<p class="title"><strong>ನವದೆಹಲಿ:</strong>ರೈತರ ಆದಾಯ, ಸಾಲದ ಹೊರೆ ಮತ್ತು ಇತರ ಸಮಸ್ಯೆಗಳ ಬಗ್ಗೆ ದತ್ತಾಂಶ ಕಲೆ ಹಾಕಲು ರಾಷ್ಟ್ರೀಯ ಮಟ್ಟದಲ್ಲಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ.</p>.<p class="title">ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.</p>.<p class="title">‘ಪ್ರಸ್ತಕ ಬೆಳೆ ವರ್ಷಕ್ಕೆ ಸಂಬಂಧಿಸಿದಂತೆ ಈ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಶೇಖಾವತ್ ತಿಳಿಸಿದ್ದಾರೆ.</p>.<p class="title">‘ದೇಶದ ರೈತ ಕುಟುಂಬಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆ ಹಾಕಲು ಈ ಸಮೀಕ್ಷೆ ನಡೆಸಲಾಗತ್ತದೆ. 2012–13ನೇ ಸಾಲಿನಲ್ಲಿ ಇಂತಹ ಸಮೀಕ್ಷೆ ನಡೆಸಲಾಗಿತ್ತು. ಆದರೆ 2014ರಿಂದ 2018ರ ನಡುವೆ ರೈತರ ಆರ್ಥಿಕ ಸ್ಥಿತಿಯಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ ದತ್ತಾಂಶ ಲಭ್ಯವಿಲ್ಲ. ಹೀಗಾಗಿ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಅವರು ವಿವರಿಸಿದ್ದಾರೆ.</p>.<p class="Briefhead"><strong>ಕೃಷಿ ಉದ್ದಿಮೆ ಸೂಚ್ಯಂಕ</strong></p>.<p>ರಾಜ್ಯಗಳಿಗೆ ‘ಕೃಷಿ ಉದ್ದಿಮೆಗಳ ಸರಾಗ ವಹಿವಾಟು’ ರ್ಯಾಂಕ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>‘ಈ ಕ್ಷೇತ್ರದಲ್ಲಿ ರಾಜ್ಯಗಳ ನಡುವೆ ಆರೋಗ್ಯಪೂರ್ಣ ಪೈಪೋಟಿ ಹೆಚ್ಚಿಸಲು ಇಂತಹ ರ್ಯಾಂಕ್ನ ಅವಶ್ಯಕತೆ ಇದೆ. ಹೀಗಾಗಿ ಕೃಷಿ ಉದ್ದಿಮೆಗಳಿಗೆ ಸಂಬಂಧಿಸಿದಂತೆ ಆಯಾ ರಾಜ್ಯಗಳ ಉತ್ಪಾದನೆ, ಉತ್ಪಾದಕತ್ವ ಮತ್ತು ವಹವಾಟುಗಳ ಸೂಚ್ಯಂಕವನ್ನು ಸಿದ್ಧಪಡಿಸಲಾಗುತ್ತದೆ. ಆ ಸೂಚ್ಯಂಕದ ಆಧಾರದಲ್ಲಿ ರ್ಯಾಂಕ್ ನಿರ್ಧರಿಸಲಾಗುತ್ತದೆ’ ಎಂದು ಸರ್ಕಾರವು ಹೇಳಿದೆ.</p>.<p><strong>ಸಕ್ಕರೆ ಉದ್ದಿಮೆಗೆ ಕಾರ್ಯಪಡೆ:</strong>ಸಕ್ಕರೆ ಉದ್ದಿಮೆ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೀತಿ ಆಯೋಗವು ಕಾರ್ಯಪಡೆಯೊಂದನ್ನು ರಚಿಸಿದೆ.</p>.