<p><strong>ಚಂಡೀಗಡ:</strong> ಶವಗಳ ರಾಶಿಯನ್ನು ನೋಡಲು ಆಗದಿರುವ ಕಾರಣ ಸರ್ಕಾರವು ಕೋವಿಡ್-19- ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಪ್ಪಿಸಲು ಮಾರ್ಗಸೂಚಿಗಳನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಿದೆ. ಇದರಿಂದ ಜನರಿಗೆ ತೊಂದರೆಯಾಗಬಹುದು ಎಂದು ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.</p>.<p>ಕೋವಿಡ್-19 ನಿಯಂತ್ರಿಸಲು ಎರಡು ದಾರಿಗಳಿವೆ. ʼಒಂದು ಲಾಕ್ಡೌನ್. ಜೀವನ ಮುಂದೆ ಸಾಗುವುದನ್ನು ನಾವು ಬಯಸುತ್ತೇವೆ ಹಾಗಾಗಿ ಅದು ಸಾಧ್ಯವಿಲ್ಲ. ಆದರೆ, ಅದೇ ವೇಳೆ ಜನರೂ ಸುರಕ್ಷಿತರಾಗಿರಬೇಕಾಗಿದೆ.ಸೋಂಕು ಹರಡುವಿಕೆಯನ್ನು ತಡೆಯುವ ಇನ್ನೊಂದು ಮಾರ್ಗವೆಂದರೆ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿದೆʼಎಂದಿದ್ದಾರೆ.</p>.<p>ಮುಂದುವರಿದು, ʼಜನರಿಗೆ ತೊಂದರೆಯಾದರೂ ಸರಿ, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ನಾವು ಅವರ ಆಕ್ರೋ಼ಶವನ್ನು ಎದುರಿಸಬಲ್ಲೆವು. ಆದರೆ, ಶವಗಳ ರಾಶಿಯನ್ನು ನೊಡಲಾಗದುʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಬೇರೆದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಾಗಿದ್ದು, ಸಾವಿನ ಪ್ರಮಾಣ ಕಡಿಮೆ ಇದೆ ಎಂದೂ ವಿಜ್ ತಿಳಿಸಿದ್ದಾರೆ.<br /><br />ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹರಿಯಾಣದಲ್ಲಿ27,421 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ3,316ಕ್ಕೆ ಏರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಶವಗಳ ರಾಶಿಯನ್ನು ನೋಡಲು ಆಗದಿರುವ ಕಾರಣ ಸರ್ಕಾರವು ಕೋವಿಡ್-19- ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಪ್ಪಿಸಲು ಮಾರ್ಗಸೂಚಿಗಳನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಿದೆ. ಇದರಿಂದ ಜನರಿಗೆ ತೊಂದರೆಯಾಗಬಹುದು ಎಂದು ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.</p>.<p>ಕೋವಿಡ್-19 ನಿಯಂತ್ರಿಸಲು ಎರಡು ದಾರಿಗಳಿವೆ. ʼಒಂದು ಲಾಕ್ಡೌನ್. ಜೀವನ ಮುಂದೆ ಸಾಗುವುದನ್ನು ನಾವು ಬಯಸುತ್ತೇವೆ ಹಾಗಾಗಿ ಅದು ಸಾಧ್ಯವಿಲ್ಲ. ಆದರೆ, ಅದೇ ವೇಳೆ ಜನರೂ ಸುರಕ್ಷಿತರಾಗಿರಬೇಕಾಗಿದೆ.ಸೋಂಕು ಹರಡುವಿಕೆಯನ್ನು ತಡೆಯುವ ಇನ್ನೊಂದು ಮಾರ್ಗವೆಂದರೆ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿದೆʼಎಂದಿದ್ದಾರೆ.</p>.<p>ಮುಂದುವರಿದು, ʼಜನರಿಗೆ ತೊಂದರೆಯಾದರೂ ಸರಿ, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ನಾವು ಅವರ ಆಕ್ರೋ಼ಶವನ್ನು ಎದುರಿಸಬಲ್ಲೆವು. ಆದರೆ, ಶವಗಳ ರಾಶಿಯನ್ನು ನೊಡಲಾಗದುʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಬೇರೆದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಾಗಿದ್ದು, ಸಾವಿನ ಪ್ರಮಾಣ ಕಡಿಮೆ ಇದೆ ಎಂದೂ ವಿಜ್ ತಿಳಿಸಿದ್ದಾರೆ.<br /><br />ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹರಿಯಾಣದಲ್ಲಿ27,421 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ3,316ಕ್ಕೆ ಏರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>