<p><strong>ಲಖನೌ:</strong> ಮೂವರು ಸ್ನೇಹಿತರು ಗೂಗಲ್ ಮ್ಯಾಪ್ ನೆರವಿನಿಂದ ಕಾರು ಚಲಾಯಿಸಿಕೊಂಡು ಸೇತುವೆಯ ಮೇಲೆ ಹೋಗಿ, ನದಿಗೆ ಉರುಳಿ ಮೃತಪಟ್ಟ ಪ್ರಕರಣದ ಬಳಿಕ ಹಾನಿಗೊಳಗಾದ ಸೇತುವೆಯ ಮಾರ್ಗವನ್ನು ಗೂಗಲ್ ಮ್ಯಾಪ್ನಿಂದ ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. </p><p>ನವೆಂಬರ್ 24ರಂದು (ಭಾನುವಾರ) ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮೂವರು ಸ್ನೇಹಿತರು ಗೂಗಲ್ ಮ್ಯಾಪ್ ನೆರವಿನಿಂದ ಕಾರು ಚಲಾಯಿಸಿಕೊಂಡು ಹಾನಿಗೊಳಗಾದ ಸೇತುವೆಯಿಂದ ರಾಮ್ಗಂಗಾ ನದಿಗೆ ಬಿದ್ದು ಮೃತಪಟ್ಟಿದ್ದರು. </p><p>ಘಟನೆ ಸಂಬಂಧ ಗೂಗಲ್ ಮ್ಯಾಪ್ಸ್ ಇಂಡಿಯಾ ಹಾಗೂ ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಎಂಜಿನಿಯರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು, ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. </p><p>ಹಾನಿಗೊಳಗಾದ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇನ್ನು ಮುಂದೆ ಗೂಗಲ್ ಮ್ಯಾಪ್ನಲ್ಲಿ ಕಾಣಿಸುವುದಿಲ್ಲ. ಆ ಮಾರ್ಗವನ್ನು ಅಪ್ಲಿಕೇಷನ್ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್ ಮ್ಯಾಪ್ಸ್ ಇಂಡಿಯಾ ತಿಳಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p><p>ಸೇತುವೆಗೆ ಹೋಗುವ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸರಿಯಾದ ಫಲಕಗಳನ್ನು ಹಾಕದಿರುವುದೇ ಘಟನೆ ಕಾರಣ ಎಂದು ಅವರು ದೂರಿದ್ದಾರೆ.</p><p>ಕೆಲವು ದಿನಗಳ ಹಿಂದೆ ರಸ್ತೆಗೆ ಅಡ್ಡಲಾಗಿ ಸಣ್ಣ ಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ, ಕೆಲವರು ಗೋಡೆಯನ್ನು ಕೆಡವಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಘಟನೆಗೆ ಸಂಬಂಧ ಈಗಾಗಲೇ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಪಿಡಬ್ಲ್ಯುಡಿ ಎಂಜಿನಿಯರ್ಗಳ ವಿರುದ್ಧ ಕ್ರಮಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.</p><p>ಬದೌನ್ ಜಿಲ್ಲೆಯ ದತಗಂಜ್-ಫರೀದ್ಪುರ ರಸ್ತೆಯಲ್ಲಿರುವ ಮುಡಾ ಗ್ರಾಮದ ಬಳಿ ಸೇತುವೆಯ ಒಂದು ಭಾಗವು ಪ್ರವಾಹದಿಂದಾಗಿ ಹಾನಿಗೊಳಗಾಗಿತ್ತು. ಇದರಿಂದಾಗಿ ಸೇತುವೆ ಮೇಲೆ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.</p><p>‘ಈ ವರ್ಷ ಸುರಿದ ಪ್ರವಾಹದಿಂದ ಸೇತುವೆಯ ಒಂದು ಭಾಗವು ಕೊಚ್ಚಿ ಹೋಗಿತ್ತು. ಆದರೆ, ಜಿಪಿಎಸ್ನಲ್ಲಿ ಈ ಬದಲಾವಣೆಯೂ ಪರಿಷ್ಕರಣೆಗೊಂಡಿರಲಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.</p>.Google Maps ಎಡವಟ್ಟು! ಅಪೂರ್ಣ ಸೇತುವೆ ಮೇಲೆ ಕಾರು ಚಲಾಯಿಸಿ ಮೂವರು ಸಾವು– FIR.