<p><strong>ನವದೆಹಲಿ:</strong> ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಸಂಗಮದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. </p><p>ಕುಂಭಮೇಳದ ವ್ಯವಸ್ಥೆಯಲ್ಲಿನ ದುರಾಡಳಿತವನ್ನು ಮುಚ್ಚಿಹಾಕಲು ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲೇಶ್ ಆಗ್ರಹಿಸಿದ್ದಾರೆ. </p><p>ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಅವರು, 'ಸರ್ಕಾರ ಡಿಜಿಟಲ್ ಕುಂಭವನ್ನು ಆಯೋಜಿಸುವುದಾಗಿ ಹೇಳಿಕೊಂಡಿದೆ. ಆದರೆ ಮೃತರ ಸಂಖ್ಯೆಯನ್ನು ಮರೆಮಾಚುತ್ತಿದೆ' ಎಂದು ಆರೋಪಿಸಿದ್ದಾರೆ. </p><p>'ಕೇಂದ್ರ ಸರ್ಕಾರವು ಬಜೆಟ್ ಅಂಕಿಯನ್ನು ನಿರಂತರವಾಗಿ ಹೊರಹಾಕುವುದರಲ್ಲಿ ತಲ್ಲೀನವಾಗಿದೆ. ದಯವಿಟ್ಟು ಕುಂಭಮೇಳದಲ್ಲಿ ಮೃತರ ಸಂಖ್ಯೆಯನ್ನು ನೀಡಿ' ಎಂದು ಅಖಿಲೇಶ್ ಬಯಸಿದ್ದಾರೆ. </p><p>'ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರು, ಗಾಯಾಳುಗಳು, ಚಿಕಿತ್ಸೆಯಲ್ಲಿರುವವರು ಸೇರಿದಂತೆ ಆಹಾರ, ನೀರು, ಸಾರಿಗೆ ಲಭ್ಯತೆಯ ನಿಖರ ಅಂಕಿಅಂಶಗಳನ್ನು ಸಂಸತ್ತಿಗೆ ತಿಳಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>'ಕಾಲ್ತುಳಿತ ನಡೆದ ಸ್ಥಳದಿಂದ ಮೃಹದೇಹಗಳನ್ನು ತೆರವುಗೊಳಿಸಲು ಸರ್ಕಾರವು ಜೆಸಿಬಿ ಮತ್ತು ಟ್ರ್ಯಾಕ್ಟರ್ಗಳನ್ನು ಬಳಸಿತ್ತು. ಇದು ಎಂತಹ ಸನಾತನ ಸಂಪ್ರದಾಯ' ಎಂದು ಅವರು ಪ್ರಶ್ನಿಸಿದ್ದಾರೆ. </p><p>ಜನವರಿ 29ರಂದು 'ಮೌನಿ ಅಮಾವಾಸ್ಯೆ'ಯಂದು ನಡೆದ ಅಮೃತ ಸ್ನಾನದ ವೇಳೆ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದರು.</p>.Maha Kumbh Stampede | ಪಿತೂರಿ ಶಂಕೆ: 16 ಸಾವಿರ ಮೊಬೈಲ್ ಸಂಖ್ಯೆ ಪರಿಶೀಲನೆ.Maha Kumbh Stampede | ಕಾಣೆಯಾದವರಿಗೆ ಇನ್ನೂ ಹುಡುಕಾಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಸಂಗಮದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. </p><p>ಕುಂಭಮೇಳದ ವ್ಯವಸ್ಥೆಯಲ್ಲಿನ ದುರಾಡಳಿತವನ್ನು ಮುಚ್ಚಿಹಾಕಲು ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲೇಶ್ ಆಗ್ರಹಿಸಿದ್ದಾರೆ. </p><p>ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಅವರು, 'ಸರ್ಕಾರ ಡಿಜಿಟಲ್ ಕುಂಭವನ್ನು ಆಯೋಜಿಸುವುದಾಗಿ ಹೇಳಿಕೊಂಡಿದೆ. ಆದರೆ ಮೃತರ ಸಂಖ್ಯೆಯನ್ನು ಮರೆಮಾಚುತ್ತಿದೆ' ಎಂದು ಆರೋಪಿಸಿದ್ದಾರೆ. </p><p>'ಕೇಂದ್ರ ಸರ್ಕಾರವು ಬಜೆಟ್ ಅಂಕಿಯನ್ನು ನಿರಂತರವಾಗಿ ಹೊರಹಾಕುವುದರಲ್ಲಿ ತಲ್ಲೀನವಾಗಿದೆ. ದಯವಿಟ್ಟು ಕುಂಭಮೇಳದಲ್ಲಿ ಮೃತರ ಸಂಖ್ಯೆಯನ್ನು ನೀಡಿ' ಎಂದು ಅಖಿಲೇಶ್ ಬಯಸಿದ್ದಾರೆ. </p><p>'ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರು, ಗಾಯಾಳುಗಳು, ಚಿಕಿತ್ಸೆಯಲ್ಲಿರುವವರು ಸೇರಿದಂತೆ ಆಹಾರ, ನೀರು, ಸಾರಿಗೆ ಲಭ್ಯತೆಯ ನಿಖರ ಅಂಕಿಅಂಶಗಳನ್ನು ಸಂಸತ್ತಿಗೆ ತಿಳಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>'ಕಾಲ್ತುಳಿತ ನಡೆದ ಸ್ಥಳದಿಂದ ಮೃಹದೇಹಗಳನ್ನು ತೆರವುಗೊಳಿಸಲು ಸರ್ಕಾರವು ಜೆಸಿಬಿ ಮತ್ತು ಟ್ರ್ಯಾಕ್ಟರ್ಗಳನ್ನು ಬಳಸಿತ್ತು. ಇದು ಎಂತಹ ಸನಾತನ ಸಂಪ್ರದಾಯ' ಎಂದು ಅವರು ಪ್ರಶ್ನಿಸಿದ್ದಾರೆ. </p><p>ಜನವರಿ 29ರಂದು 'ಮೌನಿ ಅಮಾವಾಸ್ಯೆ'ಯಂದು ನಡೆದ ಅಮೃತ ಸ್ನಾನದ ವೇಳೆ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದರು.</p>.Maha Kumbh Stampede | ಪಿತೂರಿ ಶಂಕೆ: 16 ಸಾವಿರ ಮೊಬೈಲ್ ಸಂಖ್ಯೆ ಪರಿಶೀಲನೆ.Maha Kumbh Stampede | ಕಾಣೆಯಾದವರಿಗೆ ಇನ್ನೂ ಹುಡುಕಾಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>