<p>ಸರ್ಕಾರಗಳ ಮೇಲೆಸಕ್ಕರೆ ಕಾರ್ಖಾನೆ, ಕಬ್ಬು ಬೆಳೆಗಾರರ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕಾರ್ಯಪಡೆ ರಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ರೈತರ ಆದಾಯ, ಸಾಲದ ಹೊರೆ ಮತ್ತು ಇತರ ಸಮಸ್ಯೆಗಳ ಬಗ್ಗೆ ದತ್ತಾಂಶ ಕಲೆ ಹಾಕಲು ರಾಷ್ಟ್ರೀಯ ಮಟ್ಟದಲ್ಲಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ.</p>.<p class="title">ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.</p>.<p class="title">‘ಪ್ರಸ್ತಕ ಬೆಳೆ ವರ್ಷಕ್ಕೆ ಸಂಬಂಧಿಸಿದಂತೆ ಈ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಶೇಖಾವತ್ ತಿಳಿಸಿದ್ದಾರೆ.</p>.<p class="title">‘ದೇಶದ ರೈತ ಕುಟುಂಬಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆ ಹಾಕಲು ಈ ಸಮೀಕ್ಷೆ ನಡೆಸಲಾಗತ್ತದೆ. 2012–13ನೇ ಸಾಲಿನಲ್ಲಿ ಇಂತಹ ಸಮೀಕ್ಷೆ ನಡೆಸಲಾಗಿತ್ತು. ಆದರೆ 2014ರಿಂದ 2018ರ ನಡುವೆ ರೈತರ ಆರ್ಥಿಕ ಸ್ಥಿತಿಯಲ್ಲಿ ಆಗಿರುವ ಬದಲಾವಣೆಗಳ ಬಗ್ಗೆ ದತ್ತಾಂಶ ಲಭ್ಯವಿಲ್ಲ. ಹೀಗಾಗಿ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಅವರು ವಿವರಿಸಿದ್ದಾರೆ.</p>.<p class="Briefhead"><strong>ಕೃಷಿ ಉದ್ದಿಮೆ ಸೂಚ್ಯಂಕ</strong></p>.<p>ರಾಜ್ಯಗಳಿಗೆ ‘ಕೃಷಿ ಉದ್ದಿಮೆಗಳ ಸರಾಗ ವಹಿವಾಟು’ ರ್ಯಾಂಕ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>‘ಈ ಕ್ಷೇತ್ರದಲ್ಲಿ ರಾಜ್ಯಗಳ ನಡುವೆ ಆರೋಗ್ಯಪೂರ್ಣ ಪೈಪೋಟಿ ಹೆಚ್ಚಿಸಲು ಇಂತಹ ರ್ಯಾಂಕ್ನ ಅವಶ್ಯಕತೆ ಇದೆ. ಹೀಗಾಗಿ ಕೃಷಿ ಉದ್ದಿಮೆಗಳಿಗೆ ಸಂಬಂಧಿಸಿದಂತೆ ಆಯಾ ರಾಜ್ಯಗಳ ಉತ್ಪಾದನೆ, ಉತ್ಪಾದಕತ್ವ ಮತ್ತು ವಹವಾಟುಗಳ ಸೂಚ್ಯಂಕವನ್ನು ಸಿದ್ಧಪಡಿಸಲಾಗುತ್ತದೆ. ಆ ಸೂಚ್ಯಂಕದ ಆಧಾರದಲ್ಲಿ ರ್ಯಾಂಕ್ ನಿರ್ಧರಿಸಲಾಗುತ್ತದೆ’ ಎಂದು ಸರ್ಕಾರವು ಹೇಳಿದೆ.</p>.<p><strong>ಸಕ್ಕರೆ ಉದ್ದಿಮೆಗೆ ಕಾರ್ಯಪಡೆ:</strong>ಸಕ್ಕರೆ ಉದ್ದಿಮೆ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೀತಿ ಆಯೋಗವು ಕಾರ್ಯಪಡೆಯೊಂದನ್ನು ರಚಿಸಿದೆ.</p>.<p>ಸರ್ಕಾರಗಳ ಮೇಲೆಸಕ್ಕರೆ ಕಾರ್ಖಾನೆ, ಕಬ್ಬು ಬೆಳೆಗಾರರ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕಾರ್ಯಪಡೆ ರಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>