<p><strong>ಅಹಮದಾಬಾದ್: </strong>ಗುಜರಾತ್ನ ಮಾಜಿ ಸಚಿವೆ ಮಾಯಾ ಕೊಡ್ನಾನಿ, ಬಜರಂಗ ದಳದ ಮುಖಂಡ ಬಾಬು ಬಜರಂಗಿ ಪ್ರಮುಖ ಆರೋಪಿಗಳಾಗಿರುವ ನರೋಡ ಹತ್ಯಾಕಾಂಡ ಪ್ರಕರಣದ ತೀರ್ಪನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 20ರಂದು ಪ್ರಕಟಿಸಲಿದೆ.</p>.<p>ಕಳೆದ ವಾರವೇ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಪ್ರಧಾನ ಸೆಷನ್ಸ್ ನ್ಯಾಯಾಧೀಶರಾದ ಎಸ್.ಕೆ. ಭಾಕ್ಸಿ ತೀರ್ಪನ್ನು ಕಾಯ್ದಿರಿಸಿದ್ದರು. </p>.<p>2002ರ ಏಪ್ರಿಲ್ 2ರಂದು ನಡೆದ ಗೋಧ್ರಾ ಗಲಭೆ ಬಳಿಕ ಏಪ್ರಿಲ್ 28ರಂದು ನರೋಡ ಗ್ರಾಮದಲ್ಲಿ ಕೋಮುಗಲಭೆ ನಡೆದಿತ್ತು. ಈ ಘಟನೆಯಲ್ಲಿ 11 ಮಂದಿ ಅಲ್ಪಸಂಖ್ಯಾತರ ಹತ್ಯೆ ನಡೆದಿತ್ತು.</p>.<p>ಮಾಯಾ ಕೊಡ್ನಾನಿ, ಬಾಬು ಬಜರಂಗಿ, ವಿಶ್ವ ಹಿಂದೂ ಪರಿಷತ್ನ ಮಾಜಿ ನಾಯಕ ಜಗದೀಶ್ ಪಟೇಲ್, ಬಿಜೆಪಿ ಕಾರ್ಪೋರೇಟರ್ ವಲ್ಲಭಬಾಯಿ ಪಟೇಲ್ ಸೇರಿದಂತೆ 69 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಗಲಭೆ, ಕೊಲೆ, ಕ್ರಿಮಿನಲ್ ಸಂಚು ಎಸಗಿದ ಆರೋಪ ಅವರ ಮೇಲಿದೆ. </p>.<p>ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ದಳ (ಎಸ್ಐಟಿ) ಈ ಪ್ರಕರಣದ ವಿಚಾರಣೆ ನಡೆಸಿತ್ತು. 2009ರ ಜುಲೈನಿಂದ ಸುದೀರ್ಘ 14 ವರ್ಷಗಳ ಕಾಲ ನಡೆದ ವಿಚಾರಣಾ ಪ್ರಕ್ರಿಯೆಯಲ್ಲಿ 86 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಪೈಕಿ 17 ಆರೋಪಿಗಳು ವಿಚಾರಣಾ ಹಂತದಲ್ಲಿಯೇ ಮೃತಪಟ್ಟಿದ್ದಾರೆ. </p>.<p>ನರೋಡ ಪಟಿಯಾದಲ್ಲಿ ನಡೆದ ಕೋಮುಗಲಭೆಯಲ್ಲಿ 97 ಮುಸಲ್ಮಾನರು ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿಯೂ ಮಾಯಾ ಕೊಡ್ನಾನಿ, ಬಾಬು ಬಜರಂಗಿ ಸೇರಿದಂತೆ ನಾಲ್ವರು ಶಿಕ್ಷೆಗೆ ಗುರಿಯಾಗಿದ್ದರು. ಜೀವಾವಾಧಿ ಶಿಕ್ಷೆಗೆ ಗುರಿಯಾಗಿದ್ದ ಕೊಡ್ನಾನಿ ಅವರನ್ನು ಗುಜರಾತ್ ಹೈಕೋರ್ಟ್ ಖುಲಾಸೆಗೊಳಿಸಿತ್ತು. ಉಳಿದ ಸಹ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ.</p>.<p>ನರೋಡ ಗ್ರಾಮ ಮತ್ತು ನರೋಡ ಪಟಿಯಾ ಗಲಭೆ ನಡೆದ ಸ್ಥಳದಲ್ಲಿ ನಾನು ಇರಲಿಲ್ಲ. ಆ ವೇಳೆ ವಿಧಾನಸಭೆಯಲ್ಲಿಯೇ ಇದ್ದೆ. ನಂತರ ಅಸ್ವಾರದಲ್ಲಿರುವ ಸಾರ್ವಜನಿಕ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ತೆರಳಿದ್ದೆ ಎಂದು ನ್ಯಾಯಾಲಯದಲ್ಲಿ ಆಕೆ ಹೇಳಿಕೆ ದಾಖಲಿಸಿದ್ದರು.</p>.<p>2018ರಲ್ಲಿ ನಡೆದ ಈ ಪ್ರಕರಣದ ಅಂತಿಮ ವಿಚಾರಣೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನ್ಯಾಯಾಲಯದ ಕಟಕಟೆಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದು, ದೇಶದ ಗಮನ ಸೆಳೆದಿತ್ತು.</p>.<p>ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು 187 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇವರಲ್ಲಿ 113 ಮಂದಿ ಸಂತ್ರಸ್ತರು ಮತ್ತು ಅವರ ಕುಟುಂಬದ ಸದಸ್ಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್: </strong>ಗುಜರಾತ್ನ ಮಾಜಿ ಸಚಿವೆ ಮಾಯಾ ಕೊಡ್ನಾನಿ, ಬಜರಂಗ ದಳದ ಮುಖಂಡ ಬಾಬು ಬಜರಂಗಿ ಪ್ರಮುಖ ಆರೋಪಿಗಳಾಗಿರುವ ನರೋಡ ಹತ್ಯಾಕಾಂಡ ಪ್ರಕರಣದ ತೀರ್ಪನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 20ರಂದು ಪ್ರಕಟಿಸಲಿದೆ.