<p><strong>ನವದೆಹಲಿ</strong>: ಡಿಸೆಂಬರ್ 4 ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಶನಿವಾರ ಸರ್ವಪಕ್ಷಗಳ ನಾಯಕರ ಸಭೆ ಏರ್ಪಡಿಸಿದೆ.</p>.<p>ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈ ಸಭೆ ನಡೆಸಲಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. </p>.<p>ಚಳಿಗಾಲದ ಅಧಿವೇಶನ ಡಿ.22ರ ವರೆಗೆ ನಡೆಯಲಿದೆ. ಸಂಸತ್ತಿನ ಮುಂದೆ ಒಟ್ಟು 37 ಮಸೂದೆಗಳು ಬಾಕಿಯಿದ್ದು, ಅವುಗಳಲ್ಲಿ 12 ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆ ಮತ್ತು ಅಂಗೀಕಾರಕ್ಕೆ ಪಟ್ಟಿ ಮಾಡಲಾಗಿದೆ. ಏಳು ಹೊಸ ಮಸೂದೆಗಳ ಮಂಡನೆ, ಪರಿಗಣನೆ ಮತ್ತು ಅಂಗೀಕಾರಕ್ಕೆ ಸರ್ಕಾರ ಚಿಂತನೆ ನಡೆಸಿದೆ.</p>.<p>ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ‘ಪ್ರಶ್ನೆಗಾಗಿ ಲಂಚ’ ಆರೋಪದ ಬಗ್ಗೆ ನೈತಿಕ ಸಮಿತಿಯ ವರದಿಯನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಸಮಿತಿಯು ಮಹುವಾ ಅವರ ಉಚ್ಚಾಟನೆಗೆ ಶಿಫಾರಸು ಮಾಡಿದ್ದು ಇದು ಜಾರಿಗೆ ಬರುವ ಮೊದಲು ವರದಿಯನ್ನು ಸದನದಲ್ಲಿ ಅಂಗೀಕರಿಸಬೇಕಿದೆ.</p>.<p>ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಮಸೂದೆಗೆ ಸಂಸತ್ತಿನ ಒಪ್ಪಿಗೆ ಪಡೆದುಕೊಳ್ಳುವುದು ಕೇಂದ್ರದ ಪ್ರಮುಖ ಉದ್ದೇಶ ಆಗಿದೆ. </p>.<p>ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ (ನೇಮಕ, ಸೇವಾ ನಿಬಂಧನೆಗಳು ಮತ್ತು ಅಧಿಕಾರ ಅವಧಿ) ಮಸೂದೆ ಕೂಡ ಚರ್ಚೆಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಡಿಸೆಂಬರ್ 4 ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಶನಿವಾರ ಸರ್ವಪಕ್ಷಗಳ ನಾಯಕರ ಸಭೆ ಏರ್ಪಡಿಸಿದೆ.</p>.<p>ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈ ಸಭೆ ನಡೆಸಲಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. </p>.<p>ಚಳಿಗಾಲದ ಅಧಿವೇಶನ ಡಿ.22ರ ವರೆಗೆ ನಡೆಯಲಿದೆ. ಸಂಸತ್ತಿನ ಮುಂದೆ ಒಟ್ಟು 37 ಮಸೂದೆಗಳು ಬಾಕಿಯಿದ್ದು, ಅವುಗಳಲ್ಲಿ 12 ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆ ಮತ್ತು ಅಂಗೀಕಾರಕ್ಕೆ ಪಟ್ಟಿ ಮಾಡಲಾಗಿದೆ. ಏಳು ಹೊಸ ಮಸೂದೆಗಳ ಮಂಡನೆ, ಪರಿಗಣನೆ ಮತ್ತು ಅಂಗೀಕಾರಕ್ಕೆ ಸರ್ಕಾರ ಚಿಂತನೆ ನಡೆಸಿದೆ.</p>.<p>ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ‘ಪ್ರಶ್ನೆಗಾಗಿ ಲಂಚ’ ಆರೋಪದ ಬಗ್ಗೆ ನೈತಿಕ ಸಮಿತಿಯ ವರದಿಯನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಸಮಿತಿಯು ಮಹುವಾ ಅವರ ಉಚ್ಚಾಟನೆಗೆ ಶಿಫಾರಸು ಮಾಡಿದ್ದು ಇದು ಜಾರಿಗೆ ಬರುವ ಮೊದಲು ವರದಿಯನ್ನು ಸದನದಲ್ಲಿ ಅಂಗೀಕರಿಸಬೇಕಿದೆ.</p>.<p>ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಮಸೂದೆಗೆ ಸಂಸತ್ತಿನ ಒಪ್ಪಿಗೆ ಪಡೆದುಕೊಳ್ಳುವುದು ಕೇಂದ್ರದ ಪ್ರಮುಖ ಉದ್ದೇಶ ಆಗಿದೆ. </p>.<p>ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ (ನೇಮಕ, ಸೇವಾ ನಿಬಂಧನೆಗಳು ಮತ್ತು ಅಧಿಕಾರ ಅವಧಿ) ಮಸೂದೆ ಕೂಡ ಚರ್ಚೆಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>