<p><strong>ಪಣಜಿ</strong>: ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರು ಇಂದು (ಗುರುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>57 ವರ್ಷದ ಕಾಣಕೋಣ ಕ್ಷೇತ್ರದ ಶಾಸಕರಾದ ರಮೇಶ್ ತಾವಡ್ಕರ್ ಅವರು ಶಾಸಕಾಂಗ ಕಾರ್ಯದರ್ಶಿ ನಮ್ರತಾ ಉಲ್ಮಾನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಬಳಿಕ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಮೇಶ್ ತಾವಡ್ಕರ್ ಮತ್ತು ಮಾಜಿ ಸಿಎಂ ದಿಗಂಬರ್ ಕಾಮತ್ ಅವರನ್ನು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. </p><p>‘ನಾನು ಸಭಾಪತಿಯಾಗಿ ಐದು ವರ್ಷ ಪೂರ್ಣಗೊಳಿಸಲು ಬಯಸಿದ್ದೆ. ಆದರೆ, ಪಕ್ಷ (ಬಿಜೆಪಿ) ನನಗೆ ರಾಜೀನಾಮೆ ನೀಡಿ ಸಚಿವ ಸ್ಥಾನ ಅಲಂಕರಿಸುವಂತೆ ಹಾಗೂ ಪಕ್ಷ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದೆ’ ಎಂದು ತಾವಡ್ಕರ್ ತಿಳಿಸಿದ್ದಾರೆ. </p><p>‘ನನ್ನ ಅವಧಿಯಲ್ಲಿ ಸಭಾಪತಿ ಸ್ಥಾನದ ಗೌರವ ಮತ್ತು ತಟಸ್ಥತೆಯನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ ಎಂಬ ತೃಪ್ತಿ ನನಗಿದೆ. ಸಭಾಪತಿಯಾದವರು ಸಮಾಜಕ್ಕಾಗಿ ಬಹಳಷ್ಟು ಕೆಲಸಗಳನ್ನು ಮಾಡಬಹುದು ಎಂಬುದನ್ನು ನಾನು ತೋರಿಸಿದ್ದೇನೆ. ಸ್ಪೀಕರ್ ಹುದ್ದೆ ಹೊಂದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಸಮಯವನ್ನು ಮೀಸಲಿಟ್ಟಿದ್ದೇನೆ’ ಎಂದು ಅವರು ಹೇಳಿದ್ದಾರೆ.</p><p>ಜೂನ್ 18ರಂದು ಗೋವಿಂದ್ ಗೌಡೆ ಅವರನ್ನು ಸಂಪುಟದಿಂದ ಕೈಬಿಟ್ಟ ನಂತರ ಒಂದು ಸಚಿವ ಸ್ಥಾನ ಖಾಲಿಯಾಗಿದ್ದರೆ, ಮತ್ತೊಬ್ಬ ಸಚಿವ ಅಲೆಕ್ಸೊ ಸಿಕ್ವೇರಾ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಬುಧವಾರ ರಾಜೀನಾಮೆ ನೀಡಿದ್ದರು. </p><p>ತಾವಡ್ಕರ್ ಮತ್ತು ಕಾಮತ್ ಅವರು ಸಚಿವರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ತಿಳಿಸಿದ್ದರು. </p><p>2007ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ತಾವಡ್ಕರ್ ಅವರು ಬಿಜೆಪಿ ಸರ್ಕಾರದಲ್ಲಿ ಕ್ರೀಡೆ, ಬುಡಕಟ್ಟು ಕಲ್ಯಾಣ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ</strong>: ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರು ಇಂದು (ಗುರುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>57 ವರ್ಷದ ಕಾಣಕೋಣ ಕ್ಷೇತ್ರದ ಶಾಸಕರಾದ ರಮೇಶ್ ತಾವಡ್ಕರ್ ಅವರು ಶಾಸಕಾಂಗ ಕಾರ್ಯದರ್ಶಿ ನಮ್ರತಾ ಉಲ್ಮಾನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಬಳಿಕ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಮೇಶ್ ತಾವಡ್ಕರ್ ಮತ್ತು ಮಾಜಿ ಸಿಎಂ ದಿಗಂಬರ್ ಕಾಮತ್ ಅವರನ್ನು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. </p><p>‘ನಾನು ಸಭಾಪತಿಯಾಗಿ ಐದು ವರ್ಷ ಪೂರ್ಣಗೊಳಿಸಲು ಬಯಸಿದ್ದೆ. ಆದರೆ, ಪಕ್ಷ (ಬಿಜೆಪಿ) ನನಗೆ ರಾಜೀನಾಮೆ ನೀಡಿ ಸಚಿವ ಸ್ಥಾನ ಅಲಂಕರಿಸುವಂತೆ ಹಾಗೂ ಪಕ್ಷ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದೆ’ ಎಂದು ತಾವಡ್ಕರ್ ತಿಳಿಸಿದ್ದಾರೆ. </p><p>‘ನನ್ನ ಅವಧಿಯಲ್ಲಿ ಸಭಾಪತಿ ಸ್ಥಾನದ ಗೌರವ ಮತ್ತು ತಟಸ್ಥತೆಯನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ ಎಂಬ ತೃಪ್ತಿ ನನಗಿದೆ. ಸಭಾಪತಿಯಾದವರು ಸಮಾಜಕ್ಕಾಗಿ ಬಹಳಷ್ಟು ಕೆಲಸಗಳನ್ನು ಮಾಡಬಹುದು ಎಂಬುದನ್ನು ನಾನು ತೋರಿಸಿದ್ದೇನೆ. ಸ್ಪೀಕರ್ ಹುದ್ದೆ ಹೊಂದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಸಮಯವನ್ನು ಮೀಸಲಿಟ್ಟಿದ್ದೇನೆ’ ಎಂದು ಅವರು ಹೇಳಿದ್ದಾರೆ.</p><p>ಜೂನ್ 18ರಂದು ಗೋವಿಂದ್ ಗೌಡೆ ಅವರನ್ನು ಸಂಪುಟದಿಂದ ಕೈಬಿಟ್ಟ ನಂತರ ಒಂದು ಸಚಿವ ಸ್ಥಾನ ಖಾಲಿಯಾಗಿದ್ದರೆ, ಮತ್ತೊಬ್ಬ ಸಚಿವ ಅಲೆಕ್ಸೊ ಸಿಕ್ವೇರಾ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಬುಧವಾರ ರಾಜೀನಾಮೆ ನೀಡಿದ್ದರು. </p><p>ತಾವಡ್ಕರ್ ಮತ್ತು ಕಾಮತ್ ಅವರು ಸಚಿವರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ತಿಳಿಸಿದ್ದರು. </p><p>2007ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ತಾವಡ್ಕರ್ ಅವರು ಬಿಜೆಪಿ ಸರ್ಕಾರದಲ್ಲಿ ಕ್ರೀಡೆ, ಬುಡಕಟ್ಟು ಕಲ್ಯಾಣ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>