಯಾನ್ಸ್ ಫ್ಲೋರ್ನಲ್ಲಿ ಕನಿಷ್ಠ 100 ಮಂದಿ ಇದ್ದರು. ಬೆಂಕಿ ಕಾಣಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಡುಗೆ ಕೋಣೆಯತ್ತ ಓಡಿ ಹೋದರು. ಇದರಿಂದಾಗಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಿಕ್ಕಿಹಾಕಿಕೊಂಡರು' ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. </p><p>ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಸಿಗರು ನೃತ್ಯ ಮಾಡುತ್ತಿದ್ದ ಕ್ಲಬ್ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದಿದ್ದಾರೆ. </p><p>ಪಣಜಿಯಿಂದ 25 ಕಿ.ಮೀ. ದೂರದ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳವಾದ 'ಬಿರ್ಚ್ ಬೈ ರೊಮಿಯೊ ಲೇನ್' ನೈಟ್ ಕ್ಲಬ್ನಲ್ಲಿ ಅವಘಡ ಸಂಭವಿಸಿದೆ. </p><p>ಮೃತರಲ್ಲಿ ಹೆಚ್ಚಿನವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಆಗಿದ್ದಾರೆ. ಅವಘಡದಲ್ಲಿ ಮೂರರಿಂದ ನಾಲ್ವರು ಪ್ರವಾಸಿಗರು ಹಾಗೂ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. </p><p>'ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲರೂ ಅಡ್ಡಾದಿಡ್ಡಿಯಾಗಿ ಓಡಾಲಾರಂಭಿಸಿದರು. ಹೊರಗೆ ಹೋಗಿ ನೋಡಿದಾಗ ಇಡೀ ಕ್ಲಬ್ಗೆ ಬೆಂಕಿ ಆವರಿಸಿತ್ತು' ಎಂದು ಪ್ರಾಣಾಪಾಯದಿಂದ ಪಾರಾಗಿರುವ ಹೈದರಾಬಾದ್ನ ಮೂಲದ ಪ್ರವಾಸಿ ಫಾತಿಮಾ ಶೇಖ್ ತಿಳಿಸಿದ್ದಾರೆ. </p>.<p>'ವಾರಂತ್ಯವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕನಿಷ್ಠ 100 ಮಂದಿ ಡ್ಯಾನ್ಸ್ ಫ್ಲೋರ್ನಲ್ಲಿದ್ದರು' ಎಂದು ಅವರು ತಿಳಿಸಿದ್ದರು. </p><p>'ತಾಳೆ ಎಲೆಗಳಿಂದ ನಿರ್ಮಿಸಿದ ತಾತ್ಕಾಲಿಕ ರಚನೆ ಇದಾಗಿತ್ತು. ಹಾಗಾಗಿ ಬೆಂಕಿ ಬೇಗನೇ ಹೊತ್ತಿಕೊಂಡಿತ್ತು' ಎಂದು ಅವರು ಹೇಳಿದ್ದಾರೆ. </p><p>'ಅರ್ಪೊರಾ ನದಿಯ ಹಿನ್ನೀರಿನಲ್ಲಿ ಈ ನೈಟ್ ಕ್ಲಬ್ ಇದೆ. ಒಳಗೆ ಹೋಗುವ ಹಾಗೂ ನಿರ್ಗಮನ ಹಾದಿ ಕಿರಿದಾಗಿದೆ. ಇದರಿಂದಾಗಿ ಅಗ್ನಿಶಾಮಕ ಸಿಬ್ಬಂದಿಗೆ ಬೇಗನೇ ಹೋಗಲು ಸಾಧ್ಯವಾಗಲಿಲ್ಲ. 400 ಮೀಟರ್ ದೂರದಲ್ಲಿ ವಾಹನ ನಿಲ್ಲಿಸಬೇಕಾಯಿತು. ಹಾಗಾಗಿ ಬೆಂಕಿಯನ್ನು ನಂದಿಸುವುದು ಕಷ್ಟಕರವಾಗಿತ್ತು' ಅಗ್ನಿಶಾಮಕದಳದ ಅಧಿಕಾರಿ ತಿಳಿಸಿದ್ದಾರೆ. </p><p>'ಹೆಚ್ಚಿನ ಮಂದಿ ಕೆಳ ಮಹಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ಉಸಿರುಗಟ್ಟಿ ಮೃತಪಟ್ಟಿರಬಹುದು' ಎಂದು ಅವರು ತಿಳಿಸಿದ್ದಾರೆ. </p><p>'ನೈಟ್ ಕ್ಲಬ್ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ.</p>.ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು.ಆಳ ಅಗಲ: ತೇಜಸ್ ವಿಮಾನ ದುರಂತ– ಕುಂದೀತೇ ’ತೇಜಸ್ಸು’?