<p><strong>ನವದೆಹಲಿ: </strong>ಗಣ್ಯರಿಗೆ ಭದ್ರತೆ ಒದಗಿಸುವ ಕಾರ್ಯದಿಂದ ರಾಷ್ಟ್ರೀಯ ಭದ್ರತಾ ದಳದ (ಎನ್ಎಸ್ಜಿ) ಕಮಾಂಡೊಗಳನ್ನು ಸಂಪೂರ್ಣವಾಗಿ ವಾಪಸ್ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಎರಡು ದಶಕಗಳ ಬಳಿಕ ವಿಐಪಿ ಭದ್ರತಾ ಕಾರ್ಯಗಳಿಂದ ಬ್ಲ್ಯಾಕ್ ಕ್ಯಾಟ್ ಕಮಾಂಡೊಗಳನ್ನು ವಾಪಸ್ ಪಡೆಯಲಾಗುತ್ತಿದೆ.</p>.<p>ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಈ ಕಮಾಂಡೊಗಳು ಜೆಡ್ ಪ್ಲಸ್ ಶ್ರೇಣಿಯಿಂದ ಹಿಡಿದು ಇತರ 13 ಶ್ರೇಣಿಯ, ಹೆಚ್ಚಿನ ಅಪಾಯವಿರುವ ಗಣ್ಯರಿಗೆ ಭದ್ರತೆ ಒದಗಿಸುತ್ತಿವೆ. ಪ್ರತಿಯೊಬ್ಬ ಗಣ್ಯರ ಭದ್ರತೆಗೂ ಎರಡು ಡಜನ್ಗಳಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.</p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರ ಗಣ್ಯರ ಭದ್ರತಾ ಕಾರ್ಯವನ್ನು ಎನ್ಎಸ್ಜಿಯಿಂದ ಅರೆ ಸೇನಾ ಪಡೆಗಳಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಾಜಿ ಮುಖ್ಯಮಂತ್ರಿಗಳಾದ ಮಾಯಾವತಿ, ಮುಲಾಯಂ ಸಿಂಗ್, ಚಂದ್ರಬಾಬು ನಾಯ್ಡು, ಪ್ರಕಾಶ್ ಸಿಂಗ್ ಬಾದಲ್, ಮತ್ತು ಫಾರೂಕ್ ಅಬ್ದುಲ್ಲಾ, ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್, ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಎನ್ಎಸ್ಜಿ ಭದ್ರತೆ ಹೊಂದಿರುವ ಇತರ ಗಣ್ಯರಾಗಿದ್ದಾರೆ.</p>.<p>ಎನ್ಎಸ್ಜಿ ಕಮಾಂಡೊಗಳು ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಗಳಿಗೆ ಮರಳುವ ಅಗತ್ಯವಿದ್ದು, ಇದಕ್ಕಾಗಿ ಗಣ್ಯರ ಭದ್ರತಾ ಕಾರ್ಯಗಳಿಂದ ಅವರನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಸೋನಿಯಾ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ಪಿಜಿ (ವಿಶೇಷ ರಕ್ಷಣಾ ಪಡೆ) ಭದ್ರತೆಯನ್ನು ಈಚೆಗೆ ವಾಪಸ್ ಪಡೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಣ್ಯರಿಗೆ ಭದ್ರತೆ ಒದಗಿಸುವ ಕಾರ್ಯದಿಂದ ರಾಷ್ಟ್ರೀಯ ಭದ್ರತಾ ದಳದ (ಎನ್ಎಸ್ಜಿ) ಕಮಾಂಡೊಗಳನ್ನು ಸಂಪೂರ್ಣವಾಗಿ ವಾಪಸ್ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಎರಡು ದಶಕಗಳ ಬಳಿಕ ವಿಐಪಿ ಭದ್ರತಾ ಕಾರ್ಯಗಳಿಂದ ಬ್ಲ್ಯಾಕ್ ಕ್ಯಾಟ್ ಕಮಾಂಡೊಗಳನ್ನು ವಾಪಸ್ ಪಡೆಯಲಾಗುತ್ತಿದೆ.</p>.<p>ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಈ ಕಮಾಂಡೊಗಳು ಜೆಡ್ ಪ್ಲಸ್ ಶ್ರೇಣಿಯಿಂದ ಹಿಡಿದು ಇತರ 13 ಶ್ರೇಣಿಯ, ಹೆಚ್ಚಿನ ಅಪಾಯವಿರುವ ಗಣ್ಯರಿಗೆ ಭದ್ರತೆ ಒದಗಿಸುತ್ತಿವೆ. ಪ್ರತಿಯೊಬ್ಬ ಗಣ್ಯರ ಭದ್ರತೆಗೂ ಎರಡು ಡಜನ್ಗಳಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.</p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರ ಗಣ್ಯರ ಭದ್ರತಾ ಕಾರ್ಯವನ್ನು ಎನ್ಎಸ್ಜಿಯಿಂದ ಅರೆ ಸೇನಾ ಪಡೆಗಳಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಾಜಿ ಮುಖ್ಯಮಂತ್ರಿಗಳಾದ ಮಾಯಾವತಿ, ಮುಲಾಯಂ ಸಿಂಗ್, ಚಂದ್ರಬಾಬು ನಾಯ್ಡು, ಪ್ರಕಾಶ್ ಸಿಂಗ್ ಬಾದಲ್, ಮತ್ತು ಫಾರೂಕ್ ಅಬ್ದುಲ್ಲಾ, ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್, ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಎನ್ಎಸ್ಜಿ ಭದ್ರತೆ ಹೊಂದಿರುವ ಇತರ ಗಣ್ಯರಾಗಿದ್ದಾರೆ.</p>.<p>ಎನ್ಎಸ್ಜಿ ಕಮಾಂಡೊಗಳು ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಗಳಿಗೆ ಮರಳುವ ಅಗತ್ಯವಿದ್ದು, ಇದಕ್ಕಾಗಿ ಗಣ್ಯರ ಭದ್ರತಾ ಕಾರ್ಯಗಳಿಂದ ಅವರನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಸೋನಿಯಾ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ಪಿಜಿ (ವಿಶೇಷ ರಕ್ಷಣಾ ಪಡೆ) ಭದ್ರತೆಯನ್ನು ಈಚೆಗೆ ವಾಪಸ್ ಪಡೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>