<p><strong>ಪಟ್ನಾ</strong>: ಬಿಹಾರದ ಜಮೂಯಿ ಜಿಲ್ಲೆಯಲ್ಲಿ ಸರಕು ಸಾಗಣೆ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿದ್ದು, ಹೌರಾ - ಪಟ್ನಾ ಹಾಗೂ ದೆಹಲಿ ಮಾರ್ಗದ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.</p><p>ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪೂರ್ವ ರೈಲ್ವೆಯ ಅಸನ್ಸೋಲ್ ವಿಭಾಗದ ಲಹಬೋನ್ ಮತ್ತು ಸಿಮುಲ್ತಾಲಾ ನಿಲ್ದಾಣಗಳ ನಡುವೆ ಶನಿವಾರ ರಾತ್ರಿ 11.25 ರ ಸುಮಾರಿಗೆ ಅವಘಡವಾಗಿದೆ. ಇದರಿಂದಾಗಿ, ರಾತ್ರಿಯಿಡೀ 20ಕ್ಕೂ ಹೆಚ್ಚು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದ್ದು, ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.</p><p>ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಸನ್ಸೋಲ್, ಮಧುಪುರ ಹಾಗೂ ಝಝಾ ನಿಲ್ದಾಣಗಳಿಂದ ಕಾರ್ಯಾಚರಣೆ ರೈಲುಗಳನ್ನು ಕಳುಹಿಸಲಾಗಿದೆ. ಹಳಿ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರವೇ ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.</p><p>ಇತ್ತೀಚೆಗೆ ಅಸ್ಸಾಂನ ಹೋಜಾಯಿ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿ ಎಂಟು ಆನೆಗಳು ಸಾವಿಗೀಡಾಗಿದ್ದವು.</p><p>ಡಿಸೆಂಬರ್ 20ರ ತಡರಾತ್ರಿ ಹಳಿ ದಾಟುತ್ತಿದ್ದ ಆನೆಗಳಿಗೆ ಸಾಯಿರಂಗ್–ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿತ್ತು. ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಒಂದು ಆನೆ ಮರುದಿನ ಮೃತಪಟ್ಟಿತ್ತು.</p><p>ಡಿಕ್ಕಿ ರಭಸಕ್ಕೆ ಐದು ಬೋಗಿಗಳು ಹಳಿ ತಪ್ಪಿದ್ದವು. ಘಟನೆಯ ಬೆನ್ನಲ್ಲೇ, ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು.</p>.ಅಸ್ಸಾಂ | ಎಕ್ಸ್ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ಜಮೂಯಿ ಜಿಲ್ಲೆಯಲ್ಲಿ ಸರಕು ಸಾಗಣೆ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿದ್ದು, ಹೌರಾ - ಪಟ್ನಾ ಹಾಗೂ ದೆಹಲಿ ಮಾರ್ಗದ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.</p><p>ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪೂರ್ವ ರೈಲ್ವೆಯ ಅಸನ್ಸೋಲ್ ವಿಭಾಗದ ಲಹಬೋನ್ ಮತ್ತು ಸಿಮುಲ್ತಾಲಾ ನಿಲ್ದಾಣಗಳ ನಡುವೆ ಶನಿವಾರ ರಾತ್ರಿ 11.25 ರ ಸುಮಾರಿಗೆ ಅವಘಡವಾಗಿದೆ. ಇದರಿಂದಾಗಿ, ರಾತ್ರಿಯಿಡೀ 20ಕ್ಕೂ ಹೆಚ್ಚು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದ್ದು, ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.</p><p>ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಸನ್ಸೋಲ್, ಮಧುಪುರ ಹಾಗೂ ಝಝಾ ನಿಲ್ದಾಣಗಳಿಂದ ಕಾರ್ಯಾಚರಣೆ ರೈಲುಗಳನ್ನು ಕಳುಹಿಸಲಾಗಿದೆ. ಹಳಿ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರವೇ ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.</p><p>ಇತ್ತೀಚೆಗೆ ಅಸ್ಸಾಂನ ಹೋಜಾಯಿ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿ ಎಂಟು ಆನೆಗಳು ಸಾವಿಗೀಡಾಗಿದ್ದವು.</p><p>ಡಿಸೆಂಬರ್ 20ರ ತಡರಾತ್ರಿ ಹಳಿ ದಾಟುತ್ತಿದ್ದ ಆನೆಗಳಿಗೆ ಸಾಯಿರಂಗ್–ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿತ್ತು. ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಒಂದು ಆನೆ ಮರುದಿನ ಮೃತಪಟ್ಟಿತ್ತು.</p><p>ಡಿಕ್ಕಿ ರಭಸಕ್ಕೆ ಐದು ಬೋಗಿಗಳು ಹಳಿ ತಪ್ಪಿದ್ದವು. ಘಟನೆಯ ಬೆನ್ನಲ್ಲೇ, ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು.</p>.ಅಸ್ಸಾಂ | ಎಕ್ಸ್ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>