<p><strong>ಚೆನ್ನೈ</strong>: ರಾಜ್ಯಪಾಲರ ಅಧಿಕಾರ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯದ ಸ್ವಾಯತ್ತತೆಯ ಹೋರಾಟಕ್ಕೆ ಸಿಕ್ಕ ಆರಂಭಿಕ ಜಯವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ. </p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ರಾಜ್ಯಪಾಲರು ಕೇವಲ ಪೋಸ್ಟ್ಮ್ಯಾನ್ ಎಂಬ ಡಿಎಂಕೆಯ ದೀರ್ಘಕಾಲಿಕ ನಿಲುವನ್ನು ಈ ತೀರ್ಪು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಏ.8 ನಮಗೆ ಸಂತಸದ ಹಾಗೂ ಮರೆಯಲಾಗದ ದಿನವಾಗಿದೆ. ರಾಜ್ಯಪಾಲರ ಅತಿಕ್ರಮಣವನ್ನು ಮೊಟಕುಗೊಳಿಸಿ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವ ಐತಿಹಾಸಿಕ ತೀರ್ಪನ್ನು ನ್ಯಾಯಾಲಯ ನೀಡಿದೆ’ ಎಂದು ಸ್ಟಾಲಿನ್ ಹೇಳಿದರು. </p>.<p>‘ರಾಜ್ಯಪಾಲ ಆರ್.ಎನ್. ರವಿ ಅವರು ವಿಶ್ವವಿದ್ಯಾಲಯಗಳಲ್ಲಿ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ಕ್ಯಾಂಪಸ್ಗೆ ಕೇಸರಿ ಬಣ್ಣ ಬಳಿಯಲು ಅವರು ತಮ್ಮ ಕುಲಾಧಿಪತಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು. </p>.<p>ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತಡೆಹಿಡಿದು ಅವುಗಳನ್ನು ರಾಜ್ಯಪಾಲರಿಗೆ ರವಾನಿಸಿದ್ದಕ್ಕಾಗಿ ರಾಜ್ಯಪಾಲ ರವಿ ಅವರ ವಿರುದ್ಧ ತಮಿಳುನಾಡು ಸರ್ಕಾರ ಕೋರ್ಟ್ ಮೆಟ್ಟಿಲೇರಿತ್ತು. </p>.<p>ರಾಜ್ಯಪಾಲರ ನಡೆಯು ಕಾನೂನುಬಾಹಿರವಾಗಿದೆ ಎಂದ ಸುಪ್ರೀಂ ಕೋರ್ಟ್, ವಿಧಾನಸಭೆಯು ಅಂಗೀಕರಿಸಿದ ನಿರ್ಣಯಗಳಿಗೆ ಒಪ್ಪಿಗೆ ನೀಡುವುದು ಅವರ ಕರ್ತವ್ಯ ಎಂದು ತೀರ್ಪು ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ರಾಜ್ಯಪಾಲರ ಅಧಿಕಾರ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯದ ಸ್ವಾಯತ್ತತೆಯ ಹೋರಾಟಕ್ಕೆ ಸಿಕ್ಕ ಆರಂಭಿಕ ಜಯವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ. </p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ರಾಜ್ಯಪಾಲರು ಕೇವಲ ಪೋಸ್ಟ್ಮ್ಯಾನ್ ಎಂಬ ಡಿಎಂಕೆಯ ದೀರ್ಘಕಾಲಿಕ ನಿಲುವನ್ನು ಈ ತೀರ್ಪು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಏ.8 ನಮಗೆ ಸಂತಸದ ಹಾಗೂ ಮರೆಯಲಾಗದ ದಿನವಾಗಿದೆ. ರಾಜ್ಯಪಾಲರ ಅತಿಕ್ರಮಣವನ್ನು ಮೊಟಕುಗೊಳಿಸಿ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವ ಐತಿಹಾಸಿಕ ತೀರ್ಪನ್ನು ನ್ಯಾಯಾಲಯ ನೀಡಿದೆ’ ಎಂದು ಸ್ಟಾಲಿನ್ ಹೇಳಿದರು. </p>.<p>‘ರಾಜ್ಯಪಾಲ ಆರ್.ಎನ್. ರವಿ ಅವರು ವಿಶ್ವವಿದ್ಯಾಲಯಗಳಲ್ಲಿ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ಕ್ಯಾಂಪಸ್ಗೆ ಕೇಸರಿ ಬಣ್ಣ ಬಳಿಯಲು ಅವರು ತಮ್ಮ ಕುಲಾಧಿಪತಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು. </p>.<p>ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತಡೆಹಿಡಿದು ಅವುಗಳನ್ನು ರಾಜ್ಯಪಾಲರಿಗೆ ರವಾನಿಸಿದ್ದಕ್ಕಾಗಿ ರಾಜ್ಯಪಾಲ ರವಿ ಅವರ ವಿರುದ್ಧ ತಮಿಳುನಾಡು ಸರ್ಕಾರ ಕೋರ್ಟ್ ಮೆಟ್ಟಿಲೇರಿತ್ತು. </p>.<p>ರಾಜ್ಯಪಾಲರ ನಡೆಯು ಕಾನೂನುಬಾಹಿರವಾಗಿದೆ ಎಂದ ಸುಪ್ರೀಂ ಕೋರ್ಟ್, ವಿಧಾನಸಭೆಯು ಅಂಗೀಕರಿಸಿದ ನಿರ್ಣಯಗಳಿಗೆ ಒಪ್ಪಿಗೆ ನೀಡುವುದು ಅವರ ಕರ್ತವ್ಯ ಎಂದು ತೀರ್ಪು ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>