<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ರಾಜಕೀಯ ಹಗ್ಗ ಜಗ್ಗಾಟಕ್ಕೆ ಅಂತಿಮವಾಗಿ ತೆರೆ ಬಿದ್ದಿದ್ದು ವಿಧಾನಸಭೆಯನ್ನು ಗುರುವಾರ ವಿಸರ್ಜಿಸಲಾಗಿದೆ.</p><p>ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್.ರವಿ ಇಂದು ಸಂಜೆ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.</p>.<h2>ರಾಜಭವನದಿಂದ ಅಧಿಕೃತ ಆದೇಶ...</h2><p> ವಿಧಾನಸಭೆ ಅವಧಿಯು ಇಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ, ರಾಜಭವನ ನಿನ್ನೆ ಹೊರಡಿಸಿದ್ದ ಪತ್ರವನ್ನು ಇಂದು ಸಂಜೆ ಅಧಿಕೃತವಾಗಿ ಪ್ರಕಟಿಸಿದೆ. ಸಂವಿಧಾನದ 174ನೇ ವಿಧಿ ಅನ್ವಯ ತಮಗೆ ನೀಡಿರುವ ಅಧಿಕಾರವನ್ನು ಬಳಸಿ ರಾಜ್ಯಪಾಲರು ಮೇ 7ರಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.</p>.<p><strong>ಮಮತಾ ಬ್ಯಾನರ್ಜಿ ನಿಲುವು:</strong> ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾದ ನಂತರವೂ, ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದರು.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ನಾನು ಚುನಾವಣೆಯಲ್ಲಿ ಸೋತಿಲ್ಲ, ಆದ್ದರಿಂದ ರಾಜಭವನಕ್ಕೆ ಹೋಗುವುದಿಲ್ಲ ಮತ್ತು ರಾಜೀನಾಮೆ ಸಲ್ಲಿಸುವುದಿಲ್ಲ. ಬಿಜೆಪಿಗೆ ಸಿಕ್ಕಿರುವ ಬಹುಮತ ಜನರದ್ದಲ್ಲ, ಅದು ಮತಗಳ ಲೂಟಿ ಎಂದು ಆರೋಪಿಸಿದ್ದರು.</p><p>ಮಮತಾ ಬ್ಯಾನರ್ಜಿ ನಡೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ಸೋತ ನಂತರವೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುತ್ತಿರುವ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು.</p><p>ಈಗ ವಿಧಾನಸಭೆ ವಿಸರ್ಜನೆಗೊಂಡಿರುವುದರಿಂದ ಮಮತಾ ಬ್ಯಾನರ್ಜಿ ಅವರ ಅಧಿಕಾರವದಿ ಅಧಿಕೃತವಾಗಿ ಅಂತ್ಯಗೊಂಡು ಬಂಗಾಳವು ಮುಂದಿನ ಆಡಳಿತಾತ್ಮಕ ಬದಲಾವಣೆಗಳಿಗೆ ಸಾಕ್ಷಿಯಾಗಿದೆ.</p>.West Bengal Elections: ಬಿಜೆಪಿಗೆ ಬಂಗಾಳದ ಗಾದಿ ಕೊಟ್ಟದ್ದೇ ದೀದಿ ನಡೆದ ಹಾದಿ!.ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್: ಯಾರಿಗೆ ಮುಳುವು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ರಾಜಕೀಯ ಹಗ್ಗ ಜಗ್ಗಾಟಕ್ಕೆ ಅಂತಿಮವಾಗಿ ತೆರೆ ಬಿದ್ದಿದ್ದು ವಿಧಾನಸಭೆಯನ್ನು ಗುರುವಾರ ವಿಸರ್ಜಿಸಲಾಗಿದೆ.</p><p>ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್.ರವಿ ಇಂದು ಸಂಜೆ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.</p>.<h2>ರಾಜಭವನದಿಂದ ಅಧಿಕೃತ ಆದೇಶ...</h2><p> ವಿಧಾನಸಭೆ ಅವಧಿಯು ಇಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ, ರಾಜಭವನ ನಿನ್ನೆ ಹೊರಡಿಸಿದ್ದ ಪತ್ರವನ್ನು ಇಂದು ಸಂಜೆ ಅಧಿಕೃತವಾಗಿ ಪ್ರಕಟಿಸಿದೆ. ಸಂವಿಧಾನದ 174ನೇ ವಿಧಿ ಅನ್ವಯ ತಮಗೆ ನೀಡಿರುವ ಅಧಿಕಾರವನ್ನು ಬಳಸಿ ರಾಜ್ಯಪಾಲರು ಮೇ 7ರಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.</p>.<p><strong>ಮಮತಾ ಬ್ಯಾನರ್ಜಿ ನಿಲುವು:</strong> ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾದ ನಂತರವೂ, ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದರು.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ನಾನು ಚುನಾವಣೆಯಲ್ಲಿ ಸೋತಿಲ್ಲ, ಆದ್ದರಿಂದ ರಾಜಭವನಕ್ಕೆ ಹೋಗುವುದಿಲ್ಲ ಮತ್ತು ರಾಜೀನಾಮೆ ಸಲ್ಲಿಸುವುದಿಲ್ಲ. ಬಿಜೆಪಿಗೆ ಸಿಕ್ಕಿರುವ ಬಹುಮತ ಜನರದ್ದಲ್ಲ, ಅದು ಮತಗಳ ಲೂಟಿ ಎಂದು ಆರೋಪಿಸಿದ್ದರು.</p><p>ಮಮತಾ ಬ್ಯಾನರ್ಜಿ ನಡೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ಸೋತ ನಂತರವೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುತ್ತಿರುವ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು.</p><p>ಈಗ ವಿಧಾನಸಭೆ ವಿಸರ್ಜನೆಗೊಂಡಿರುವುದರಿಂದ ಮಮತಾ ಬ್ಯಾನರ್ಜಿ ಅವರ ಅಧಿಕಾರವದಿ ಅಧಿಕೃತವಾಗಿ ಅಂತ್ಯಗೊಂಡು ಬಂಗಾಳವು ಮುಂದಿನ ಆಡಳಿತಾತ್ಮಕ ಬದಲಾವಣೆಗಳಿಗೆ ಸಾಕ್ಷಿಯಾಗಿದೆ.</p>.West Bengal Elections: ಬಿಜೆಪಿಗೆ ಬಂಗಾಳದ ಗಾದಿ ಕೊಟ್ಟದ್ದೇ ದೀದಿ ನಡೆದ ಹಾದಿ!.ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್: ಯಾರಿಗೆ ಮುಳುವು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>