ವಿಶೇಷ ಚೇತನ ವ್ಯಕ್ತಿಗಳ ಸಬಲೀಕರಣವು ದಾನ ಧರ್ಮ ಮಾಡುವ ಕಾರ್ಯವಲ್ಲ. ಆದರೆ, ಮಾನವ ಹಕ್ಕುಗಳು ಮತ್ತು ಸಾಮಾಜಿಕ ಸಮಾನತೆಯನ್ನು ಉಳಿಸುವ ವಿಷಯವಾಗಿದೆ ಎಂದರು
ಜನರ ಬೆಂಬಲ ಹಾಗೂ ಒಳಗೊಳ್ಳುವಿಕೆಯು ಈ ಸಮುದಾಯದ ಸುಧಾರಣೆಗೆ ಕೊಡುಗೆ ನೀಡಬಲ್ಲದು, ಈ ಮೂಲಕ ಅಸಂಖ್ಯಾತ ವ್ಯಕ್ತಿಗಳ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ನಾವು ನೋಡಬಹುದು ಎಂದು ಮುಖ್ಯಮಂತ್ರಿ ಹೇಳಿದರು,
ಜನವರಿ 8 ರಿಂದ 13 ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಪಂಚದಾದ್ಯಂತದ ಜನರನ್ನು ಆಹ್ವಾನಿಸುತ್ತೇನೆ. ಈಗಾಗಲೇ ಗೋವಾ ರಾಜ್ಯವು ಜಿ 20 ಸಭೆಗಳು ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗೋವಾ ರಾಜ್ಯ ಸಮಾಜ ಕಲ್ಯಾಣ ಸಚಿವ ಸುಭಾಷ್ ದೇಸಾಯಿ ಇದ್ದರು. ಕಾರ್ಯಕ್ರಮದ ರೂಪುರೇಷೆಗಳನ್ನು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.