<p><strong>ಭುವನೇಶ್ವರ</strong>: ಒಡಿಶಾದಲ್ಲಿ ಕಳೆದ ಶುಕ್ರವಾರ ನಡೆದಿದ್ದ ಭೀಕರ ತ್ರಿವಳಿ ರೈಲು ದುರಂತದ ಘಟನಾ ಸ್ಥಳದ ಸನಿಹವೇ ಮತ್ತೊಂದು ರೈಲು ದುರಂತ ಇಂದು ಸಂಭವಿಸಿದೆ.</p><p>ಸರಕು ಸಾಗಣೆ ರೈಲೊಂದು ಹರಿದು 6 ಕಾರ್ಮಿಕರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಒಡಿಶಾದ ಜಾಜ್ಪುರ್ ಜಿಲ್ಲೆಯ ಜಾಜ್ಪುರ್ ಕಿಯೋಂಜಾರ್ ರಸ್ತೆ ರೈಲು ನಿಲ್ದಾಣದ ಬಳಿ ನಡೆದಿದೆ.</p><p>ದಿಢೀರ್ನೇ ಗುಡುಗು–ಮಿಂಚು ಸಹಿತ ಮಳೆ ಪ್ರಾರಂಭವಾಗಿದ್ದರಿಂದ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಶ್ರಯ ಪಡೆಯಲು ಸರಕು ಸಾಗಣೆ ರೈಲಿನ ಕೆಳಗೆ ನಿಂತಿದ್ದರು. ಈ ವೇಳೆ ರೈಲು ಚಲಿಸಿದ್ದರಿಂದ ಕೆಳಗೆ ಸಿಲುಕಿ 6 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸ್ಥಳಕ್ಕೆ ಆ ಭಾಗದ ಹಿರಿಯ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.</p><p>ಬಾಲೇಶ್ವರ ರೈಲು ದುರಂತದಲ್ಲಿ ಕನಿಷ್ಠ 288 ಜನ ಮೃತಪಟ್ಟು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾದಲ್ಲಿ ಕಳೆದ ಶುಕ್ರವಾರ ನಡೆದಿದ್ದ ಭೀಕರ ತ್ರಿವಳಿ ರೈಲು ದುರಂತದ ಘಟನಾ ಸ್ಥಳದ ಸನಿಹವೇ ಮತ್ತೊಂದು ರೈಲು ದುರಂತ ಇಂದು ಸಂಭವಿಸಿದೆ.</p><p>ಸರಕು ಸಾಗಣೆ ರೈಲೊಂದು ಹರಿದು 6 ಕಾರ್ಮಿಕರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಒಡಿಶಾದ ಜಾಜ್ಪುರ್ ಜಿಲ್ಲೆಯ ಜಾಜ್ಪುರ್ ಕಿಯೋಂಜಾರ್ ರಸ್ತೆ ರೈಲು ನಿಲ್ದಾಣದ ಬಳಿ ನಡೆದಿದೆ.</p><p>ದಿಢೀರ್ನೇ ಗುಡುಗು–ಮಿಂಚು ಸಹಿತ ಮಳೆ ಪ್ರಾರಂಭವಾಗಿದ್ದರಿಂದ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಶ್ರಯ ಪಡೆಯಲು ಸರಕು ಸಾಗಣೆ ರೈಲಿನ ಕೆಳಗೆ ನಿಂತಿದ್ದರು. ಈ ವೇಳೆ ರೈಲು ಚಲಿಸಿದ್ದರಿಂದ ಕೆಳಗೆ ಸಿಲುಕಿ 6 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸ್ಥಳಕ್ಕೆ ಆ ಭಾಗದ ಹಿರಿಯ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.</p><p>ಬಾಲೇಶ್ವರ ರೈಲು ದುರಂತದಲ್ಲಿ ಕನಿಷ್ಠ 288 ಜನ ಮೃತಪಟ್ಟು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>