<p><strong>ನವದೆಹಲಿ: </strong>ಸಮಾಜ ಕಲ್ಯಾಣ ಯೋಜನೆಗಳ ಸಹಾಯ ಪಡೆಯಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ವಿಶೇಷ ಗುರುತಿನ ಚೀಟಿ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿಯ (ಎನ್ಸಿಟಿಪಿ) ಸದಸ್ಯೆ ಮೀರಾ ಪರೀದಾ ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಿನಲ್ಲಿ ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿಯನ್ನು ರಚಿಸಿದೆ. ಈಚೆಗಷ್ಟೇ ಸಾಮಾಜಿಕ ನ್ಯಾಯ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆಯಲ್ಲಿ ನಡೆದಿದೆ.</p>.<p>ಈ ಸಭೆಯಲ್ಲಿ ಭಾಗವಹಿಸಿದ್ದ ಮೀರಾ, ‘ಸಭೆಯಲ್ಲಿ ಸಮುದಾಯದ ಮುಖ್ಯ ಬೇಡಿಕೆಯಾಗಿದ್ದ ವಿಶೇಷ ಗುರುತಿನ ಚೀಟಿ ರೂಪಿಸುವ ಕುರಿತು ಚರ್ಚಿಸಲಾಯಿತು. ಈ ಚೀಟಿಯನ್ನು ಸಮಾಜ ಕಲ್ಯಾಣ ಯೋಜನೆಗಳಿಗೆ ಜೋಡಿಸುವ (ಲಿಂಕ್) ಕುರಿತೂ ಚರ್ಚಿಸಲಾಯಿತು. ಆದರೆ, ಈ ಯೋಜನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ತಿಳಿಸಿದ್ದಾರೆ.</p>.<p>‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಪ್ರತ್ಯೇಕ ಮಂಡಳಿ ರಚಿಸಿದ ಮೊದಲ ದೇಶ ಭಾರತವಾಗಿದ್ದು, ಈ ಸಮುದಾಯಕ್ಕೆ ಅಂಟಿರುವ ಸಾಮಾಜಿಕ ಕಳಂಕವನ್ನು ನಿವಾರಣೆ ಮಾಡಿ, ಅವರನ್ನು ಅಭಿವೃದ್ದಿಯತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದೆ’ ಎಂದು ಓಡಿಶಾದ ಬಿಜೆಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮೀರಾ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಮಾಜ ಕಲ್ಯಾಣ ಯೋಜನೆಗಳ ಸಹಾಯ ಪಡೆಯಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ವಿಶೇಷ ಗುರುತಿನ ಚೀಟಿ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿಯ (ಎನ್ಸಿಟಿಪಿ) ಸದಸ್ಯೆ ಮೀರಾ ಪರೀದಾ ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಿನಲ್ಲಿ ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿಯನ್ನು ರಚಿಸಿದೆ. ಈಚೆಗಷ್ಟೇ ಸಾಮಾಜಿಕ ನ್ಯಾಯ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆಯಲ್ಲಿ ನಡೆದಿದೆ.</p>.<p>ಈ ಸಭೆಯಲ್ಲಿ ಭಾಗವಹಿಸಿದ್ದ ಮೀರಾ, ‘ಸಭೆಯಲ್ಲಿ ಸಮುದಾಯದ ಮುಖ್ಯ ಬೇಡಿಕೆಯಾಗಿದ್ದ ವಿಶೇಷ ಗುರುತಿನ ಚೀಟಿ ರೂಪಿಸುವ ಕುರಿತು ಚರ್ಚಿಸಲಾಯಿತು. ಈ ಚೀಟಿಯನ್ನು ಸಮಾಜ ಕಲ್ಯಾಣ ಯೋಜನೆಗಳಿಗೆ ಜೋಡಿಸುವ (ಲಿಂಕ್) ಕುರಿತೂ ಚರ್ಚಿಸಲಾಯಿತು. ಆದರೆ, ಈ ಯೋಜನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ತಿಳಿಸಿದ್ದಾರೆ.</p>.<p>‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಪ್ರತ್ಯೇಕ ಮಂಡಳಿ ರಚಿಸಿದ ಮೊದಲ ದೇಶ ಭಾರತವಾಗಿದ್ದು, ಈ ಸಮುದಾಯಕ್ಕೆ ಅಂಟಿರುವ ಸಾಮಾಜಿಕ ಕಳಂಕವನ್ನು ನಿವಾರಣೆ ಮಾಡಿ, ಅವರನ್ನು ಅಭಿವೃದ್ದಿಯತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದೆ’ ಎಂದು ಓಡಿಶಾದ ಬಿಜೆಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮೀರಾ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>