<p><strong>ಮುಂಬೈ/ಕೊಲ್ಹಾಪುರ:</strong> ವಿಚಾರವಾದಿ, ಕಮ್ಯುನಿಸ್ಟ್ ನಾಯಕ ಗೋವಿಂದ ಪಾನ್ಸರೆ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ಕಾರ್ಯಕರ್ತ ಶರದ್ ಕಲಾಸ್ಕರ್ನನ್ನು ಮಂಗಳವಾರ ಬಂಧಿಸಲಾಗಿದೆ.</p>.<p>ಸಿಐಡಿಯ ವಿಶೇಷ ತನಿಖಾ ತಂಡ ಕಲಾಸ್ಕರ್(25)ನನ್ನು ಮುಂಬೈನಲ್ಲಿ ಬಂಧಿಸಿ ಕೊಲ್ಹಾಪುರದ ನ್ಯಾಯಾಲಯದಲ್ಲಿ ಹಾಜರುಪಡಿಸಿತು. ನ್ಯಾಯಾಲಯ ಜೂನ್ 18ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿತು. ಇನೊಬ್ಬ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿದ್ದ ಇಬ್ಬರಲ್ಲಿ ಈತನೂ ಒಬ್ಬ ಎಂದು ಸಿಬಿಐ ಹೇಳಿತ್ತು.</p>.<p>’ಪಾನ್ಸರೆ ಅವರನ್ನು ಹತ್ಯೆಗೈಯುವ ಮುನ್ನ ಕಲಾಸ್ಕರ್ ಒಂದು ವಾರಕ್ಕೂ ಹೆಚ್ಚು ಕಾಲ ಕೊಲ್ಹಾಪುರದಲ್ಲಿ ನೆಲೆಸಿದ್ದ. ಪಾನ್ಸರೆ ಹತ್ಯೆಯಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವುದರಿಂದ ಕಲಾಸ್ಕರ್ನನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲೂ ಕಲಾಸ್ಕರ್ನನ್ನು ಬಂಧಿಸಲಾಗಿತ್ತು. ಈತ 16ನೇ ಆರೋಪಿಯಾಗಿದ್ದು, ಹತ್ಯೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರಮುಖ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕಲಸ್ಕರ್ನನ್ನು ಕಳೆದ ವರ್ಷ ಅಗಸ್ಟ್ನಲ್ಲಿ ಪಾಲ್ಗಡ್ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ/ಕೊಲ್ಹಾಪುರ:</strong> ವಿಚಾರವಾದಿ, ಕಮ್ಯುನಿಸ್ಟ್ ನಾಯಕ ಗೋವಿಂದ ಪಾನ್ಸರೆ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ಕಾರ್ಯಕರ್ತ ಶರದ್ ಕಲಾಸ್ಕರ್ನನ್ನು ಮಂಗಳವಾರ ಬಂಧಿಸಲಾಗಿದೆ.</p>.<p>ಸಿಐಡಿಯ ವಿಶೇಷ ತನಿಖಾ ತಂಡ ಕಲಾಸ್ಕರ್(25)ನನ್ನು ಮುಂಬೈನಲ್ಲಿ ಬಂಧಿಸಿ ಕೊಲ್ಹಾಪುರದ ನ್ಯಾಯಾಲಯದಲ್ಲಿ ಹಾಜರುಪಡಿಸಿತು. ನ್ಯಾಯಾಲಯ ಜೂನ್ 18ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿತು. ಇನೊಬ್ಬ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿದ್ದ ಇಬ್ಬರಲ್ಲಿ ಈತನೂ ಒಬ್ಬ ಎಂದು ಸಿಬಿಐ ಹೇಳಿತ್ತು.</p>.<p>’ಪಾನ್ಸರೆ ಅವರನ್ನು ಹತ್ಯೆಗೈಯುವ ಮುನ್ನ ಕಲಾಸ್ಕರ್ ಒಂದು ವಾರಕ್ಕೂ ಹೆಚ್ಚು ಕಾಲ ಕೊಲ್ಹಾಪುರದಲ್ಲಿ ನೆಲೆಸಿದ್ದ. ಪಾನ್ಸರೆ ಹತ್ಯೆಯಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವುದರಿಂದ ಕಲಾಸ್ಕರ್ನನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲೂ ಕಲಾಸ್ಕರ್ನನ್ನು ಬಂಧಿಸಲಾಗಿತ್ತು. ಈತ 16ನೇ ಆರೋಪಿಯಾಗಿದ್ದು, ಹತ್ಯೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರಮುಖ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕಲಸ್ಕರ್ನನ್ನು ಕಳೆದ ವರ್ಷ ಅಗಸ್ಟ್ನಲ್ಲಿ ಪಾಲ್ಗಡ್ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>