ಪರ್ರೀಕರ್ ಸಂಪುಟದಲ್ಲಿ ಕೃಷಿ ಸಚಿವರಾಗಿರುವ ಸರ್ದೇಸಾಯಿ, ‘ಇದೇ 28ರಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪದಲ್ಲಿ ಪರ್ರೀಕರ್ ಅವರನ್ನು ಭೇಟಿ ಮಾಡಿದ್ದೇನೆ. ಅವರು ಆರೋಗ್ಯವಾಗಿದ್ದಾರೆ. ಹೀಗಿದ್ದ ಮೇಲೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆ ಹೇಗೆ ಉದ್ಭವಿಸುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.