<p><strong>ಚೆನ್ನೈ:</strong> ತಮಿಳುನಾಡು ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯನ್ನು ರಾಜ್ಯಪಾಲ ಆರ್.ಎನ್. ರವಿ ವಾರಾಂತ್ಯದಲ್ಲಿ ಕರೆದಿದ್ದಾರೆ.</p>.<p>ನೀಲಗಿರಿ ಜಿಲ್ಲೆಯಲ್ಲಿ ಏ. 25ರಿಂದ ಮೂರು ದಿನ ನಡೆಯಲಿರುವ ಈ ಸಮಾವೇಶದಲ್ಲಿ ಭಾಗಿಯಾಗುವಂತೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ವಿಶ್ವವಿದ್ಯಾಲಯಗಳಿಗೆ ನೇಮಕದ ಅಧಿಕಾರವನ್ನು ರಾಜ್ಯಪಾಲರಿಂದ ವಾಪಸ್ ಪಡೆಯುವ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕುಲಪತಿಗಳು, ರಿಜಿಸ್ಟ್ರಾರ್ಗಳೊಂದಿಗೆ ಸಭೆ ನಡೆಸಿದ ವಾರದ ನಂತರ ರಾಜ್ಯಪಾಲರು ಈ ಸಮಾವೇಶ ಆಯೋಜಿಸಿದ್ದಾರೆ.</p>.<p>ಈ ಸಭೆಯು ರಾಜ್ಯಪಾಲರು ಮತ್ತು ತಮಿಳುನಾಡು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಜಟಾಪಟಿಗೆ ವೇದಿಕೆಯಾಗಲಿದೆ ಎನ್ನಲಾಗಿದೆ.</p>.<p>ರಾಜ್ಯಪಾಲರು ಸರ್ಕಾರಿ ಅನುದಾನಿತ 18 ವಿಶ್ವವಿದ್ಯಾಲಯಗಳ ಕುಲಾಧಿಪತಿಯಾಗಿ ಸಭೆ ಕರೆದಿದ್ದಾರೆ. ಹೊಸ ಕಾನೂನು ಬಂದರೂ ಅವರ ಅಧಿಕಾರ ಬದಲಾಗಿಲ್ಲ. ಕುಲಪತಿಗಳನ್ನು ನೇಮಿಸುವ ಮತ್ತು ತೆಗೆದುಹಾಕುವ ಅಧಿಕಾರವನ್ನು ಮಾತ್ರ ಸರ್ಕಾರ ವರ್ಗಾಯಿಸಿಕೊಂಡಿದೆ. ಸಭೆ ಕರೆದಿರುವುದು ಇದೇ ಮೊದಲಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ.</p>.<p>ರಾಜ್ಯ ಸರ್ಕಾರ ನಡೆಸುತ್ತಿರುವ 20 ವಿಶ್ವವಿದ್ಯಾಲಯಗಳ ಪೈಕಿ 18 ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರೇ ಕುಲಾಧಿಪತಿ ಆಗಿರುವುದರಿಂದ ಈ ಸಭೆ ಕರೆದಿದ್ದಾರೆ ಎಂದು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡು ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯನ್ನು ರಾಜ್ಯಪಾಲ ಆರ್.ಎನ್. ರವಿ ವಾರಾಂತ್ಯದಲ್ಲಿ ಕರೆದಿದ್ದಾರೆ.</p>.<p>ನೀಲಗಿರಿ ಜಿಲ್ಲೆಯಲ್ಲಿ ಏ. 25ರಿಂದ ಮೂರು ದಿನ ನಡೆಯಲಿರುವ ಈ ಸಮಾವೇಶದಲ್ಲಿ ಭಾಗಿಯಾಗುವಂತೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ವಿಶ್ವವಿದ್ಯಾಲಯಗಳಿಗೆ ನೇಮಕದ ಅಧಿಕಾರವನ್ನು ರಾಜ್ಯಪಾಲರಿಂದ ವಾಪಸ್ ಪಡೆಯುವ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕುಲಪತಿಗಳು, ರಿಜಿಸ್ಟ್ರಾರ್ಗಳೊಂದಿಗೆ ಸಭೆ ನಡೆಸಿದ ವಾರದ ನಂತರ ರಾಜ್ಯಪಾಲರು ಈ ಸಮಾವೇಶ ಆಯೋಜಿಸಿದ್ದಾರೆ.</p>.<p>ಈ ಸಭೆಯು ರಾಜ್ಯಪಾಲರು ಮತ್ತು ತಮಿಳುನಾಡು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಜಟಾಪಟಿಗೆ ವೇದಿಕೆಯಾಗಲಿದೆ ಎನ್ನಲಾಗಿದೆ.</p>.<p>ರಾಜ್ಯಪಾಲರು ಸರ್ಕಾರಿ ಅನುದಾನಿತ 18 ವಿಶ್ವವಿದ್ಯಾಲಯಗಳ ಕುಲಾಧಿಪತಿಯಾಗಿ ಸಭೆ ಕರೆದಿದ್ದಾರೆ. ಹೊಸ ಕಾನೂನು ಬಂದರೂ ಅವರ ಅಧಿಕಾರ ಬದಲಾಗಿಲ್ಲ. ಕುಲಪತಿಗಳನ್ನು ನೇಮಿಸುವ ಮತ್ತು ತೆಗೆದುಹಾಕುವ ಅಧಿಕಾರವನ್ನು ಮಾತ್ರ ಸರ್ಕಾರ ವರ್ಗಾಯಿಸಿಕೊಂಡಿದೆ. ಸಭೆ ಕರೆದಿರುವುದು ಇದೇ ಮೊದಲಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ.</p>.<p>ರಾಜ್ಯ ಸರ್ಕಾರ ನಡೆಸುತ್ತಿರುವ 20 ವಿಶ್ವವಿದ್ಯಾಲಯಗಳ ಪೈಕಿ 18 ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರೇ ಕುಲಾಧಿಪತಿ ಆಗಿರುವುದರಿಂದ ಈ ಸಭೆ ಕರೆದಿದ್ದಾರೆ ಎಂದು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>