<p><strong>ನವದೆಹಲಿ:</strong> ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಬಂಧನದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಗುರುವಾರ ಹೊಸದಾಗಿ ದಾಳಿ ನಡೆಸಿ ₹50.33 ಕೋಟಿ ಮೌಲ್ಯದ 40 ಕೆ.ಜಿ ಬಂಗಾರವನ್ನು ವಶಕ್ಕೆ ಪಡೆದಿದೆ.</p>.<p>ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿರುವ ಚಳ್ಳಕೆರೆಯ ಎರಡು ಲಾಕರ್ಗಳಲ್ಲಿಡಲಾಗಿದ್ದ 24 ಕ್ಯಾರಟ್ ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ. </p>.<p>ಚಿನ್ನದ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.</p>.<p>ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ವೀರೇಂದ್ರ ಅವರನ್ನು ಕಳೆದ ಆಗಸ್ಟ್ ತಿಂಗಳಲ್ಲಿ ಇ.ಡಿ. ಬಂಧಿಸಿತ್ತು. ಕ್ಯಾಸಿನೊ ಅನ್ನು ಗುತ್ತಿಗೆ ಪಡೆಯಲು ಸಿಕ್ಕಿಂಗೆ ತೆರಳಿದ್ದ ವೇಳೆ ಅಲ್ಲಿಯೇ ಬಂಧಿಸಿ, ಕರೆತರಲಾಗಿತ್ತು. ವೀರೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ವೀರೇಂದ್ರ ಅವರೇ ಪ್ರಮುಖ ಆರೋಪಿ ಎಂದು ಇ.ಡಿ ತಿಳಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯವು ₹103 ಕೋಟಿ ಮೌಲ್ಯದ 21 ಕೆ.ಜಿ ಬಂಗಾರ, ಚಿನ್ನದ ಗಟ್ಟಿಗಳು, ಚಿನ್ನ, ಬೆಳ್ಳಿ ಆಭರಣಗಳು, ಬ್ಯಾಂಕ್ ಖಾತೆಯಲ್ಲಿದ್ದ ನಗದು ಹಾಗೂ ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿತ್ತು.</p>.<p>‘ಅಕ್ರಮ ಆನ್ಲೈನ್ ಬೆಟ್ಟಿಂಗ್ ವೆಬ್ಸೈಟ್ಗಳಾದ ‘ಕಿಂಗ್ 567’ ಹಾಗೂ ‘ರಾಜಾ567’ ಕಾರ್ಯಾಚರಣೆಯಲ್ಲಿ ವೀರೇಂದ್ರ ಹಾಗೂ ಅವರ ಸ್ನೇಹಿತರು, ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಈ ವೆಬ್ಸೈಟ್ ಮೂಲಕ ದೇಶದಾದ್ಯಂತ ಸಾವಿರಾರು ಮಂದಿ ಅಮಾಯಕರಿಗೆ ಮೋಸಮಾಡಿದ್ದರು. ವೀರೇಂದ್ರ ಅವರು ನಿಯಂತ್ರಿಸುತ್ತಿದ್ದ ಬೆಟ್ಟಿಂಗ್ ವೆಬ್ಸೈಟ್ಗಳ ವಹಿವಾಟು ₹2ಸಾವಿರ ಕೋಟಿಗಿಂತಲೂ ಹೆಚ್ಚಿದೆ’ ಎಂದು ಇ.ಡಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಬಂಧನದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಗುರುವಾರ ಹೊಸದಾಗಿ ದಾಳಿ ನಡೆಸಿ ₹50.33 ಕೋಟಿ ಮೌಲ್ಯದ 40 ಕೆ.ಜಿ ಬಂಗಾರವನ್ನು ವಶಕ್ಕೆ ಪಡೆದಿದೆ.</p>.<p>ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿರುವ ಚಳ್ಳಕೆರೆಯ ಎರಡು ಲಾಕರ್ಗಳಲ್ಲಿಡಲಾಗಿದ್ದ 24 ಕ್ಯಾರಟ್ ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ. </p>.<p>ಚಿನ್ನದ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.</p>.<p>ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ವೀರೇಂದ್ರ ಅವರನ್ನು ಕಳೆದ ಆಗಸ್ಟ್ ತಿಂಗಳಲ್ಲಿ ಇ.ಡಿ. ಬಂಧಿಸಿತ್ತು. ಕ್ಯಾಸಿನೊ ಅನ್ನು ಗುತ್ತಿಗೆ ಪಡೆಯಲು ಸಿಕ್ಕಿಂಗೆ ತೆರಳಿದ್ದ ವೇಳೆ ಅಲ್ಲಿಯೇ ಬಂಧಿಸಿ, ಕರೆತರಲಾಗಿತ್ತು. ವೀರೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ವೀರೇಂದ್ರ ಅವರೇ ಪ್ರಮುಖ ಆರೋಪಿ ಎಂದು ಇ.ಡಿ ತಿಳಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯವು ₹103 ಕೋಟಿ ಮೌಲ್ಯದ 21 ಕೆ.ಜಿ ಬಂಗಾರ, ಚಿನ್ನದ ಗಟ್ಟಿಗಳು, ಚಿನ್ನ, ಬೆಳ್ಳಿ ಆಭರಣಗಳು, ಬ್ಯಾಂಕ್ ಖಾತೆಯಲ್ಲಿದ್ದ ನಗದು ಹಾಗೂ ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿತ್ತು.</p>.<p>‘ಅಕ್ರಮ ಆನ್ಲೈನ್ ಬೆಟ್ಟಿಂಗ್ ವೆಬ್ಸೈಟ್ಗಳಾದ ‘ಕಿಂಗ್ 567’ ಹಾಗೂ ‘ರಾಜಾ567’ ಕಾರ್ಯಾಚರಣೆಯಲ್ಲಿ ವೀರೇಂದ್ರ ಹಾಗೂ ಅವರ ಸ್ನೇಹಿತರು, ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಈ ವೆಬ್ಸೈಟ್ ಮೂಲಕ ದೇಶದಾದ್ಯಂತ ಸಾವಿರಾರು ಮಂದಿ ಅಮಾಯಕರಿಗೆ ಮೋಸಮಾಡಿದ್ದರು. ವೀರೇಂದ್ರ ಅವರು ನಿಯಂತ್ರಿಸುತ್ತಿದ್ದ ಬೆಟ್ಟಿಂಗ್ ವೆಬ್ಸೈಟ್ಗಳ ವಹಿವಾಟು ₹2ಸಾವಿರ ಕೋಟಿಗಿಂತಲೂ ಹೆಚ್ಚಿದೆ’ ಎಂದು ಇ.ಡಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>