ನವದೆಹಲಿ: ಪ್ರವಾಹ ಪೀಡಿತ ಕೇರಳದಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗಾಗಿ ವಸತಿ ಯೋಜನೆಯಲ್ಲಿನ ನಿಯಮಾವಳಿಗಳನ್ನು ಸಡಿಲಗೊಳಿಸಿರುವಕೇಂದ್ರ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂಜಿಎನ್ಆರ್ಇಜಿಎಸ್) ಅಡಿಯಲ್ಲಿ ₹ 543 ಕೋಟಿ ಹಣ ಬಿಡುಗಡೆ ಮಾಡಿದೆ.
ಜನರಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಲುವಾಗಿ ಹಾಗೂ ವಸತಿ ನಿರ್ಮಿಸಿಕೊಳ್ಳಲು ನೆರವಾಗುವ ಸಲುವಾಗಿ ಎಂಜಿಎನ್ಆರ್ಇಜಿಎಸ್ ಅಡಿಯಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ನಿರ್ಮಾಣ ಕಾರ್ಯಕ್ಕಾಗಿ ಜನರನ್ನು ನೇಮಿಸುವಂತೆ ಆಡಳಿತಾಧಿಕಾರಿಗಳಿಗೆ ಸೂಚಿಸಿದೆ.