ಜಿಪಿಎಸ್ ನೇವಿಗೇಷನ್ ಬಳಸಿ ಚಾಲನೆ, ನದಿಗೆ ಉರುಳಿದ ಕಾರು; ಮೂವರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮೂವರು ಸ್ನೇಹಿತರು ಗೂಗಲ್ ಮ್ಯಾಪ್ ನೆರವಿನಿಂದ ಕಾರು ಚಲಾಯಿಸಿಕೊಂಡು ಸೇತುವೆಯ ಮೇಲೆ ಹೋಗಿ, ನದಿಗೆ ಉರುಳಿ ಮೃತಪಟ್ಟ ಪ್ರಕರಣದ ಬಳಿಕ ಹಾನಿಗೊಳಗಾದ ಸೇತುವೆಯ ಮಾರ್ಗವನ್ನು ಗೂಗಲ್ ಮ್ಯಾಪ್ನಿಂದ ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. </p><p>ನವೆಂಬರ್ 24ರಂದು (ಭಾನುವಾರ) ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮೂವರು ಸ್ನೇಹಿತರು ಗೂಗಲ್ ಮ್ಯಾಪ್ ನೆರವಿನಿಂದ ಕಾರು ಚಲಾಯಿಸಿಕೊಂಡು ಹಾನಿಗೊಳಗಾದ ಸೇತುವೆಯಿಂದ ರಾಮ್ಗಂಗಾ ನದಿಗೆ ಬಿದ್ದು ಮೃತಪಟ್ಟಿದ್ದರು. </p><p>ಘಟನೆ ಸಂಬಂಧ ಗೂಗಲ್ ಮ್ಯಾಪ್ಸ್ ಇಂಡಿಯಾ ಹಾಗೂ ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಎಂಜಿನಿಯರ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು, ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. </p><p>ಹಾನಿಗೊಳಗಾದ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇನ್ನು ಮುಂದೆ ಗೂಗಲ್ ಮ್ಯಾಪ್ನಲ್ಲಿ ಕಾಣಿಸುವುದಿಲ್ಲ. ಆ ಮಾರ್ಗವನ್ನು ಅಪ್ಲಿಕೇಷನ್ನಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್ ಮ್ಯಾಪ್ಸ್ ಇಂಡಿಯಾ ತಿಳಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p><p>ಸೇತುವೆಗೆ ಹೋಗುವ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸರಿಯಾದ ಫಲಕಗಳನ್ನು ಹಾಕದಿರುವುದೇ ಘಟನೆ ಕಾರಣ ಎಂದು ಅವರು ದೂರಿದ್ದಾರೆ.</p><p>ಕೆಲವು ದಿನಗಳ ಹಿಂದೆ ರಸ್ತೆಗೆ ಅಡ್ಡಲಾಗಿ ಸಣ್ಣ ಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ, ಕೆಲವರು ಗೋಡೆಯನ್ನು ಕೆಡವಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಘಟನೆಗೆ ಸಂಬಂಧ ಈಗಾಗಲೇ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಪಿಡಬ್ಲ್ಯುಡಿ ಎಂಜಿನಿಯರ್ಗಳ ವಿರುದ್ಧ ಕ್ರಮಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.</p><p>ಬದೌನ್ ಜಿಲ್ಲೆಯ ದತಗಂಜ್-ಫರೀದ್ಪುರ ರಸ್ತೆಯಲ್ಲಿರುವ ಮುಡಾ ಗ್ರಾಮದ ಬಳಿ ಸೇತುವೆಯ ಒಂದು ಭಾಗವು ಪ್ರವಾಹದಿಂದಾಗಿ ಹಾನಿಗೊಳಗಾಗಿತ್ತು. ಇದರಿಂದಾಗಿ ಸೇತುವೆ ಮೇಲೆ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.</p><p>‘ಈ ವರ್ಷ ಸುರಿದ ಪ್ರವಾಹದಿಂದ ಸೇತುವೆಯ ಒಂದು ಭಾಗವು ಕೊಚ್ಚಿ ಹೋಗಿತ್ತು. ಆದರೆ, ಜಿಪಿಎಸ್ನಲ್ಲಿ ಈ ಬದಲಾವಣೆಯೂ ಪರಿಷ್ಕರಣೆಗೊಂಡಿರಲಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.</p>.Google Maps ಎಡವಟ್ಟು! ಅಪೂರ್ಣ ಸೇತುವೆ ಮೇಲೆ ಕಾರು ಚಲಾಯಿಸಿ ಮೂವರು ಸಾವು– FIR.ಜಿಪಿಎಸ್ ನೇವಿಗೇಷನ್ ಬಳಸಿ ಚಾಲನೆ, ನದಿಗೆ ಉರುಳಿದ ಕಾರು; ಮೂವರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>