<p><strong>ಬೊಕರೊ (ಜಾರ್ಖಂಡ್):</strong> 26ವರ್ಷದ ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.ಗೋವು ಕಳ್ಳಸಾಗಣೆ ಮಾಡುವವನೆಂದು ಭಾವಿಸಿ ಗುಂಡಿಕ್ಕಿ 12ನೇ ತರಗತಿ ವಿದ್ಯಾರ್ಥಿ ಕೊಲೆ.<p>ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಪಿಂಟು ನಾಯಕ್ ಮೃತ ನೌಕರ. ಹಾಜಾರಿಬಾಗ್ ಜಿಲ್ಲೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು.</p><p>ಪಿಂಟು ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ವೇಳೆ ಕೊಲೆ ಮಾಡಲಾಗಿದೆ ಎಂದು ಬೆರ್ಮೊ ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿ.ಎಸ್ ಸಿಂಗ್ ತಿಳಿಸಿದ್ದಾರೆ.</p>.ಬಿಹಾರ: ಸೊಸೆ, ಆಕೆಯ ತಂದೆ ಹಾಗೂ ಸಹೋದರನನ್ನು ಗುಂಡಿಕ್ಕಿ ಕೊಲೆ ಮಾಡಿದ ವ್ಯಕ್ತಿ.<p>‘ರಾತ್ರಿ ಊಟ ಮುಗಿಸಿ ಮಲಗಲು ತನ್ನ ಕೋಣೆಗೆ ಹೋಗುವಾಗ ಈ ಘಟನೆ ನಡೆದಿದೆ. ಗಂಟೆ ಸುಮಾರು 11 ಆಗಿರಬಹುದು. ಗುಂಡಿನ ಸದ್ದು ಕೇಳಿ ಬಂದ ಕೂಡಲೇ ಪಿಂಟು ಕೋಣೆಗೆ ಧಾವಿಸಿದೆ. ಅಲ್ಲಿ ಮಂಚದ ಮೇಲೆ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ’ ಎಂದು ಪಿಂಟು ತಂದೆ ಸಕುಲ್ ನಾಯಕ್ ತಿಳಿಸಿದ್ದಾರೆ.</p><p>ಕೂಡಲೇ ಕುಟುಂಬ ಸದಸ್ಯರು ಪಿಂಟು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.</p><p>ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಸ್ಥಳೀಯ ನಿವಾಸಿಗಳನ್ನು ವಿಚಾರಣೆ ಮಾಡಲಾಗುತ್ತಿದೆ. ಘಟನೆ ನಡೆದ ಸ್ಥಳದಿಂದ ಕೆಲವೊಂದು ಸಾಕ್ಷ್ಯ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಗೋಕಾಕ್ ಬಳಿ ತಂದೆಯಿಂದಲೇ ಗುಂಡಿಕ್ಕಿ ಮಗನ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಕರೊ (ಜಾರ್ಖಂಡ್):</strong> 26ವರ್ಷದ ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.ಗೋವು ಕಳ್ಳಸಾಗಣೆ ಮಾಡುವವನೆಂದು ಭಾವಿಸಿ ಗುಂಡಿಕ್ಕಿ 12ನೇ ತರಗತಿ ವಿದ್ಯಾರ್ಥಿ ಕೊಲೆ.<p>ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಪಿಂಟು ನಾಯಕ್ ಮೃತ ನೌಕರ. ಹಾಜಾರಿಬಾಗ್ ಜಿಲ್ಲೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು.</p><p>ಪಿಂಟು ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ವೇಳೆ ಕೊಲೆ ಮಾಡಲಾಗಿದೆ ಎಂದು ಬೆರ್ಮೊ ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿ.ಎಸ್ ಸಿಂಗ್ ತಿಳಿಸಿದ್ದಾರೆ.</p>.ಬಿಹಾರ: ಸೊಸೆ, ಆಕೆಯ ತಂದೆ ಹಾಗೂ ಸಹೋದರನನ್ನು ಗುಂಡಿಕ್ಕಿ ಕೊಲೆ ಮಾಡಿದ ವ್ಯಕ್ತಿ.<p>‘ರಾತ್ರಿ ಊಟ ಮುಗಿಸಿ ಮಲಗಲು ತನ್ನ ಕೋಣೆಗೆ ಹೋಗುವಾಗ ಈ ಘಟನೆ ನಡೆದಿದೆ. ಗಂಟೆ ಸುಮಾರು 11 ಆಗಿರಬಹುದು. ಗುಂಡಿನ ಸದ್ದು ಕೇಳಿ ಬಂದ ಕೂಡಲೇ ಪಿಂಟು ಕೋಣೆಗೆ ಧಾವಿಸಿದೆ. ಅಲ್ಲಿ ಮಂಚದ ಮೇಲೆ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ’ ಎಂದು ಪಿಂಟು ತಂದೆ ಸಕುಲ್ ನಾಯಕ್ ತಿಳಿಸಿದ್ದಾರೆ.</p><p>ಕೂಡಲೇ ಕುಟುಂಬ ಸದಸ್ಯರು ಪಿಂಟು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.</p><p>ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಸ್ಥಳೀಯ ನಿವಾಸಿಗಳನ್ನು ವಿಚಾರಣೆ ಮಾಡಲಾಗುತ್ತಿದೆ. ಘಟನೆ ನಡೆದ ಸ್ಥಳದಿಂದ ಕೆಲವೊಂದು ಸಾಕ್ಷ್ಯ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಗೋಕಾಕ್ ಬಳಿ ತಂದೆಯಿಂದಲೇ ಗುಂಡಿಕ್ಕಿ ಮಗನ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>