ಈ ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಸಭೆ ಸದಸ್ಯ ಮತ್ತು ಶಿವಾಜಿ ಮಹಾರಾಜರ ವಂಶಸ್ಥ ಉದಯನ್ ರಾಜೇ ಭೋಸಲೆ, ಡಿಸೆಂಬರ್ 3ರಂದು ರಾಯಗಢ ಕೋಟೆಯಲ್ಲಿರುವ ಶಿವಾಜಿ ಸಮಾಧಿಗೆ ಭೇಟಿ ನೀಡಿ ಅವರಿಗೆ ಗೌರವ ಸಲ್ಲಿಸಿ, ಇಂಥ ಹೇಳಿಕೆಗಳ ವಿರುದ್ಧ ಪ್ರತಿಭಟಿಸುವುದಾಗಿ ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೆಸರನ್ನು ಉಲ್ಲೇಖಿಸದೇ ಅವರನ್ನು ಟೀಕಿಸಿದ ಭೋಸಲೆ, ‘ಈ ರೀತಿಯ ಹೇಳಿಕೆಗಳನ್ನು ಕೇಳಿಸಿಕೊಂಡ ಬಳಿಕವೂ ಕೆಲವರಿಗೆ ಏಕೆ ಸಿಟ್ಟು ಬಂದಿಲ್ಲ’ ಎಂದು ಪ್ರಶ್ನಿಸಿದ್ದಾರೆ.