<p><strong>ನವದೆಹಲಿ:</strong> ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.</p>.<p>ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ವಹಿಸುವ ವಿಚಾರದಲ್ಲಿ ಹೈಕೋರ್ಟ್ ಈ ವರ್ಷದ ಆಗಸ್ಟ್ 10ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಎಂಟು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ, ಟ್ರಸ್ಟಿಗಳು ಹಾಗೂ ಸಂಬಂಧಪಟ್ಟವರಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ನೋಟಿಸ್ ಜಾರಿ ಮಾಡಿದೆ.</p>.<p>ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಠದ ಪರ ವಕೀಲರು ಮನವಿ ಮಾಡಿದರೆ, ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಜೋಸೆಫ್ ಅರಿಸ್ಟಾಟಲ್ ಪೀಠಕ್ಕೆ ಅವರು ವಿವರ ನೀಡಿದರು.</p>.<p>‘ದೇವಸ್ಥಾನವನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡುವ ಮೊದಲು ನಿರ್ವಹಣೆ ಯಾರ<br />ಸುಪರ್ದಿಯಲ್ಲಿತ್ತು’ ಎಂದು ಪೀಠವು ಪ್ರಶ್ನಿಸಿತು.</p>.<p>ಪ್ರಕರಣದ ವಿಚಾರಣೆ ನಡೆಸುವುದಕ್ಕೆ ಸಮ್ಮತಿ ಸೂಚಿಸಿತಲ್ಲದೆ, ರಿಟ್ ಅರ್ಜಿ ಸಲ್ಲಿಸಿರುವ ಶ್ರೀ ಬಾಲಚಂದ್ರ ವಿಘೇಶ್ವರ ದೀಕ್ಷಿತ್ ಮತ್ತಿತರರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶ ನೀಡುವವರೆಗೂ ಹೈಕೋರ್ಟ್ನ ಮಧ್ಯಂತರ ಆದೇಶ ಪಾಲನೆಗೆ ಸೂಚಿಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ಎಂ. ಚಂದ್ರಚೂಡ್ ಅವರನ್ನು ಒಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.</p>.<p>**</p>.<p><strong>ಆಡಳಿತಾಧಿಕಾರ ಆಬಾಧಿತ</strong></p>.<p>ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಮುಂದಿನ ಆದೇಶದವರೆಗೂ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಇದರಿಂದಾಗಿ ಶ್ರೀಮಠಕ್ಕಿರುವ ದೇವಾಲಯದ ನಿರ್ವಹಣಾಧಿಕಾರ ಆಬಾಧಿತವಾಗಿ ಮುಂದುವರಿಯಲಿದೆ ಎಂದು ರಾಮಚಂದ್ರಾಪುರ ಮಠ ಪ್ರತಿಕ್ರಿಯೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.</p>.<p>ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ವಹಿಸುವ ವಿಚಾರದಲ್ಲಿ ಹೈಕೋರ್ಟ್ ಈ ವರ್ಷದ ಆಗಸ್ಟ್ 10ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಎಂಟು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ, ಟ್ರಸ್ಟಿಗಳು ಹಾಗೂ ಸಂಬಂಧಪಟ್ಟವರಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ನೋಟಿಸ್ ಜಾರಿ ಮಾಡಿದೆ.</p>.<p>ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಠದ ಪರ ವಕೀಲರು ಮನವಿ ಮಾಡಿದರೆ, ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಜೋಸೆಫ್ ಅರಿಸ್ಟಾಟಲ್ ಪೀಠಕ್ಕೆ ಅವರು ವಿವರ ನೀಡಿದರು.</p>.<p>‘ದೇವಸ್ಥಾನವನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡುವ ಮೊದಲು ನಿರ್ವಹಣೆ ಯಾರ<br />ಸುಪರ್ದಿಯಲ್ಲಿತ್ತು’ ಎಂದು ಪೀಠವು ಪ್ರಶ್ನಿಸಿತು.</p>.<p>ಪ್ರಕರಣದ ವಿಚಾರಣೆ ನಡೆಸುವುದಕ್ಕೆ ಸಮ್ಮತಿ ಸೂಚಿಸಿತಲ್ಲದೆ, ರಿಟ್ ಅರ್ಜಿ ಸಲ್ಲಿಸಿರುವ ಶ್ರೀ ಬಾಲಚಂದ್ರ ವಿಘೇಶ್ವರ ದೀಕ್ಷಿತ್ ಮತ್ತಿತರರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶ ನೀಡುವವರೆಗೂ ಹೈಕೋರ್ಟ್ನ ಮಧ್ಯಂತರ ಆದೇಶ ಪಾಲನೆಗೆ ಸೂಚಿಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ಎಂ. ಚಂದ್ರಚೂಡ್ ಅವರನ್ನು ಒಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.</p>.<p>**</p>.<p><strong>ಆಡಳಿತಾಧಿಕಾರ ಆಬಾಧಿತ</strong></p>.<p>ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಮುಂದಿನ ಆದೇಶದವರೆಗೂ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಇದರಿಂದಾಗಿ ಶ್ರೀಮಠಕ್ಕಿರುವ ದೇವಾಲಯದ ನಿರ್ವಹಣಾಧಿಕಾರ ಆಬಾಧಿತವಾಗಿ ಮುಂದುವರಿಯಲಿದೆ ಎಂದು ರಾಮಚಂದ್ರಾಪುರ ಮಠ ಪ್ರತಿಕ್ರಿಯೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>