ಪಣಜಿ: ಕಳಸಾ ಬಂಡೂರಿ ಅಣೆಕಟ್ಟೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪ್ರಮುಖ ಸಚಿವಾಲಯಗಳಲ್ಲಿ ಲಿಖಿತ ಆಕ್ಷೇಪಣೆ ದಾಖಲಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
‘ಯಾವುದೇ ಕಾರಣಕ್ಕೂ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡದಿರಲು ಕೋರಿ 2–3 ದಿನದಲ್ಲಿ ನಾವು ಕೇಂದ್ರದ ಪರಿಸರ ಮತ್ತು ಅರಣ್ಯ ಸಚಿವಾಲಯ, ಜಲಶಕ್ತಿ ಮತ್ತು ಇತರೆ ಸಂಬಂಧಿಸಿದ ಸಚಿವಾಲಯದ ಎದುರು ಲಿಖಿತ ಆಕ್ಷೇಪಣೆ ಸಲ್ಲಿಸಲಿದ್ದೇವೆ’ ಎಂದು ಸಾವಂತ್ ತಿಳಿಸಿದರು.