<p><strong>ನವದೆಹಲಿ</strong>: ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆ ಪ್ರಕರಣದ ತನಿಖೆ ಕುರಿತು ಮೇಲ್ವಿಚಾರಣೆ ಅಗತ್ಯ ಇಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.</p>.<p>ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ, ಪಾನ್ಸರೆ ಅವರ ಪುತ್ರಿ ಹಾಗೂ ಸೊಸೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಎಂ.ಎಂ.ಸುಂದ್ರೇಶ್ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರು ಇದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿ, ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ನೀಡಿ ಸೆಪ್ಟೆಂಬರ್ 1ರಂದು ಆದೇಶಿಸಿದೆ.</p>.<p>ಸಿಪಿಐ ನಾಯಕ ಹಾಗೂ ಲೇಖಕರಾಗಿದ್ದ ಪಾನ್ಸರೆ ಅವರು, ಪತ್ನಿ ಉಮಾ ಅವರೊಂದಿಗೆ ಕೊಲ್ಹಾಪುರದಲ್ಲಿ 2015ರ ಫೆಬ್ರುವರಿ 16ರಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ, ದಂಪತಿ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಪಾನ್ಸರೆ ಅವರು ಫೆಬ್ರುವರಿ 20ರಂದು ಮೃತಪಟ್ಟರೆ, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದರು.</p>.<p>2016ರಿಂದ ಹೈಕೋರ್ಟ್, ತನಿಖೆಯ ಮೇಲ್ವಿಚಾರಣೆ ನಡೆಸುತ್ತಿತ್ತು. ಆರಂಭದಲ್ಲಿ ಎಸ್ಐಟಿ ನಡೆಸುತ್ತಿದ್ದ ತನಿಖೆಯನ್ನು 2022ರ ಆಗಸ್ಟ್ 3ರಂದು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳಕ್ಕೆ (ಎಟಿಎಸ್) ವಹಿಸಲಾಗಿತ್ತು.</p>.<p>‘ಎಟಿಎಸ್ ನಡೆಸುತ್ತಿರುವ ತನಿಖೆಯಲ್ಲಿ ಗಮನಾರ್ಹ ಪ್ರಗತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ನಾವು ಮೇಲ್ಮನವಿ ಸಲ್ಲಿಸಿದ್ದೆವು. ತನಿಖೆಯ ಮೇಲ್ವಿಚಾರಣೆ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ನಮ್ಮ ಅರ್ಜಿಯನ್ನು ವಜಾಗೊಳಿಸಿದೆ’ ಎಂಬುದು ಅರ್ಜಿದಾರರ ವಾದವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆ ಪ್ರಕರಣದ ತನಿಖೆ ಕುರಿತು ಮೇಲ್ವಿಚಾರಣೆ ಅಗತ್ಯ ಇಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.</p>.<p>ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ, ಪಾನ್ಸರೆ ಅವರ ಪುತ್ರಿ ಹಾಗೂ ಸೊಸೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಎಂ.ಎಂ.ಸುಂದ್ರೇಶ್ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರು ಇದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿ, ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ನೀಡಿ ಸೆಪ್ಟೆಂಬರ್ 1ರಂದು ಆದೇಶಿಸಿದೆ.</p>.<p>ಸಿಪಿಐ ನಾಯಕ ಹಾಗೂ ಲೇಖಕರಾಗಿದ್ದ ಪಾನ್ಸರೆ ಅವರು, ಪತ್ನಿ ಉಮಾ ಅವರೊಂದಿಗೆ ಕೊಲ್ಹಾಪುರದಲ್ಲಿ 2015ರ ಫೆಬ್ರುವರಿ 16ರಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ, ದಂಪತಿ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಪಾನ್ಸರೆ ಅವರು ಫೆಬ್ರುವರಿ 20ರಂದು ಮೃತಪಟ್ಟರೆ, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದರು.</p>.<p>2016ರಿಂದ ಹೈಕೋರ್ಟ್, ತನಿಖೆಯ ಮೇಲ್ವಿಚಾರಣೆ ನಡೆಸುತ್ತಿತ್ತು. ಆರಂಭದಲ್ಲಿ ಎಸ್ಐಟಿ ನಡೆಸುತ್ತಿದ್ದ ತನಿಖೆಯನ್ನು 2022ರ ಆಗಸ್ಟ್ 3ರಂದು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳಕ್ಕೆ (ಎಟಿಎಸ್) ವಹಿಸಲಾಗಿತ್ತು.</p>.<p>‘ಎಟಿಎಸ್ ನಡೆಸುತ್ತಿರುವ ತನಿಖೆಯಲ್ಲಿ ಗಮನಾರ್ಹ ಪ್ರಗತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ನಾವು ಮೇಲ್ಮನವಿ ಸಲ್ಲಿಸಿದ್ದೆವು. ತನಿಖೆಯ ಮೇಲ್ವಿಚಾರಣೆ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ನಮ್ಮ ಅರ್ಜಿಯನ್ನು ವಜಾಗೊಳಿಸಿದೆ’ ಎಂಬುದು ಅರ್ಜಿದಾರರ ವಾದವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>