‘ಸಂವಿಧಾನದ ಚೌಕಟ್ಟಿನೊಳಗೇ ಕಾರ್ಯನಿರ್ವಹಿಸಿ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯಪಾಲರಿಗೆ ಶನಿವಾರ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಯಾಗಿ, ಮುಖ್ಯಮಂತ್ರಿಗೆ ಭಾನುವಾರ ಪತ್ರವೊಂದನ್ನು ರವಾನಿಸಿರುವ ರಾಜ್ಯಪಾಲರು, ‘ಪಿಎಂ ಕಿಸಾನ್ ಅಡಿ ರೈತರಿಗೆ ಕೇಂದ್ರ ನೀಡುವ ಹಣವನ್ನು ಅವರ ಖಾತೆಗೆ ವರ್ಗಾಯಿಸಲು ರಾಜ್ಯ ಸರ್ಕಾರವೇಕೆ ಮಧ್ಯವರ್ತಿಯಾಗಲು ಬಯಸುತ್ತದೆ’ ಎಂದು ಪ್ರಶ್ನಿಸಿದ್ದಾರೆ.