<p><strong>ಅಹಮದಾಬಾದ್:</strong> 2002ರಲ್ಲಿ ಗೋಧ್ರಾದಲ್ಲಿ ಸಾಬರಮತಿ ಎಕ್ಸ್ಪ್ರೆಸ್ ರೈಲು ಬೋಗಿಗಳಿಗೆ ಬೆಂಕಿ ಹಂಚಿದ್ದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಮೂವರನ್ನು ಗುಜರಾತ್ನ ಪಂಚಮಹಲ್ ಜಿಲ್ಲೆಯ ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಮೂರು ವರ್ಷಗಳ ಕಾಲ ವೀಕ್ಷಣಾಲಯಕ್ಕೆ ಕಳುಹಿಸಿದೆ.</p>.<p>ಪ್ರಕರಣ ನಡೆದು 23 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಘಟನೆ ನಡೆದ ಸಂದರ್ಭದಲ್ಲಿ ಈ ಮೂವರು 18 ವರ್ಷಕ್ಕಿಂತ ಕೆಳಗಿನವರಾಗಿದ್ದರು. ಬೆಂಕಿ ಹಂಚಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾದವರಲ್ಲಿ ಕಾನೂನಿನ ಜೊತೆ ಸಂಘರ್ಷಕ್ಕೆ ಒಳಗಾದ ಒಟ್ಟು ಐವರು ಬಾಲಕರು ಇದ್ದರು.</p>.<p class="title">ಒಬ್ಬ ಆರೋಪಿ ವಿಚಾರಣೆ ಅವಧಿಯಲ್ಲಿ ಮೃತಪಟ್ಟರೆ, ಇನ್ನೊಬ್ಬನನ್ನು ಜೆಜೆಬಿ ಖುಲಾಸೆಗೊಳಿಸಿದೆ. ಮಂಗಳವಾರ ತೀರ್ಪು ಪ್ರಕಟಿಸಿದ ಗೋಧ್ರಾ ಜೆಜೆಬಿ ಪ್ರಧಾನ ಮ್ಯಾಜಿಸ್ಟ್ರೇಟ್ ಕೆ.ಎಸ್.ಮೋದಿ ಅವರು ಮೂವರಿಗೂ ತಲಾ ₹15 ಸಾವಿರ ದಂಡ ವಿಧಿಸಿದರು. </p>.<p>2002 ಫೆಬ್ರುವರಿ 27ರಂದು ಗೋಧ್ರಾದಲ್ಲಿ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ 59 ಮಂದಿ ಮೃತಪಟ್ಟಿದ್ದರು. ಬಳಿಕ ರಾಜ್ಯದಾದ್ಯಂತ ಗಲಭೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> 2002ರಲ್ಲಿ ಗೋಧ್ರಾದಲ್ಲಿ ಸಾಬರಮತಿ ಎಕ್ಸ್ಪ್ರೆಸ್ ರೈಲು ಬೋಗಿಗಳಿಗೆ ಬೆಂಕಿ ಹಂಚಿದ್ದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಮೂವರನ್ನು ಗುಜರಾತ್ನ ಪಂಚಮಹಲ್ ಜಿಲ್ಲೆಯ ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಮೂರು ವರ್ಷಗಳ ಕಾಲ ವೀಕ್ಷಣಾಲಯಕ್ಕೆ ಕಳುಹಿಸಿದೆ.</p>.<p>ಪ್ರಕರಣ ನಡೆದು 23 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಘಟನೆ ನಡೆದ ಸಂದರ್ಭದಲ್ಲಿ ಈ ಮೂವರು 18 ವರ್ಷಕ್ಕಿಂತ ಕೆಳಗಿನವರಾಗಿದ್ದರು. ಬೆಂಕಿ ಹಂಚಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾದವರಲ್ಲಿ ಕಾನೂನಿನ ಜೊತೆ ಸಂಘರ್ಷಕ್ಕೆ ಒಳಗಾದ ಒಟ್ಟು ಐವರು ಬಾಲಕರು ಇದ್ದರು.</p>.<p class="title">ಒಬ್ಬ ಆರೋಪಿ ವಿಚಾರಣೆ ಅವಧಿಯಲ್ಲಿ ಮೃತಪಟ್ಟರೆ, ಇನ್ನೊಬ್ಬನನ್ನು ಜೆಜೆಬಿ ಖುಲಾಸೆಗೊಳಿಸಿದೆ. ಮಂಗಳವಾರ ತೀರ್ಪು ಪ್ರಕಟಿಸಿದ ಗೋಧ್ರಾ ಜೆಜೆಬಿ ಪ್ರಧಾನ ಮ್ಯಾಜಿಸ್ಟ್ರೇಟ್ ಕೆ.ಎಸ್.ಮೋದಿ ಅವರು ಮೂವರಿಗೂ ತಲಾ ₹15 ಸಾವಿರ ದಂಡ ವಿಧಿಸಿದರು. </p>.<p>2002 ಫೆಬ್ರುವರಿ 27ರಂದು ಗೋಧ್ರಾದಲ್ಲಿ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ 59 ಮಂದಿ ಮೃತಪಟ್ಟಿದ್ದರು. ಬಳಿಕ ರಾಜ್ಯದಾದ್ಯಂತ ಗಲಭೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>