ಈ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದರಿಂದ ಹೆಚ್ಚಿನ ವಾದ ಅಗತ್ಯವಿಲ್ಲ. ಅಗತ್ಯವಾದ ಕ್ರಮವನ್ನು ಶೀಘ್ರವೇ ತೆಗೆದುಕೊಳ್ಳಲಾಗುವುದು ಎಂದು ಪೀಠಕ್ಕೆ ತಿಳಿಸಿದ ಅವರು, ಸೋಮವಾರಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿಕೊಂಡರು. ಅಲ್ಲದೆ ಆ ವೇಳೆಗೆ ‘ಏನಾದರೊಂದು ಆಗಬಹುದು’ ಎಂದು ಎ.ಜಿ ಹೇಳಿದರು.
ಎ.ಜಿ ತೋರಿಸಿದ ವಿಶ್ವಾಸದ ಹಿನ್ನೆಲೆಯಲ್ಲಿ ಮುಂದೂಡಲು ಯಾವುದೇ ಸಮಸ್ಯೆ ಇಲ್ಲ ಎಂದು ಕರ್ನಾಟಕದ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು.