<p><strong>ಪಣಜಿ: </strong>ಉದ್ದೇಶಿತ ಜೋಡಿ ರೈಲು ಮಾರ್ಗ ಯೋಜನೆಯನ್ನು ವಿರೋಧಿಸಿ ಗೋವಾದ ಅರೋಸಿಮ್ ಗ್ರಾಮದಲ್ಲಿ ಶನಿವಾರವೂ ಪ್ರತಿಭಟನೆ ನಡೆಯಿತು.</p>.<p>ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡಿದ್ದ ಪ್ರತಿಭಟನೆ ಶನಿವಾರವೂ ಮುಂದುವರಿಯಿತು. ಕೆಲವು ಗಂಟೆಗಳ ಕಾಲ ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ ಪ್ರತಿಭಟನಕಾರರನ್ನು ಮನವೊಲಿಸಿದ ಪೊಲೀಸರು, ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಕರ್ನಾಟಕದಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಿಸಲು ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೋಡಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂಬುದು ಪ್ರತಿಭಟನಕಾರರ ಆರೋಪ.</p>.<p>ಗೋವಾ ಹಾಗೂ ಕರ್ನಾಟಕ ನಡುವೆ ಈಗಿರುವ ಮಾರ್ಗವನ್ನೇಉದ್ದೇಶಿತ ಯೋಜನೆಯಡಿ ಜೋಡಿ ರೈಲು ಮಾರ್ಗವನ್ನಾಗಿ ಪರಿವರ್ತಿಸಲಾಗುತ್ತಿದೆ. ಇದಲ್ಲದೇ, ಉಭಯ ರಾಜ್ಯಗಳ ನಡುವಿನ ಹೆದ್ದಾರಿ ವಿಸ್ತರಣೆ, ಹೊಸ ವಿದ್ಯುತ್ ಮಾರ್ಗ ನಿರ್ಮಿಸುವ ಯೋಜನೆಗಳನ್ನು ಸಹ ಅನುಷ್ಠಾಗೊಳಿಸಲಾಗುತ್ತಿದೆ.</p>.<p>ಪೋರ್ಚಗೀಸರ ಆಳ್ವಿಕೆಯಿಂದ ಗೋವಾ ವಿಮೋಚನೆಗೊಂಡ 60ನೇ ವಾರ್ಷಿಕೋತ್ಸವ ಸಹ ಶನಿವಾರ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನೂ ಇದೇ ದಿನ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>ಉದ್ದೇಶಿತ ಜೋಡಿ ರೈಲು ಮಾರ್ಗ ಯೋಜನೆಯನ್ನು ವಿರೋಧಿಸಿ ಗೋವಾದ ಅರೋಸಿಮ್ ಗ್ರಾಮದಲ್ಲಿ ಶನಿವಾರವೂ ಪ್ರತಿಭಟನೆ ನಡೆಯಿತು.</p>.<p>ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡಿದ್ದ ಪ್ರತಿಭಟನೆ ಶನಿವಾರವೂ ಮುಂದುವರಿಯಿತು. ಕೆಲವು ಗಂಟೆಗಳ ಕಾಲ ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ ಪ್ರತಿಭಟನಕಾರರನ್ನು ಮನವೊಲಿಸಿದ ಪೊಲೀಸರು, ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಕರ್ನಾಟಕದಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಿಸಲು ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೋಡಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂಬುದು ಪ್ರತಿಭಟನಕಾರರ ಆರೋಪ.</p>.<p>ಗೋವಾ ಹಾಗೂ ಕರ್ನಾಟಕ ನಡುವೆ ಈಗಿರುವ ಮಾರ್ಗವನ್ನೇಉದ್ದೇಶಿತ ಯೋಜನೆಯಡಿ ಜೋಡಿ ರೈಲು ಮಾರ್ಗವನ್ನಾಗಿ ಪರಿವರ್ತಿಸಲಾಗುತ್ತಿದೆ. ಇದಲ್ಲದೇ, ಉಭಯ ರಾಜ್ಯಗಳ ನಡುವಿನ ಹೆದ್ದಾರಿ ವಿಸ್ತರಣೆ, ಹೊಸ ವಿದ್ಯುತ್ ಮಾರ್ಗ ನಿರ್ಮಿಸುವ ಯೋಜನೆಗಳನ್ನು ಸಹ ಅನುಷ್ಠಾಗೊಳಿಸಲಾಗುತ್ತಿದೆ.</p>.<p>ಪೋರ್ಚಗೀಸರ ಆಳ್ವಿಕೆಯಿಂದ ಗೋವಾ ವಿಮೋಚನೆಗೊಂಡ 60ನೇ ವಾರ್ಷಿಕೋತ್ಸವ ಸಹ ಶನಿವಾರ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನೂ ಇದೇ ದಿನ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>