</p>.<p>ಕಳೆದ ವಾರವೇ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಪ್ರಧಾನ ಸೆಷನ್ಸ್ ನ್ಯಾಯಾಧೀಶರಾದ ಎಸ್.ಕೆ. ಭಾಕ್ಸಿ ತೀರ್ಪನ್ನು ಕಾಯ್ದಿರಿಸಿದ್ದರು. </p>.<p>2002ರ ಏಪ್ರಿಲ್ 2ರಂದು ನಡೆದ ಗೋಧ್ರಾ ಗಲಭೆ ಬಳಿಕ ಏಪ್ರಿಲ್ 28ರಂದು ನರೋಡ ಗ್ರಾಮದಲ್ಲಿ ಕೋಮುಗಲಭೆ ನಡೆದಿತ್ತು. ಈ ಘಟನೆಯಲ್ಲಿ 11 ಮಂದಿ ಅಲ್ಪಸಂಖ್ಯಾತರ ಹತ್ಯೆ ನಡೆದಿತ್ತು.</p>.<p>ಮಾಯಾ ಕೊಡ್ನಾನಿ, ಬಾಬು ಬಜರಂಗಿ, ವಿಶ್ವ ಹಿಂದೂ ಪರಿಷತ್ನ ಮಾಜಿ ನಾಯಕ ಜಗದೀಶ್ ಪಟೇಲ್, ಬಿಜೆಪಿ ಕಾರ್ಪೋರೇಟರ್ ವಲ್ಲಭಬಾಯಿ ಪಟೇಲ್ ಸೇರಿದಂತೆ 69 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಗಲಭೆ, ಕೊಲೆ, ಕ್ರಿಮಿನಲ್ ಸಂಚು ಎಸಗಿದ ಆರೋಪ ಅವರ ಮೇಲಿದೆ. </p>.<p>ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ದಳ (ಎಸ್ಐಟಿ) ಈ ಪ್ರಕರಣದ ವಿಚಾರಣೆ ನಡೆಸಿತ್ತು. 2009ರ ಜುಲೈನಿಂದ ಸುದೀರ್ಘ 14 ವರ್ಷಗಳ ಕಾಲ ನಡೆದ ವಿಚಾರಣಾ ಪ್ರಕ್ರಿಯೆಯಲ್ಲಿ 86 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಪೈಕಿ 17 ಆರೋಪಿಗಳು ವಿಚಾರಣಾ ಹಂತದಲ್ಲಿಯೇ ಮೃತಪಟ್ಟಿದ್ದಾರೆ. </p>.<p>ನರೋಡ ಪಟಿಯಾದಲ್ಲಿ ನಡೆದ ಕೋಮುಗಲಭೆಯಲ್ಲಿ 97 ಮುಸಲ್ಮಾನರು ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿಯೂ ಮಾಯಾ ಕೊಡ್ನಾನಿ, ಬಾಬು ಬಜರಂಗಿ ಸೇರಿದಂತೆ ನಾಲ್ವರು ಶಿಕ್ಷೆಗೆ ಗುರಿಯಾಗಿದ್ದರು. ಜೀವಾವಾಧಿ ಶಿಕ್ಷೆಗೆ ಗುರಿಯಾಗಿದ್ದ ಕೊಡ್ನಾನಿ ಅವರನ್ನು ಗುಜರಾತ್ ಹೈಕೋರ್ಟ್ ಖುಲಾಸೆಗೊಳಿಸಿತ್ತು. ಉಳಿದ ಸಹ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ.</p>.<p>ನರೋಡ ಗ್ರಾಮ ಮತ್ತು ನರೋಡ ಪಟಿಯಾ ಗಲಭೆ ನಡೆದ ಸ್ಥಳದಲ್ಲಿ ನಾನು ಇರಲಿಲ್ಲ. ಆ ವೇಳೆ ವಿಧಾನಸಭೆಯಲ್ಲಿಯೇ ಇದ್ದೆ. ನಂತರ ಅಸ್ವಾರದಲ್ಲಿರುವ ಸಾರ್ವಜನಿಕ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ತೆರಳಿದ್ದೆ ಎಂದು ನ್ಯಾಯಾಲಯದಲ್ಲಿ ಆಕೆ ಹೇಳಿಕೆ ದಾಖಲಿಸಿದ್ದರು.</p>.<p>2018ರಲ್ಲಿ ನಡೆದ ಈ ಪ್ರಕರಣದ ಅಂತಿಮ ವಿಚಾರಣೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನ್ಯಾಯಾಲಯದ ಕಟಕಟೆಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದು, ದೇಶದ ಗಮನ ಸೆಳೆದಿತ್ತು.</p>.<p>ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು 187 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇವರಲ್ಲಿ 113 ಮಂದಿ ಸಂತ್ರಸ್ತರು ಮತ್ತು ಅವರ ಕುಟುಂಬದ ಸದಸ್ಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>