<p><strong>ನವದೆಹಲಿ</strong>: ಸಾಂಸ್ಥಿಕ ಮಧ್ಯಸ್ಥಿಕೆ ಪ್ರಕ್ರಿಯೆಗೆ ಉತ್ತೇಜನ ನೀಡುವ ಹಾಗೂ ಇಂತಹ ಪ್ರಕರಣಗಳಲ್ಲಿ ಕೋರ್ಟ್ನ ಮಧ್ಯಸ್ಥಿಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕರಡು ಮಸೂದೆಯೊಂದನ್ನು ರೂಪಿಸಿದ್ದು, ಇದರ ಬಗ್ಗೆ ಅಭಿಪ್ರಾಯಗಳನ್ನು ಆಹ್ವಾನಿಸಿದೆ.</p>.<p>‘ಮಧ್ಯಸ್ಥಿಕೆ ಮತ್ತು ಸಂಧಾನ (ತಿದ್ದುಪಡಿ) ಮಸೂದೆ–2024’ರ ಕರಡಿನ ಬಗ್ಗೆ ಕೇಂದ್ರ ಕಾನೂನು ಸಚಿವಾಲಯದ ಅಧೀನದಲ್ಲಿ ಕೆಲಸ ಮಾಡುವ ಕಾನೂನು ವ್ಯವಹಾರಗಳ ಇಲಾಖೆಯು ಪ್ರತಿಕ್ರಿಯೆ ಆಹ್ವಾನಿಸಿದೆ.</p>.<p>ಮಾಜಿ ಕಾನೂನು ಕಾರ್ಯದರ್ಶಿ ಟಿ.ಕೆ. ವಿಶ್ವನಾಥನ್ ನೇತೃತ್ವದ ತಜ್ಞರ ಸಮಿತಿಯು ಮಧ್ಯಸ್ಥಿಕೆ ಕ್ಷೇತ್ರದಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಕಾನೂನು ಸಚಿವಾಲಯಕ್ಕೆ ಶಿಫಾರಸು ಸಲ್ಲಿಸಿದ ನಂತರದಲ್ಲಿ ಈ ಮಸೂದೆ ಸಿದ್ಧವಾಗಿದೆ. ‘ತುರ್ತು ಮಧ್ಯಸ್ಥಿಕೆ’ ಎಂಬ ಪರಿಕಲ್ಪನೆಯನ್ನು ಕರಡು ಮಸೂದೆಯು ಒಳಗೊಂಡಿದೆ.</p>.<p>ಮಧ್ಯಸ್ಥಿಕೆ ಸಂಸ್ಥೆಗಳು, ಪೂರ್ಣ ಪ್ರಮಾಣದ ನ್ಯಾಯಮಂಡಳಿ ರಚಿಸುವ ಮೊದಲು ಮಧ್ಯಂತರ ಆದೇಶ ನೀಡಲು ‘ತುರ್ತು ಮಧ್ಯಸ್ಥಿಕೆದಾರ’ರನ್ನು ನೇಮಕ ಮಾಡಲು ಅವಕಾಶ ಇರುತ್ತದೆ ಎಂದು ಮಸೂದೆಯು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾಂಸ್ಥಿಕ ಮಧ್ಯಸ್ಥಿಕೆ ಪ್ರಕ್ರಿಯೆಗೆ ಉತ್ತೇಜನ ನೀಡುವ ಹಾಗೂ ಇಂತಹ ಪ್ರಕರಣಗಳಲ್ಲಿ ಕೋರ್ಟ್ನ ಮಧ್ಯಸ್ಥಿಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕರಡು ಮಸೂದೆಯೊಂದನ್ನು ರೂಪಿಸಿದ್ದು, ಇದರ ಬಗ್ಗೆ ಅಭಿಪ್ರಾಯಗಳನ್ನು ಆಹ್ವಾನಿಸಿದೆ.</p>.<p>‘ಮಧ್ಯಸ್ಥಿಕೆ ಮತ್ತು ಸಂಧಾನ (ತಿದ್ದುಪಡಿ) ಮಸೂದೆ–2024’ರ ಕರಡಿನ ಬಗ್ಗೆ ಕೇಂದ್ರ ಕಾನೂನು ಸಚಿವಾಲಯದ ಅಧೀನದಲ್ಲಿ ಕೆಲಸ ಮಾಡುವ ಕಾನೂನು ವ್ಯವಹಾರಗಳ ಇಲಾಖೆಯು ಪ್ರತಿಕ್ರಿಯೆ ಆಹ್ವಾನಿಸಿದೆ.</p>.<p>ಮಾಜಿ ಕಾನೂನು ಕಾರ್ಯದರ್ಶಿ ಟಿ.ಕೆ. ವಿಶ್ವನಾಥನ್ ನೇತೃತ್ವದ ತಜ್ಞರ ಸಮಿತಿಯು ಮಧ್ಯಸ್ಥಿಕೆ ಕ್ಷೇತ್ರದಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಕಾನೂನು ಸಚಿವಾಲಯಕ್ಕೆ ಶಿಫಾರಸು ಸಲ್ಲಿಸಿದ ನಂತರದಲ್ಲಿ ಈ ಮಸೂದೆ ಸಿದ್ಧವಾಗಿದೆ. ‘ತುರ್ತು ಮಧ್ಯಸ್ಥಿಕೆ’ ಎಂಬ ಪರಿಕಲ್ಪನೆಯನ್ನು ಕರಡು ಮಸೂದೆಯು ಒಳಗೊಂಡಿದೆ.</p>.<p>ಮಧ್ಯಸ್ಥಿಕೆ ಸಂಸ್ಥೆಗಳು, ಪೂರ್ಣ ಪ್ರಮಾಣದ ನ್ಯಾಯಮಂಡಳಿ ರಚಿಸುವ ಮೊದಲು ಮಧ್ಯಂತರ ಆದೇಶ ನೀಡಲು ‘ತುರ್ತು ಮಧ್ಯಸ್ಥಿಕೆದಾರ’ರನ್ನು ನೇಮಕ ಮಾಡಲು ಅವಕಾಶ ಇರುತ್ತದೆ ಎಂದು ಮಸೂದೆಯು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>