<p><strong>ನವದೆಹಲಿ:</strong> ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.</p>.<p>ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅಕ್ರಮಗಳ ಕುರಿತು ರಾಜ್ಯಸಭೆಯಲ್ಲಿ ಉಂಟಾದ ಗದ್ದಲದ ನಡುವೆ ಮಾತನಾಡಿದ ಅವರು, ಈ ಪ್ರಕರಣ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಇದರ ಹೊಣೆಗಾರಿಕೆಯನ್ನು ಸರ್ಕಾರ ಹೊರಲು ಸಾಧ್ಯವಿಲ್ಲ ಎಂದು ಹೇಳಿದರು. ಸದನ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ವಿರೋಧ ಪಕ್ಷಗಳನ್ನು ಮನವಿ ಮಾಡಿದರು.</p><p>ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ನೀಟ್ ಅಕ್ರಮಗಳ ಕುರಿತ ಚರ್ಚೆಗೆ ಆಗ್ರಹಿಸಿದ ವಿರೋಧಪಕ್ಷಗಳ ಸದಸ್ಯರು, ಘೋಷಣೆಗಳನ್ನು ಕೂಗುತ್ತ ಸದನದ ಬಾವಿಗಿಳಿದಿದ್ದರಿಂದ ರಾಜ್ಯಸಭೆ ಗೊಂದಲದ ದೃಶ್ಯಗಳಿಗೆ ಸಾಕ್ಷಿಯಾಯಿತು. </p><p>ಚರ್ಚೆಯ ನಡುವೆ ಮಧ್ಯಪ್ರವೇಶಿಸಿ ಮಾತನಾಡಿದ ದೇವೇಗೌಡ, ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ನಾನು ಯಾವುದೇ ಪಕ್ಷದ ಹೆಸರು ತೆಗೆದುಕೊಳ್ಳಲು ಬಯಸುವುದಿಲ್ಲ. ಈ ಪ್ರಕರಣ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಸರಿಯಾದ ನಿರ್ಧಾರ ಕೈಗೊಂಡಿದೆ. ಈ ವಿಷಯದಲ್ಲಿ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಪೂರ್ಣಗೊಳ್ಳುವವರೆಗೆ ಸರ್ಕಾರ ಇದರ ಹೊಣೆಗಾರಿಕೆಯನ್ನು ಹೊರಲು ಸಾಧ್ಯವಿಲ್ಲ. ಆದ್ದರಿಂದ ಸದನ ಸುಗಮವಾಗಿ ನಡೆಸಲು ಅವಕಾಶ ನೀಡುವಂತೆ ಪ್ರತಿಪಕ್ಷಗಳನ್ನು ಮನವಿ ಮಾಡಿದರು.</p>.ನೀಟ್ ವಿಷಯದಲ್ಲಿ ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.</p>.<p>ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅಕ್ರಮಗಳ ಕುರಿತು ರಾಜ್ಯಸಭೆಯಲ್ಲಿ ಉಂಟಾದ ಗದ್ದಲದ ನಡುವೆ ಮಾತನಾಡಿದ ಅವರು, ಈ ಪ್ರಕರಣ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಇದರ ಹೊಣೆಗಾರಿಕೆಯನ್ನು ಸರ್ಕಾರ ಹೊರಲು ಸಾಧ್ಯವಿಲ್ಲ ಎಂದು ಹೇಳಿದರು. ಸದನ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ವಿರೋಧ ಪಕ್ಷಗಳನ್ನು ಮನವಿ ಮಾಡಿದರು.</p><p>ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ನೀಟ್ ಅಕ್ರಮಗಳ ಕುರಿತ ಚರ್ಚೆಗೆ ಆಗ್ರಹಿಸಿದ ವಿರೋಧಪಕ್ಷಗಳ ಸದಸ್ಯರು, ಘೋಷಣೆಗಳನ್ನು ಕೂಗುತ್ತ ಸದನದ ಬಾವಿಗಿಳಿದಿದ್ದರಿಂದ ರಾಜ್ಯಸಭೆ ಗೊಂದಲದ ದೃಶ್ಯಗಳಿಗೆ ಸಾಕ್ಷಿಯಾಯಿತು. </p><p>ಚರ್ಚೆಯ ನಡುವೆ ಮಧ್ಯಪ್ರವೇಶಿಸಿ ಮಾತನಾಡಿದ ದೇವೇಗೌಡ, ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ನಾನು ಯಾವುದೇ ಪಕ್ಷದ ಹೆಸರು ತೆಗೆದುಕೊಳ್ಳಲು ಬಯಸುವುದಿಲ್ಲ. ಈ ಪ್ರಕರಣ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿ ಸರ್ಕಾರ ಸರಿಯಾದ ನಿರ್ಧಾರ ಕೈಗೊಂಡಿದೆ. ಈ ವಿಷಯದಲ್ಲಿ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಪೂರ್ಣಗೊಳ್ಳುವವರೆಗೆ ಸರ್ಕಾರ ಇದರ ಹೊಣೆಗಾರಿಕೆಯನ್ನು ಹೊರಲು ಸಾಧ್ಯವಿಲ್ಲ. ಆದ್ದರಿಂದ ಸದನ ಸುಗಮವಾಗಿ ನಡೆಸಲು ಅವಕಾಶ ನೀಡುವಂತೆ ಪ್ರತಿಪಕ್ಷಗಳನ್ನು ಮನವಿ ಮಾಡಿದರು.</p>.ನೀಟ್ ವಿಷಯದಲ್ಲಿ ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>