<p><strong>ತಿರುವನಂತಪುರ: </strong>ಚಿನ್ನದ ಕಳ್ಳ ಸಾಗಾಣಿಕೆ ನಡೆಸುತ್ತಿದ್ದ ಜಾಲದ ಜತೆಗೆ ಮುಖ್ಯಮಂತ್ರಿ ಕಚೇರಿ ನೇರ ಸಂಪರ್ಕ ಹೊಂದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಯಾವ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂಬುದು ಕೇಂದ್ರಕ್ಕೆ ಬಿಟ್ಟ ವಿಚಾರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.</p>.<p>ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಚಿನ್ನದ ಕಳ್ಳ ಸಾಗಾಣಿಕೆ ಜಾಲದ ಜತೆಗೆ ನಂಟು ಹೊಂದಿದ್ದಾರೆಂಬ ವಿಚಾರ ಕೇರಳ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ವಾಗ್ದಾಳಿ ನಡೆಸಿವೆ.</p>.<p>ಚಿನ್ನದ ಕಳ್ಳ ಸಾಗಾಣಿಕೆಯಲ್ಲಿ ಅರಬ್ ಸಂಯುಕ್ತ ರಾಷ್ಟ್ರಗಳ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಕಾರಣಕ್ಕೆ ಪಿಣರಾಯಿ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಮಂಗಳವಾರ ಹುದ್ದೆಯಿಂದ ತೆರವುಗೊಳಿಸಲಾಗಿತ್ತು.</p>.<p>‘ಕಳ್ಳಸಾಗಾಣಿಕೆ ನಡೆಸುತ್ತಿದ್ದ ಜಾಲದ ಜತೆಗೆ ಮುಖ್ಯಮಂತ್ರಿ ಕಚೇರಿ ನೇರ ಸಂಪರ್ಕ ಹೊಂದಿದೆ. ಆರೋಪಿ ಸ್ವಪ್ನಾ 2017ರಿಂದಲೇ ಮುಖ್ಯಮಂತ್ರಿಗೆ ಪರಿಚಿತರು’ ಎಂದು ಬಿಜೆಪಿ ಆರೋಪಿಸಿತ್ತು. ಅದರ ಬೆನ್ನಲ್ಲೇ, ‘ಈ ಕುರಿತು ಸಿಬಿಐ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.</p>.<p><a href="https://www.prajavani.net/stories/india-news/kerala-cms-principal-secretary-removed-following-alleged-nexus-with-smuggling-racket-742871.html" target="_blank">ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಚಿನ್ನದ ಕಳ್ಳ ಸಾಗಾಣಿಕೆ ನಡೆಸುತ್ತಿದ್ದ ಜಾಲದ ಜತೆಗೆ ಮುಖ್ಯಮಂತ್ರಿ ಕಚೇರಿ ನೇರ ಸಂಪರ್ಕ ಹೊಂದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಯಾವ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂಬುದು ಕೇಂದ್ರಕ್ಕೆ ಬಿಟ್ಟ ವಿಚಾರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.</p>.<p>ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಚಿನ್ನದ ಕಳ್ಳ ಸಾಗಾಣಿಕೆ ಜಾಲದ ಜತೆಗೆ ನಂಟು ಹೊಂದಿದ್ದಾರೆಂಬ ವಿಚಾರ ಕೇರಳ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ವಾಗ್ದಾಳಿ ನಡೆಸಿವೆ.</p>.<p>ಚಿನ್ನದ ಕಳ್ಳ ಸಾಗಾಣಿಕೆಯಲ್ಲಿ ಅರಬ್ ಸಂಯುಕ್ತ ರಾಷ್ಟ್ರಗಳ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಕಾರಣಕ್ಕೆ ಪಿಣರಾಯಿ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಮಂಗಳವಾರ ಹುದ್ದೆಯಿಂದ ತೆರವುಗೊಳಿಸಲಾಗಿತ್ತು.</p>.<p>‘ಕಳ್ಳಸಾಗಾಣಿಕೆ ನಡೆಸುತ್ತಿದ್ದ ಜಾಲದ ಜತೆಗೆ ಮುಖ್ಯಮಂತ್ರಿ ಕಚೇರಿ ನೇರ ಸಂಪರ್ಕ ಹೊಂದಿದೆ. ಆರೋಪಿ ಸ್ವಪ್ನಾ 2017ರಿಂದಲೇ ಮುಖ್ಯಮಂತ್ರಿಗೆ ಪರಿಚಿತರು’ ಎಂದು ಬಿಜೆಪಿ ಆರೋಪಿಸಿತ್ತು. ಅದರ ಬೆನ್ನಲ್ಲೇ, ‘ಈ ಕುರಿತು ಸಿಬಿಐ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.</p>.<p><a href="https://www.prajavani.net/stories/india-news/kerala-cms-principal-secretary-removed-following-alleged-nexus-with-smuggling-racket-742871.html" target="_blank">ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>