<p><strong>ನವದೆಹಲಿ:</strong> ಉದಯಪುರದಲ್ಲಿ ನಡೆದ ಹತ್ಯೆಯನ್ನು ಪ್ರೋತ್ಸಾಹಿಸುವ, ವೈಭವೀಕರಿಸುವ ಅಥವಾ ಸಮರ್ಥಿಸುವ ವಿಷಯಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳು ತೆಗೆದುಹಾಕುವ ಅಗತ್ಯವಿದೆ ಎಂದು ವಿದ್ಯುನ್ಮಾನ ಮತ್ತುಮಾಹಿತಿ ಸಚಿವಾಲಯ ಶುಕ್ರವಾರ ಹೇಳಿದೆ.</p>.<p>ರಾಜಸ್ಥಾನದ ಉದಯಪುರದ ನಿವಾಸಿ ಕನ್ಹಯ್ಯಾ ಲಾಲ್ ಅವರನ್ನು ಮಂಗಳವಾರ ರಿಯಾಜ್ ಅಖ್ತಾರಿ ಮತ್ತು ಘೌಸ್ ಮೊಹಮ್ಮದ್ ಎಂಬುವವರು ಕತ್ತು ಸೀಳಿ ಕೊಂದಿದ್ದರು. ಅಲ್ಲದೆ, ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.</p>.<p>‘ಉದಯಪುರದ ಹತ್ಯೆಯನ್ನು ಪ್ರೋತ್ಸಾಹಿಸುವ, ವೈಭವೀಕರಿಸುವ, ಸಮರ್ಥಿಸುವ ಯಾವುದೇ ವಿಷಯವನ್ನು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ತೆಗೆದು ಹಾಕಬೇಕು’ ಎಂದು ಜೂನ್ 29ರಂದು ಹೊರಡಿಸಿದ ನೋಟಿಸ್ನಲ್ಲಿ ತಿಳಿಸಲಾಗಿದೆ.</p>.<p>ಉದಯಪುರದ ಹತ್ಯೆಯ ವಿಡಿಯೊವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಕೆಲ ಮಂದಿ ಕೊಲೆಯನ್ನು ವೈಭವೀಕರಿಸುವ ಮತ್ತು ಸಮರ್ಥಿಸುವ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದಯಪುರದಲ್ಲಿ ನಡೆದ ಹತ್ಯೆಯನ್ನು ಪ್ರೋತ್ಸಾಹಿಸುವ, ವೈಭವೀಕರಿಸುವ ಅಥವಾ ಸಮರ್ಥಿಸುವ ವಿಷಯಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳು ತೆಗೆದುಹಾಕುವ ಅಗತ್ಯವಿದೆ ಎಂದು ವಿದ್ಯುನ್ಮಾನ ಮತ್ತುಮಾಹಿತಿ ಸಚಿವಾಲಯ ಶುಕ್ರವಾರ ಹೇಳಿದೆ.</p>.<p>ರಾಜಸ್ಥಾನದ ಉದಯಪುರದ ನಿವಾಸಿ ಕನ್ಹಯ್ಯಾ ಲಾಲ್ ಅವರನ್ನು ಮಂಗಳವಾರ ರಿಯಾಜ್ ಅಖ್ತಾರಿ ಮತ್ತು ಘೌಸ್ ಮೊಹಮ್ಮದ್ ಎಂಬುವವರು ಕತ್ತು ಸೀಳಿ ಕೊಂದಿದ್ದರು. ಅಲ್ಲದೆ, ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.</p>.<p>‘ಉದಯಪುರದ ಹತ್ಯೆಯನ್ನು ಪ್ರೋತ್ಸಾಹಿಸುವ, ವೈಭವೀಕರಿಸುವ, ಸಮರ್ಥಿಸುವ ಯಾವುದೇ ವಿಷಯವನ್ನು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ತೆಗೆದು ಹಾಕಬೇಕು’ ಎಂದು ಜೂನ್ 29ರಂದು ಹೊರಡಿಸಿದ ನೋಟಿಸ್ನಲ್ಲಿ ತಿಳಿಸಲಾಗಿದೆ.</p>.<p>ಉದಯಪುರದ ಹತ್ಯೆಯ ವಿಡಿಯೊವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಕೆಲ ಮಂದಿ ಕೊಲೆಯನ್ನು ವೈಭವೀಕರಿಸುವ ಮತ್ತು ಸಮರ್ಥಿಸುವ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>