<p><strong>ಖಗೇರಿಯಾ:</strong> ಬಿಹಾರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದ 20 ದಿನಗಳಲ್ಲೇ ಮನೆಗೊಂದು ಸರ್ಕಾರಿ ನೌಕರಿ ನೀಡಲು ಅಗತ್ಯ ಕಾನೂನು ರಚಿಸಲಾಗುವುದು’ ಎಂದು ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆಯಾಗಿರುವ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಶನಿವಾರ ಹೇಳಿದ್ದಾರೆ.</p><p>ಖಗೇರಿಯಾ ಜಿಲ್ಲೆಯ ಗೋಗ್ರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕಾನೂನು ರಚನೆಯಾದ 20 ತಿಂಗಳ ಒಳಗಾಗಿ ನೇಮಕಾತಿಯನ್ನೂ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p><p>‘ಈ ಚುನಾವಣೆಯಲ್ಲಿ ಕೇವಲ ಸರ್ಕಾರ ರಚನೆಗಾಗಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ಬಿಹಾರದ ಪುನರ್ ನಿರ್ಮಾಣಕ್ಕೆ ಕೆಲಸ ಹೋರಾಡುತ್ತಿದ್ದೇನೆ’ ಎಂದಿದ್ದಾರೆ.</p><p>‘ಬಿಹಾರವನ್ನು ನಾವು ನಂ. 1 ರಾಜ್ಯವನ್ನಾಗಿ ಮಾಡಬೇಕು. ಅದಕ್ಕಾಗಿ ಹೂಡಿಕೆಯನ್ನು ತರಬೇಕು. ಶಿಕ್ಷಣವನ್ನು ಪ್ರೋತ್ಸಾಹಿಸಬೇಕು ಮತ್ತು ಸುಸಜ್ಜಿತ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುವ ಉದ್ದೇಶ ನಮ್ಮದು’ ಎಂದು ತೇಜಸ್ವಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಗೇರಿಯಾ:</strong> ಬಿಹಾರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದ 20 ದಿನಗಳಲ್ಲೇ ಮನೆಗೊಂದು ಸರ್ಕಾರಿ ನೌಕರಿ ನೀಡಲು ಅಗತ್ಯ ಕಾನೂನು ರಚಿಸಲಾಗುವುದು’ ಎಂದು ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆಯಾಗಿರುವ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಶನಿವಾರ ಹೇಳಿದ್ದಾರೆ.</p><p>ಖಗೇರಿಯಾ ಜಿಲ್ಲೆಯ ಗೋಗ್ರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕಾನೂನು ರಚನೆಯಾದ 20 ತಿಂಗಳ ಒಳಗಾಗಿ ನೇಮಕಾತಿಯನ್ನೂ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p><p>‘ಈ ಚುನಾವಣೆಯಲ್ಲಿ ಕೇವಲ ಸರ್ಕಾರ ರಚನೆಗಾಗಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ಬಿಹಾರದ ಪುನರ್ ನಿರ್ಮಾಣಕ್ಕೆ ಕೆಲಸ ಹೋರಾಡುತ್ತಿದ್ದೇನೆ’ ಎಂದಿದ್ದಾರೆ.</p><p>‘ಬಿಹಾರವನ್ನು ನಾವು ನಂ. 1 ರಾಜ್ಯವನ್ನಾಗಿ ಮಾಡಬೇಕು. ಅದಕ್ಕಾಗಿ ಹೂಡಿಕೆಯನ್ನು ತರಬೇಕು. ಶಿಕ್ಷಣವನ್ನು ಪ್ರೋತ್ಸಾಹಿಸಬೇಕು ಮತ್ತು ಸುಸಜ್ಜಿತ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುವ ಉದ್ದೇಶ ನಮ್ಮದು’ ಎಂದು ತೇಜಸ್ವಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>