<p><strong>ತಿರುವನಂತಪುರ: </strong>ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ‘ಯುಡಿಎಫ್’ ಸೋಮವಾರ ನಿರ್ಧರಿಸಿದೆ.</p>.<p>ಇತ್ತೀಚೆಗೆ ಬೆಳಕಿಗೆ ಬಂದಿರುವ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ವಿಜಯನ್ ಅವರ ಕಚೇರಿಯೇ ಶಾಮೀಲಾಗಿದ್ದರಿಂದ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ.</p>.<p>‘ಮುಖ್ಯಮಂತ್ರಿ ವಿರುದ್ಧ ಅವಿಶ್ವಾಸ ನಿರ್ಣಯ ಮಾತ್ರವಲ್ಲ, ಸ್ಪೀಕರ್ ವಿರುದ್ಧವೂ ನಿರ್ಣಯ ಮಂಡಿಸಲು ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಯುಡಿಎಫ್ನ ಸಂಚಾಲಕ ಬೆನ್ನಿ ಹೆನನ್ ತಿಳಿಸಿದ್ದಾರೆ.</p>.<p>‘ಚಿನ್ನದ ಕಳ್ಳಸಾಗಾಣಿಕೆ ಆರೋಪಿಗಳಲ್ಲಿ ಒಬ್ಬರ ಜತೆಗೆ ಸ್ಪೀಕರ್ ಸಂಪರ್ಕ ಹೊಂದಿದ್ದರು. ಆದ್ದರಿಂದ ಅವರೂ ಆ ಹುದ್ದೆಯಿಂದ ಕೆಳಗಿಳಿಯಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ನಾವು ರಾಜ್ಯದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಿದ್ದೇವೆ’ ಎಂದು ಬೆನ್ನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ‘ಯುಡಿಎಫ್’ ಸೋಮವಾರ ನಿರ್ಧರಿಸಿದೆ.</p>.<p>ಇತ್ತೀಚೆಗೆ ಬೆಳಕಿಗೆ ಬಂದಿರುವ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ವಿಜಯನ್ ಅವರ ಕಚೇರಿಯೇ ಶಾಮೀಲಾಗಿದ್ದರಿಂದ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ.</p>.<p>‘ಮುಖ್ಯಮಂತ್ರಿ ವಿರುದ್ಧ ಅವಿಶ್ವಾಸ ನಿರ್ಣಯ ಮಾತ್ರವಲ್ಲ, ಸ್ಪೀಕರ್ ವಿರುದ್ಧವೂ ನಿರ್ಣಯ ಮಂಡಿಸಲು ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಯುಡಿಎಫ್ನ ಸಂಚಾಲಕ ಬೆನ್ನಿ ಹೆನನ್ ತಿಳಿಸಿದ್ದಾರೆ.</p>.<p>‘ಚಿನ್ನದ ಕಳ್ಳಸಾಗಾಣಿಕೆ ಆರೋಪಿಗಳಲ್ಲಿ ಒಬ್ಬರ ಜತೆಗೆ ಸ್ಪೀಕರ್ ಸಂಪರ್ಕ ಹೊಂದಿದ್ದರು. ಆದ್ದರಿಂದ ಅವರೂ ಆ ಹುದ್ದೆಯಿಂದ ಕೆಳಗಿಳಿಯಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ನಾವು ರಾಜ್ಯದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಿದ್ದೇವೆ’ ಎಂದು ಬೆನ್ನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>