<p class="title">ನವದೆಹಲಿ: ಕೇಂದ್ರದ ಮಾಜಿ ಸಚಿವ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ನೀಡಿದ್ದ ಬಂಗಲೆಯನ್ನು ಖಾಲಿ ಮಾಡುವಂತೆ ಅವರ ಪುತ್ರ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸೂಚಿಸಿದೆ.</p>.<p class="title">ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನರಾಗುವವರೆಗೂ ಸುಮಾರು ಮೂರು ದಶಕಗಳ ಕಾಲ ‘12 ಜನಪಥ್’ ಬಂಗಲೆಯಲ್ಲಿಯೇ ವಾಸವಾಗಿದ್ದರು. 1989ರಿಂದ 2020ರ ತನಕ ಅವರು ಇದೇ ಬಂಗಲೆಯಲ್ಲಿ ನೆಲೆಸಿದ್ದರು.</p>.<p class="title">ರಾಮ್ ವಿಲಾಸ್ ಅವರ ನಿಧನದ ನಂತರ ಅವರ ಪತ್ನಿ, ಪುತ್ರ ಚಿರಾಗ್ ಮತ್ತು ಅವರ ಕುಟುಂಬದ ಸದಸ್ಯರು ಇಲ್ಲಿ ತಂಗಿದ್ದಾರೆ.</p>.<p class="title">‘ಬಂಗಲೆಯನ್ನು ಕೇಂದ್ರ ಮಂತ್ರಿಗಳಿಗೆ ಮೀಸಲಿಡಲಾಗಿದೆ ಮತ್ತು ಸರ್ಕಾರಿ ವಸತಿಗೃಹದ ನಿವಾಸಿಗಳು ಅದನ್ನು ಖಾಲಿ ಮಾಡುವಂತೆ ಕೋರಲಾಗಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">ಬಂಗಲೆ ತೆರವು ಸೂಚನೆಗೆ ಸಂಬಂಧಿಸಿದಂತೆ ಚಿರಾಗ್ ಪಾಸ್ವಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ನವದೆಹಲಿ: ಕೇಂದ್ರದ ಮಾಜಿ ಸಚಿವ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ನೀಡಿದ್ದ ಬಂಗಲೆಯನ್ನು ಖಾಲಿ ಮಾಡುವಂತೆ ಅವರ ಪುತ್ರ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸೂಚಿಸಿದೆ.</p>.<p class="title">ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನರಾಗುವವರೆಗೂ ಸುಮಾರು ಮೂರು ದಶಕಗಳ ಕಾಲ ‘12 ಜನಪಥ್’ ಬಂಗಲೆಯಲ್ಲಿಯೇ ವಾಸವಾಗಿದ್ದರು. 1989ರಿಂದ 2020ರ ತನಕ ಅವರು ಇದೇ ಬಂಗಲೆಯಲ್ಲಿ ನೆಲೆಸಿದ್ದರು.</p>.<p class="title">ರಾಮ್ ವಿಲಾಸ್ ಅವರ ನಿಧನದ ನಂತರ ಅವರ ಪತ್ನಿ, ಪುತ್ರ ಚಿರಾಗ್ ಮತ್ತು ಅವರ ಕುಟುಂಬದ ಸದಸ್ಯರು ಇಲ್ಲಿ ತಂಗಿದ್ದಾರೆ.</p>.<p class="title">‘ಬಂಗಲೆಯನ್ನು ಕೇಂದ್ರ ಮಂತ್ರಿಗಳಿಗೆ ಮೀಸಲಿಡಲಾಗಿದೆ ಮತ್ತು ಸರ್ಕಾರಿ ವಸತಿಗೃಹದ ನಿವಾಸಿಗಳು ಅದನ್ನು ಖಾಲಿ ಮಾಡುವಂತೆ ಕೋರಲಾಗಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">ಬಂಗಲೆ ತೆರವು ಸೂಚನೆಗೆ ಸಂಬಂಧಿಸಿದಂತೆ ಚಿರಾಗ್ ಪಾಸ್ವಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>