ಫಲಾನುಭವಿಗಳ ಬ್ಯಾಂಕ್ ಖಾತೆಗೆ ಎಷ್ಟು ಮೊತ್ತವನ್ನು ವರ್ಗಾಯಿಸಬೇಕು ಎಂಬುದರ ಕುರಿತು ಚರ್ಚಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ 1.35 ಕೋಟಿ ಮಹಿಳೆಯರಿಗೆ ಸ್ಮಾರ್ಟ್ಫೋನ್ ನೀಡುವುದಾಗಿ ಸಿಎಂ ಗೆಹ್ಲೋತ್ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದರು. ರಕ್ಷಾ ಬಂಧನದಂದು (ಆಗಸ್ಟ್ 30) ಕಾರ್ಯಕ್ರಮ ಆರಂಭವಾಗಲಿದ್ದು, ಸರ್ಕಾರವು ಹಂತ ಹಂತವಾಗಿ ಸ್ಮಾರ್ಟ್ಫೋನ್ಗಳನ್ನು ನೀಡಲಿದೆ ಎಂದು ಗೆಹ್ಲೋತ್ ಏಪ್ರಿಲ್ನಲ್ಲಿ ಹೇಳಿದ್ದರು.
ಈ ವಿಷಯದ ಕುರಿತು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಈಗ ಹಲವು ವಿಶೇಷಣಗಳನ್ನು ಒಳಗೊಂಡ ಬಗೆಬಗೆಯ ಫೋನ್ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಜನರು ಅವರ ಆಯ್ಕೆಯ ಫೋನ್ ಖರೀದಿಸಲು ಬಯಸುತ್ತಾರೆ. ಮಾರುಕಟ್ಟೆಯಲ್ಲಿ ನಿಮ್ಮ ಆಯ್ಕೆಯ ಫೋನ್ ನಿಮಗೆ ಸಿಗುತ್ತದೆ. ಸದ್ಯ ರಾಜ್ಯದಲ್ಲಿ ಹಣದುಬ್ಬರ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಅದರಂತೆಯೇ ಕೌಂಟರ್ಗಳನ್ನು ತೆರೆದು ಜನರ ಆಯ್ಕೆಯ ಫೋನ್ಗಳನ್ನು ನೀಡಲು ಸಾಧ್ಯವೇ ಎಂಬುದರ ಕುರಿತು ನಾವು ಕಂಪನಿಗಳೊಂದಿಗೂ ಮಾತನಾಡುತ್ತಿದ್ದೇವೆ. ಇನ್ನೊಂದೆಡೆ, ಫೋನ್ ವಿತರಿಸುವುದಕ್ಕೆ ಬದಲಾಗಿ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನಿಗದಿತ ಮೊತ್ತವನ್ನು ವರ್ಗಾಯಿಸಲು ಸರ್ಕಾರ ಚಿಂತಿಸುತ್ತಿದೆ’ ಎಂದೂ ಗೆಹ್ಲೋತ್ ಮಾಹಿತಿ ನೀಡಿದರು.
ಮಹಿಳೆಯರ ಸಬಲೀಕರಣಗೊಳಿಸುವ ಉದ್ದೇಶದಿಂದ ಸ್ಮಾರ್ಟ್ಫೋನ್ಗಳನ್ನು ಒದಗಿಸಲಾಗುತ್ತಿದೆ ಎಂದು ಗೆಹ್ಲೋತ್ ತಿಳಿಸಿದರು.