<p><strong>ಬಲಿಯಾ, ಉತ್ತರಪ್ರದೇಶ:</strong> ಇಲ್ಲಿನ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಮಕ್ಕಳಿಂದ ಇಟ್ಟಿಗೆ ಹೊರಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ, ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.</p>.<p>ಬಲಿಯಾ ಜಿಲ್ಲೆಯ ಬಿಸೌಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛಗೊಳಿಸುವ ವೇಳೆ ಮಕ್ಕಳು ಇಟ್ಟಿಗೆ ಹೊರುತ್ತಿದ್ದ ವಿಡಿಯೊ ಆಗಸ್ಟ್ 12ರಂದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿತ್ತು.</p>.<p>ವಿಡಿಯೊ ವೈರಲ್ ಆದ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಅವರು ಈ ಬಗ್ಗೆ ಮಾಹಿತಿ ಸಂಗ್ರಹಿಸಿ, ಮುಖ್ಯಶಿಕ್ಷಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಉತ್ತರಪ್ರದೇಶ ಸರ್ಕಾರಿ ನೌಕರರ ಶಿಸ್ತು ಮೇಲ್ಮನವಿ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ’ ಎಂದು ವರದಿ ನೀಡಿದ್ದಾರೆ.</p>.<p>‘ವರದಿ ಅನ್ವಯ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಶಿಕ್ಷಕ ಮಹೇಶ್ ಯಾದವ್ ಅವರನ್ನು ಅಮಾನತುಗೊಳಿಸಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಮನೀಶ್ ಕುಮಾರ್ ಸಿಂಗ್ ಅವರು ಸೋಮವಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ, ಉತ್ತರಪ್ರದೇಶ:</strong> ಇಲ್ಲಿನ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಮಕ್ಕಳಿಂದ ಇಟ್ಟಿಗೆ ಹೊರಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ, ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.</p>.<p>ಬಲಿಯಾ ಜಿಲ್ಲೆಯ ಬಿಸೌಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛಗೊಳಿಸುವ ವೇಳೆ ಮಕ್ಕಳು ಇಟ್ಟಿಗೆ ಹೊರುತ್ತಿದ್ದ ವಿಡಿಯೊ ಆಗಸ್ಟ್ 12ರಂದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿತ್ತು.</p>.<p>ವಿಡಿಯೊ ವೈರಲ್ ಆದ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಅವರು ಈ ಬಗ್ಗೆ ಮಾಹಿತಿ ಸಂಗ್ರಹಿಸಿ, ಮುಖ್ಯಶಿಕ್ಷಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಉತ್ತರಪ್ರದೇಶ ಸರ್ಕಾರಿ ನೌಕರರ ಶಿಸ್ತು ಮೇಲ್ಮನವಿ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ’ ಎಂದು ವರದಿ ನೀಡಿದ್ದಾರೆ.</p>.<p>‘ವರದಿ ಅನ್ವಯ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಶಿಕ್ಷಕ ಮಹೇಶ್ ಯಾದವ್ ಅವರನ್ನು ಅಮಾನತುಗೊಳಿಸಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಮನೀಶ್ ಕುಮಾರ್ ಸಿಂಗ್ ಅವರು ಸೋಮವಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>