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಉತ್ತರ ಗೋವಾದ ನೈಟ್ ಕ್ಲಬ್ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. </p><p>'ಈ ನೈಟ್ ಕ್ಲಬ್ನಲ್ಲಿ ಬೆಂಕಿ ಹೊತ್ತಿಕೊಂಡಾಗ ಡ್ಯಾನ್ಸ್ ಫ್ಲೋರ್ನಲ್ಲಿ ಕನಿಷ್ಠ 100 ಮಂದಿ ಇದ್ದರು. ಬೆಂಕಿ ಕಾಣಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಡುಗೆ ಕೋಣೆಯತ್ತ ಓಡಿ ಹೋದರು. ಇದರಿಂದಾಗಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಿಕ್ಕಿಹಾಕಿಕೊಂಡರು' ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. </p><p>ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಸಿಗರು ನೃತ್ಯ ಮಾಡುತ್ತಿದ್ದ ಕ್ಲಬ್ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದಿದ್ದಾರೆ. </p><p>ಪಣಜಿಯಿಂದ 25 ಕಿ.ಮೀ. ದೂರದ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳವಾದ 'ಬಿರ್ಚ್ ಬೈ ರೊಮಿಯೊ ಲೇನ್' ನೈಟ್ ಕ್ಲಬ್ನಲ್ಲಿ ಅವಘಡ ಸಂಭವಿಸಿದೆ. </p><p>ಮೃತರಲ್ಲಿ ಹೆಚ್ಚಿನವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಆಗಿದ್ದಾರೆ. ಅವಘಡದಲ್ಲಿ ಮೂರರಿಂದ ನಾಲ್ವರು ಪ್ರವಾಸಿಗರು ಹಾಗೂ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. </p><p>'ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲರೂ ಅಡ್ಡಾದಿಡ್ಡಿಯಾಗಿ ಓಡಾಲಾರಂಭಿಸಿದರು. ಹೊರಗೆ ಹೋಗಿ ನೋಡಿದಾಗ ಇಡೀ ಕ್ಲಬ್ಗೆ ಬೆಂಕಿ ಆವರಿಸಿತ್ತು' ಎಂದು ಪ್ರಾಣಾಪಾಯದಿಂದ ಪಾರಾಗಿರುವ ಹೈದರಾಬಾದ್ನ ಮೂಲದ ಪ್ರವಾಸಿ ಫಾತಿಮಾ ಶೇಖ್ ತಿಳಿಸಿದ್ದಾರೆ. </p>.<p>'ವಾರಂತ್ಯವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕನಿಷ್ಠ 100 ಮಂದಿ ಡ್ಯಾನ್ಸ್ ಫ್ಲೋರ್ನಲ್ಲಿದ್ದರು' ಎಂದು ಅವರು ತಿಳಿಸಿದ್ದರು. </p><p>'ತಾಳೆ ಎಲೆಗಳಿಂದ ನಿರ್ಮಿಸಿದ ತಾತ್ಕಾಲಿಕ ರಚನೆ ಇದಾಗಿತ್ತು. ಹಾಗಾಗಿ ಬೆಂಕಿ ಬೇಗನೇ ಹೊತ್ತಿಕೊಂಡಿತ್ತು' ಎಂದು ಅವರು ಹೇಳಿದ್ದಾರೆ. </p><p>'ಅರ್ಪೊರಾ ನದಿಯ ಹಿನ್ನೀರಿನಲ್ಲಿ ಈ ನೈಟ್ ಕ್ಲಬ್ ಇದೆ. ಒಳಗೆ ಹೋಗುವ ಹಾಗೂ ನಿರ್ಗಮನ ಹಾದಿ ಕಿರಿದಾಗಿದೆ. ಇದರಿಂದಾಗಿ ಅಗ್ನಿಶಾಮಕ ಸಿಬ್ಬಂದಿಗೆ ಬೇಗನೇ ಹೋಗಲು ಸಾಧ್ಯವಾಗಲಿಲ್ಲ. 400 ಮೀಟರ್ ದೂರದಲ್ಲಿ ವಾಹನ ನಿಲ್ಲಿಸಬೇಕಾಯಿತು. ಹಾಗಾಗಿ ಬೆಂಕಿಯನ್ನು ನಂದಿಸುವುದು ಕಷ್ಟಕರವಾಗಿತ್ತು' ಅಗ್ನಿಶಾಮಕದಳದ ಅಧಿಕಾರಿ ತಿಳಿಸಿದ್ದಾರೆ. </p><p>'ಹೆಚ್ಚಿನ ಮಂದಿ ಕೆಳ ಮಹಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ಉಸಿರುಗಟ್ಟಿ ಮೃತಪಟ್ಟಿರಬಹುದು' ಎಂದು ಅವರು ತಿಳಿಸಿದ್ದಾರೆ. </p><p>'ನೈಟ್ ಕ್ಲಬ್ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ.</p>.ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು.ಆಳ ಅಗಲ: ತೇಜಸ್ ವಿಮಾನ ದುರಂತ– ಕುಂದೀತೇ ’ತೇಜಸ್ಸು’?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>