ಆಗ್ರ(ಉತ್ತರ ಪ್ರದೇಶ): ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬರದ ಹಿನ್ನೆಲೆ ಕೋಪಗೊಂಡ ರಾಷ್ಟ್ರೀಯ ಹಿಂದೂ ಪರಿಷತ್(ಆರ್ಎಚ್ಪಿ) ಅಧ್ಯಕ್ಷ ಗೋವಿಂದ ಪರಾಶರ, ಚುನಾವಣಾ ಸುದ್ದಿ ಪ್ರಸಾರ ಮಾಡುತ್ತಿದ್ದ ಟಿ.ವಿಗೆ ಬೆಂಕಿ ಹಚ್ಚಿ ಅಸಮಾಧಾನ ಹೊರಹಾಕಿದ್ದಾರೆ.
ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಸುದ್ದಿ ವಾಹಿನಿಯೊಂದು ಫಲಿತಾಂಶ ಕುರಿತ ಸುದ್ದಿಯನ್ನು ಪ್ರಸಾರ ಮಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಪರಾಶರ ಅವರು ಗೋಡೆಗೆ ಅಂಟಿಸಿದ್ದ ಸ್ಮಾರ್ಟ್ ಟಿ.ವಿಯನ್ನು ಕಿತ್ತು ನೆಲಕ್ಕೆ ಅಪ್ಪಳಿಸಿದ್ದಾರೆ. ನಂತರ ಕಾಲಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ.ವಿಯನ್ನು ಹೊರಗೆ ತಂದು ಅದಕ್ಕೆ ಬೆಂಕಿ ಹಚ್ಚಿದ್ದಾರೆ.