<p><strong>ನವದೆಹಲಿ:</strong> ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್ಡಿಆರ್ಎಫ್) ಸಿಬ್ಬಂದಿಗೆ ಶೇ 40 ‘ತೊಂದರೆ ಮತ್ತು ಅಪಾಯ ಭತ್ಯೆ’ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಘೋಷಿಸಿದ್ದಾರೆ.</p>.<p>ಈಚೆಗೆ ಹಿಮಾಚಲ ಪ್ರದೇಶದ ಮಣಿರಂಗ್ ಶಿಖರವನ್ನು ಯಶಸ್ವಿಯಾಗಿ ಏರಿ ಹಿಂತಿರುಗಿದ್ದ ಎನ್ಡಿಆರ್ಎಫ್ನ 35 ಜನರ ಸಾಹಸ ತಂಡಕ್ಕೆ ಅಭಿನಂದನೆ ಸಲ್ಲಿಸುವ ವೇಳೆ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದಾರೆ. ಅಪಾಯ ಭತ್ಯೆಯು ವಿಪತ್ತು ನಿರ್ವಹಣೆಯಂತಹ ಸವಾಲಿನ ಸಂದರ್ಭದಲ್ಲಿ ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಎನ್ಡಿಆರ್ಎಫ್ ಸಿಬ್ಬಂದಿಯ ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಈ ಸೌಲಭ್ಯದಿಂದ ಎನ್ಡಿಆರ್ಎಫ್ನ ಎಲ್ಲ 16,000 ಸಿಬ್ಬಂದಿಗೆ ಅನುಕೂಲವಾಗಲಿದೆ. ಅಲ್ಲದೆ, ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ) ಹಾಗೂ ವಿಶೇಷ ಭದ್ರತಾ ಪಡೆಯ(ಎಸ್ಪಿಜಿ) ಸಿಬ್ಬಂದಿಗೂ ಶೇ.25 ತೊಂದರೆ ಮತ್ತು ಅಪಾಯ ಭತ್ಯೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ.</p>.<p>ಇದೇ ವೇಳೆ ಎನ್ಡಿಆರ್ಎಫ್, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಸೇರಿದಂತೆ ಕೇಂದ್ರ ಸರ್ಕಾರದ ಅಡಿ ಬರುವ ಭದ್ರತಾ ಪಡೆಗಳಲ್ಲಿ ‘ಕ್ರೀಡಾ ಸಂಸ್ಕೃತಿ’ ವೃದ್ಧಿಸಲು ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್ಡಿಆರ್ಎಫ್) ಸಿಬ್ಬಂದಿಗೆ ಶೇ 40 ‘ತೊಂದರೆ ಮತ್ತು ಅಪಾಯ ಭತ್ಯೆ’ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಘೋಷಿಸಿದ್ದಾರೆ.</p>.<p>ಈಚೆಗೆ ಹಿಮಾಚಲ ಪ್ರದೇಶದ ಮಣಿರಂಗ್ ಶಿಖರವನ್ನು ಯಶಸ್ವಿಯಾಗಿ ಏರಿ ಹಿಂತಿರುಗಿದ್ದ ಎನ್ಡಿಆರ್ಎಫ್ನ 35 ಜನರ ಸಾಹಸ ತಂಡಕ್ಕೆ ಅಭಿನಂದನೆ ಸಲ್ಲಿಸುವ ವೇಳೆ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದಾರೆ. ಅಪಾಯ ಭತ್ಯೆಯು ವಿಪತ್ತು ನಿರ್ವಹಣೆಯಂತಹ ಸವಾಲಿನ ಸಂದರ್ಭದಲ್ಲಿ ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಎನ್ಡಿಆರ್ಎಫ್ ಸಿಬ್ಬಂದಿಯ ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಈ ಸೌಲಭ್ಯದಿಂದ ಎನ್ಡಿಆರ್ಎಫ್ನ ಎಲ್ಲ 16,000 ಸಿಬ್ಬಂದಿಗೆ ಅನುಕೂಲವಾಗಲಿದೆ. ಅಲ್ಲದೆ, ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ) ಹಾಗೂ ವಿಶೇಷ ಭದ್ರತಾ ಪಡೆಯ(ಎಸ್ಪಿಜಿ) ಸಿಬ್ಬಂದಿಗೂ ಶೇ.25 ತೊಂದರೆ ಮತ್ತು ಅಪಾಯ ಭತ್ಯೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ.</p>.<p>ಇದೇ ವೇಳೆ ಎನ್ಡಿಆರ್ಎಫ್, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಸೇರಿದಂತೆ ಕೇಂದ್ರ ಸರ್ಕಾರದ ಅಡಿ ಬರುವ ಭದ್ರತಾ ಪಡೆಗಳಲ್ಲಿ ‘ಕ್ರೀಡಾ ಸಂಸ್ಕೃತಿ’ ವೃದ್ಧಿಸಲು ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>