<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆಕೋವಿಡ್-19 ಸೌಲಭ್ಯಗಳನ್ನು ಪರಿಶೀಲಿಸುವುದಕ್ಕಾಗಿ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯ ರಚಿಸಿರುವ ಈ ಸಮಿತಿ ದೇಶದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವ ಜತೆಗೆ, ನೀಡುತ್ತಿರುವ ಸೌಲಭ್ಯಗಳಲ್ಲಿರುವ ನ್ಯೂನತೆಯನ್ನು ಗುರುತಿಸಿ, ಸರ್ಕಾರ ಮತ್ತು ಕೋವಿಡ್ ಆಸ್ಪತ್ರೆಗಳ ಸಿಬ್ಬಂದಿಗೆ ಮಾರ್ಗದರ್ಶನ ನೀಡಲಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ತಿಳಿಸಿದ್ದಾರೆ.</p>.<p>ತಜ್ಞ ಸಮಿತಿ ರಚಿಸಿರುವ ಕುರಿತು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆಯಲಾಗಿದ್ದು, ಅದರಲ್ಲಿ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ಮತ್ತು ಚಿಕಿತ್ಸೆಗೆ ವಿಧಿಸಿರುವ ವಿವೇಚನಾಯುಕ್ತ ದರಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದು ಚೌಬೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರಯೋಗಾಲಯ ವರದಿಗಾಗಿ ಕಾಯದೇ ಶಂಕಿತ ಕೋವಿಡ್ ರೋಗಿಗಳ ಮೃತದೇಹವನ್ನು ತಕ್ಷಣ ಸಂಬಂಧಿಗಳಿಗೆ ಹಸ್ತಾಂತರಿಸಬೇಕು. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾರ್ಗಸೂಚಿ ಪ್ರಕಾರವ ಶವಸಂಸ್ಕಾರ ಮಾಡಬೇಕು ಎಂದು ಆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ.</p>.<p>ಕೆಲವು ರಾಜ್ಯಗಳಲ್ಲಿ ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ತುಂಬಾ ಅಸೂಕ್ಷ್ಮವಾಗಿ ಮಾಡಲಾಗುತ್ತಿದೆ ಎಂಬ ಸುಪ್ರೀಂ ಕೋರ್ಟ್ನ ಅವಲೋಕನದ ಹಿನ್ನೆಲೆಯಲ್ಲಿ, ಸಚಿವ ಚೌಬೆ ಅವರು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ರಾಜ್ಯಸಭೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆಕೋವಿಡ್-19 ಸೌಲಭ್ಯಗಳನ್ನು ಪರಿಶೀಲಿಸುವುದಕ್ಕಾಗಿ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯ ರಚಿಸಿರುವ ಈ ಸಮಿತಿ ದೇಶದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವ ಜತೆಗೆ, ನೀಡುತ್ತಿರುವ ಸೌಲಭ್ಯಗಳಲ್ಲಿರುವ ನ್ಯೂನತೆಯನ್ನು ಗುರುತಿಸಿ, ಸರ್ಕಾರ ಮತ್ತು ಕೋವಿಡ್ ಆಸ್ಪತ್ರೆಗಳ ಸಿಬ್ಬಂದಿಗೆ ಮಾರ್ಗದರ್ಶನ ನೀಡಲಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ತಿಳಿಸಿದ್ದಾರೆ.</p>.<p>ತಜ್ಞ ಸಮಿತಿ ರಚಿಸಿರುವ ಕುರಿತು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆಯಲಾಗಿದ್ದು, ಅದರಲ್ಲಿ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ಮತ್ತು ಚಿಕಿತ್ಸೆಗೆ ವಿಧಿಸಿರುವ ವಿವೇಚನಾಯುಕ್ತ ದರಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದು ಚೌಬೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರಯೋಗಾಲಯ ವರದಿಗಾಗಿ ಕಾಯದೇ ಶಂಕಿತ ಕೋವಿಡ್ ರೋಗಿಗಳ ಮೃತದೇಹವನ್ನು ತಕ್ಷಣ ಸಂಬಂಧಿಗಳಿಗೆ ಹಸ್ತಾಂತರಿಸಬೇಕು. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾರ್ಗಸೂಚಿ ಪ್ರಕಾರವ ಶವಸಂಸ್ಕಾರ ಮಾಡಬೇಕು ಎಂದು ಆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ.</p>.<p>ಕೆಲವು ರಾಜ್ಯಗಳಲ್ಲಿ ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ತುಂಬಾ ಅಸೂಕ್ಷ್ಮವಾಗಿ ಮಾಡಲಾಗುತ್ತಿದೆ ಎಂಬ ಸುಪ್ರೀಂ ಕೋರ್ಟ್ನ ಅವಲೋಕನದ ಹಿನ್ನೆಲೆಯಲ್ಲಿ, ಸಚಿವ ಚೌಬೆ ಅವರು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ರಾಜ್ಯಸಭೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>