<p><strong>ನವದೆಹಲಿ:</strong> ದೇಶದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಸಂಭವಿಸುತ್ತಿರುವ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ₹ 30 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ಆದೇಶಿಸಿದೆ.</p><p>ಒಳಚರಂಡಿಗಳ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವವರಿಗೆ ಕನಿಷ್ಠ ₹ 20 ಲಕ್ಷ ಪರಿಹಾರ ಒದಗಿಸಬೇಕು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ವೈಕಲ್ಯತೆಗೆ ತುತ್ತಾದವರಿಗೆ ಸಂಬಂಧಪಟ್ಟ ಆಡಳಿತವು ₹ 10 ಲಕ್ಷ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ನ್ಯಾ. ಎಸ್.ರವೀಂದ್ರ ಭಟ್ ಹಾಗೂ ನ್ಯಾ. ಅರವಿಂದ್ ಕುಮಾರ್ ಅವರನ್ನೊಳಗೊಂಡ ಪೀಠ ಸೂಚಿಸಿದೆ.</p><p>'ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೊಂಡಿದೆ ಎಂಬುದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಚಿತಪಡಿಸಿಕೊಳ್ಳಬೇಕು' ಎಂದು ಪೀಠ ಹೇಳಿದೆ.</p><p>ಕೇಂದ್ರ ಸರ್ಕಾರ 2022ರಲ್ಲಿ ಲೋಕಸಭೆಗೆ ನೀಡಿದ ಅಂಕಿ–ಅಂಶಗಳ ಪ್ರಕಾರ, ದೇಶದಾದ್ಯಂತ ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆ ವೇಳೆ 347 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಉತ್ತರ ಪ್ರದೇಶ, ತಮಿಳುನಾಡು ಮತ್ತು ದೆಹಲಿಯಲ್ಲಿ ಶೇ 40 ಪ್ರಕರಣಗಳು ವರದಿಯಾಗಿವೆ.</p><p>ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ತೀರ್ಪು ನೀಡಿದೆ.</p>.ಕಾಂಗ್ರೆಸ್ ಮೋಸ ಮಾಡಿದೆ ಎಂದ ಅಖಿಲೇಶ್ ಯಾದವ್: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಸಂಭವಿಸುತ್ತಿರುವ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ₹ 30 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ಆದೇಶಿಸಿದೆ.</p><p>ಒಳಚರಂಡಿಗಳ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವವರಿಗೆ ಕನಿಷ್ಠ ₹ 20 ಲಕ್ಷ ಪರಿಹಾರ ಒದಗಿಸಬೇಕು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ವೈಕಲ್ಯತೆಗೆ ತುತ್ತಾದವರಿಗೆ ಸಂಬಂಧಪಟ್ಟ ಆಡಳಿತವು ₹ 10 ಲಕ್ಷ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ನ್ಯಾ. ಎಸ್.ರವೀಂದ್ರ ಭಟ್ ಹಾಗೂ ನ್ಯಾ. ಅರವಿಂದ್ ಕುಮಾರ್ ಅವರನ್ನೊಳಗೊಂಡ ಪೀಠ ಸೂಚಿಸಿದೆ.</p><p>'ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೊಂಡಿದೆ ಎಂಬುದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಚಿತಪಡಿಸಿಕೊಳ್ಳಬೇಕು' ಎಂದು ಪೀಠ ಹೇಳಿದೆ.</p><p>ಕೇಂದ್ರ ಸರ್ಕಾರ 2022ರಲ್ಲಿ ಲೋಕಸಭೆಗೆ ನೀಡಿದ ಅಂಕಿ–ಅಂಶಗಳ ಪ್ರಕಾರ, ದೇಶದಾದ್ಯಂತ ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆ ವೇಳೆ 347 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಉತ್ತರ ಪ್ರದೇಶ, ತಮಿಳುನಾಡು ಮತ್ತು ದೆಹಲಿಯಲ್ಲಿ ಶೇ 40 ಪ್ರಕರಣಗಳು ವರದಿಯಾಗಿವೆ.</p><p>ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ತೀರ್ಪು ನೀಡಿದೆ.</p>.ಕಾಂಗ್ರೆಸ್ ಮೋಸ ಮಾಡಿದೆ ಎಂದ ಅಖಿಲೇಶ್ ಯಾದವ್: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>