<p><strong>ನವದೆಹಲಿ:</strong> ಕೊರೊನಾ ವೈರಸ್ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ಕೇಂದ್ರವು ಅತ್ಯಂತ ನಿರ್ಲಕ್ಷ್ಯ ಮತ್ತು ಅತಿಯಾದ ಆತ್ಮವಿಶ್ವಾಸವನ್ನು ಹೊಂದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ ಎಂದಿದ್ದಾರೆ.</p>.<p>ದಕ್ಷಿಣ ಆಫ್ರಿಕ ಮತ್ತು ಬ್ರೆಜಿಲ್ನಲ್ಲಿ ಪತ್ತೆಯಾದ ಕೊರೊನಾ ವೈರಸ್ ರೂಪಾಂತರಗಳು ಭಾರತಕ್ಕೂ ಪ್ರವೇಶಿಸಿವೆ ಎಂದು ವರದಿಯಾದ ನಂತರ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತ ಸರ್ಕಾರವು ತೀವ್ರ ನಿರ್ಲಕ್ಷ್ಯ ಮತ್ತು ಕೋವಿಡ್-19 ಬಗ್ಗೆ ಹೆಚ್ಚಿನ ವಿಶ್ವಾಸವನ್ನು ಹೊಂದಿದೆ. ಆದರೆ ಕೊರೊನಾ ವೈರಸ್ ರೋಗವು ಇನ್ನು ಕೊನೆಗೊಂಡಿಲ್ಲ' ಎಂದು ಹೇಳಿದ್ದಾರೆ.</p>.<p>ಭಾರತದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ SARS-CoV-2 ರೂಪಾಂತರದ ಸೋಂಕು ನಾಲ್ಕು ಜನರಲ್ಲಿ ಪತ್ತೆ ಮಾಡಲಾಗಿದೆ ಮತ್ತು ಮತ್ತೊಬ್ಬರಿಗೆ ಬ್ರೆಜಿಲ್ನಲ್ಲಿ ಪತ್ತೆಯಾದ ಕೊರೊನಾ ವೈರಸ್ ರೂಪಾಂತರದ ಸೋಂಕುಪೀಡಿತರಾಗಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.</p>.<p>ಭಾರತಕ್ಕೆ ಹಿಂದಿರುಗಿದವರ ಪೈಕಿ ನಾಲ್ವರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ಸೋಂಕು ಪತ್ತೆಯಾಗಿದೆ. ಒಬ್ಬರು ಅಂಗೋಲಾದಿಂದ, ತಾಂಜೇನಿಯಾದಿಂದ ಒಬ್ಬರು ಮತ್ತು ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಜನವರಿಯಲ್ಲಿ ರೂಪಾಂತರ ಸೋಂಕು ಪತ್ತೆಯಾಗಿತ್ತು ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ ತಿಳಿಸಿದ್ದಾರೆ.</p>.<p>11,610 ಹೊಸ ಪ್ರಕರಣಗಳೊಂದಿಗೆ ಭಾರತದ ಕೋವಿಡ್ ಸೋಂಕಿತರ ಸಂಖ್ಯೆಯು ಬುಧವಾರದ ವೇಳೆಗೆ 1,09,37,320ಕ್ಕೆ ಏರಿಕೆಯಾಗಿದೆ. ಈ ಪೈಕಿ 1,06,44,858 ಜನರು ಈವರೆಗೆ ಗುಣಮುಖರಾಗಿದ್ದು,1,55,913 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ವೈರಸ್ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ಕೇಂದ್ರವು ಅತ್ಯಂತ ನಿರ್ಲಕ್ಷ್ಯ ಮತ್ತು ಅತಿಯಾದ ಆತ್ಮವಿಶ್ವಾಸವನ್ನು ಹೊಂದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ ಎಂದಿದ್ದಾರೆ.</p>.<p>ದಕ್ಷಿಣ ಆಫ್ರಿಕ ಮತ್ತು ಬ್ರೆಜಿಲ್ನಲ್ಲಿ ಪತ್ತೆಯಾದ ಕೊರೊನಾ ವೈರಸ್ ರೂಪಾಂತರಗಳು ಭಾರತಕ್ಕೂ ಪ್ರವೇಶಿಸಿವೆ ಎಂದು ವರದಿಯಾದ ನಂತರ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತ ಸರ್ಕಾರವು ತೀವ್ರ ನಿರ್ಲಕ್ಷ್ಯ ಮತ್ತು ಕೋವಿಡ್-19 ಬಗ್ಗೆ ಹೆಚ್ಚಿನ ವಿಶ್ವಾಸವನ್ನು ಹೊಂದಿದೆ. ಆದರೆ ಕೊರೊನಾ ವೈರಸ್ ರೋಗವು ಇನ್ನು ಕೊನೆಗೊಂಡಿಲ್ಲ' ಎಂದು ಹೇಳಿದ್ದಾರೆ.</p>.<p>ಭಾರತದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ SARS-CoV-2 ರೂಪಾಂತರದ ಸೋಂಕು ನಾಲ್ಕು ಜನರಲ್ಲಿ ಪತ್ತೆ ಮಾಡಲಾಗಿದೆ ಮತ್ತು ಮತ್ತೊಬ್ಬರಿಗೆ ಬ್ರೆಜಿಲ್ನಲ್ಲಿ ಪತ್ತೆಯಾದ ಕೊರೊನಾ ವೈರಸ್ ರೂಪಾಂತರದ ಸೋಂಕುಪೀಡಿತರಾಗಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.</p>.<p>ಭಾರತಕ್ಕೆ ಹಿಂದಿರುಗಿದವರ ಪೈಕಿ ನಾಲ್ವರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ಸೋಂಕು ಪತ್ತೆಯಾಗಿದೆ. ಒಬ್ಬರು ಅಂಗೋಲಾದಿಂದ, ತಾಂಜೇನಿಯಾದಿಂದ ಒಬ್ಬರು ಮತ್ತು ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಜನವರಿಯಲ್ಲಿ ರೂಪಾಂತರ ಸೋಂಕು ಪತ್ತೆಯಾಗಿತ್ತು ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ ತಿಳಿಸಿದ್ದಾರೆ.</p>.<p>11,610 ಹೊಸ ಪ್ರಕರಣಗಳೊಂದಿಗೆ ಭಾರತದ ಕೋವಿಡ್ ಸೋಂಕಿತರ ಸಂಖ್ಯೆಯು ಬುಧವಾರದ ವೇಳೆಗೆ 1,09,37,320ಕ್ಕೆ ಏರಿಕೆಯಾಗಿದೆ. ಈ ಪೈಕಿ 1,06,44,858 ಜನರು ಈವರೆಗೆ ಗುಣಮುಖರಾಗಿದ್ದು,1,55,913 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>